Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದನ ಕಳ್ಳತನದ ಸುಳ್ಳು ಆರೋಪದಲ್ಲಿ ನಕಲಿ...

ದನ ಕಳ್ಳತನದ ಸುಳ್ಳು ಆರೋಪದಲ್ಲಿ ನಕಲಿ ಎನ್‌ಕೌಂಟರ್‌ಗೆ ಯತ್ನ: ಗಂಗೊಳ್ಳಿ ಪೊಲೀಸರ ವಿರುದ್ಧ ಮುಹಮ್ಮದ್ ಇಬ್ರಾಹಿಂ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Jan 2022 9:19 PM IST
share
ದನ ಕಳ್ಳತನದ ಸುಳ್ಳು ಆರೋಪದಲ್ಲಿ ನಕಲಿ ಎನ್‌ಕೌಂಟರ್‌ಗೆ ಯತ್ನ: ಗಂಗೊಳ್ಳಿ ಪೊಲೀಸರ ವಿರುದ್ಧ ಮುಹಮ್ಮದ್ ಇಬ್ರಾಹಿಂ ಆರೋಪ

ಕುಂದಾಪುರ, ಜ.2: ದನ ಕಳ್ಳನತ ಸುಳ್ಳು ಆರೋಪ ಹೊರಿಸಿ ನನ್ನ ವಿರುದ್ಧ ಪ್ರಕರಣ ದಾಖಲಿಸಿರುವ ಮತ್ತು ನನ್ನನ್ನು ನಕಲಿ ಎನ್‌ಕೌಂಟರ್ ಮಾಡಿ ಕೊಲೆ ನಡೆಸಲು ಪ್ರಯತ್ನಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ನಂಜ ನಾಯ್ಕ ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗಂಗೊಳ್ಳಿ ನಿವಾಸಿ ಮುಹಮ್ಮದ್ ಇಬ್ರಾಹಿಂ ಆಗ್ರಹಿಸಿದ್ದಾರೆ.

ಕುಂದಾಪುರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 26ರಂದು ಸಂಜೆ 6 ಗಂಟೆ ಸುಮಾರಿಗೆ ನನ್ನ ಮನೆಯ ಬಳಿ ಎಸ್ಸೈ ನಂಜನಾಯ್ಕ ಹಾಗೂ ನಾಲ್ಕೈದು ಸಿಬ್ಬಂದಿ ಬಂದಿದ್ದು, ಮನೆಯಂಗಳದಲ್ಲಿ ಕಟ್ಟಿದ್ದ ದನದ ಕರು ಬಗ್ಗೆ ಪ್ರಶ್ನಿಸಿದರು. ನನ್ನ ಗೆಳೆಯ ಫ್ರಾನ್ಸಿಸ್ ನನಗೆ ನೀಡಿರುವ ಈ ಕರುವನ್ನು ಸಾಕಲು ತಂದಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದೆ. ಬಳಿಕ ಆ ಕರುವಿನ ಜೊತೆ ನನ್ನ ಫೋಟೋವನ್ನು ತೆಗೆದು ಅವರು ಮರಳಿದರು ಎಂದು ತಿಳಿಸಿದರು.

ಬಳಿಕ ಏಳು ಗಂಟೆ ಸುಮಾರಿಗೆ ನನ್ನನ್ನು ಠಾಣೆಗೆ ಕರೆಸಿ, ಧರ್ಮ ನಿಂಧನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದರು. ನನಗೆ ಕರು ನೀಡಿದ ಫ್ರಾನ್ಸಿಸ್‌ನನ್ನು ಕೂಡ ಠಾಣೆಗೆ ಕರೆಸಿದರು. ಈ ಕರು ಸಾಕಲು ಕಷ್ಟವಾಗುವ ಕಾರಣ ಇಬ್ರಾಹಿಂಗೆ ನಾನೇ ಉಚಿತವಾಗಿ ನೀಡಿದ್ದೇನೆ ಎಂದು ಫ್ರಾನ್ಸಿಸ್ ಹೇಳಿದರೂ ಅವರ ಮಾತನ್ನು ಕೇಳಲು ಸಿದ್ದರಿಲ್ಲದ ಪೊಲೀಸರು, ನಮ್ಮಿಬ್ಬರನ್ನು ಠಾಣೆಯಲ್ಲಿ ಕೂರಿಸಿದರು ಎಂದು ಅವರು ಹೇಳಿದರು.

ರಾತ್ರಿ 11 ಗಂಟೆ ವೇಳೆ ನನ್ನ ಮನೆಗೆ ಪೊಲೀಸರು ಹೋಗಿ ಬಾಗಿಲು ಬಡಿದು ಹೆದರಿಸಿ ಅಲ್ಲಿದ್ದ ಕರುವನ್ನು ಗಾಡಿಯಲ್ಲಿ ಹಾಕಿ ಠಾಣೆಗೆ ತಂದರು ಮತ್ತು ಫ್ರಾನ್ಸಿಸ್ ಅವರನ್ನು ಮನೆಗೆ ಕಳುಹಿಸಿ ನನ್ನನ್ನು ರಾತ್ರಿ ಇಡೀ ಠಾಣೆಯಲ್ಲೇ ಕೂರಿಸಿದರು. ಮರುದಿನ ಅಂದರೆ ಡಿ.27ರಂದು ಬೆಳಗ್ಗೆ 7.45ರ ಸುಮಾರಿಗೆ ನನ್ನನ್ನು ಜೀಪಿನಲ್ಲಿ ಕುಳ್ಳಿರಿಸಿ ಮಂಕಿ ಕ್ರಾಸ್ ಬಳಿ ಕರೆದುಕೊಂಡು ಹೋದರು. ಅಲ್ಲಿ ನನಗೆ ಜೀಪಿನಿಂದ ಇಳಿದು ಓಡಲು ಸೂಚಿಸಿದರು. ಅವಾಚ್ಯವಾಗಿ ಬೈದು ರಿವಾಲ್ವರನ್ನು ನನ್ನ ತಲೆಗೆ ಇಟ್ಟು ಓಡುವಂತೆ ಗದರಿಸಿದರು. ಆದರೆ ನಾನು ಓಡಿಲ್ಲ ಎಂದು ಅವರು ಆರೋಪಿಸಿದರು.

ಅಲ್ಲಿಂದ ಮುಂದೆ ಕರೆದುಕೊಂಡು ಹೋಗಿ ಅಲ್ಲಿಗೆ ಫ್ರಾನ್ಸಿಸ್‌ನನ್ನು ಠಾಣೆಯಲ್ಲಿದ್ದ ಕರುವನ್ನು ಹಿಡಿದುಕೊಂಡು ಬರುವಂತೆ ಪೊಲೀಸರು ತಿಳಿಸಿದರು. ಫ್ರಾನ್ಸಿಸ್ ಕರುವಿನೊಂದಿಗೆ ಅಲ್ಲಿಗೆ ಬಂದಂತಹ ಸಂದರ್ಭದಲ್ಲಿ ಪೊಲೀಸರು ಇಬ್ಬರು ಬಜರಂಗದಳದ ಕಾರ್ಯಕರ್ತರನ್ನು ಕೂಡ ಅಲ್ಲಿಗೆ ಕರೆಸಿದರು. ಅವರು ಚೀಲದಲ್ಲಿ ತಂದಿದ್ದ ಮಚ್ಚು ತಲವಾರು ಹಾಗೂ ಇನ್ನಿತರ ಆಯುಧಗಳನ್ನು ಅಲ್ಲಿ ಹಾಕಿ ಫೋಟೋವನ್ನು ಕ್ಲಿಕ್ಕಿಸಿ ನಾನು ಆ ಕರುವನ್ನು ಕದ್ದು ತಂದಿದ್ದೇನೆ ಎಂಬ ರೀತಿಯಲ್ಲಿ ಬಿಂಬಿಸಲಾಯಿತು. ಬಳಿಕ ಸ್ಥಳ ಮಹಜರು ಮಾಡಿ ನನ್ನನ್ನು ಠಾಣೆಗೆ ಕರೆದುಕೊಂಡು ಹೋಗಿ, ಸಂಜೆ ನ್ಯಾಯಾಧೀಶರ ಮುಂದೆ ಹಾಜರು ಪಡೆಸಿದರು. ಇದೀಗ ನಾನು ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಿಡುಗಡೆ ಹೊಂದಿದ್ದೇನೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X