Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗರಿಕ ಸೇವೆ ಐಸಿಎಎಸ್‌ ನಿಂದ ಕೆಲವು...

ನಾಗರಿಕ ಸೇವೆ ಐಸಿಎಎಸ್‌ ನಿಂದ ಕೆಲವು ವಿಕಲಾಂಗರನ್ನು ಹೊರಗಿಡುವಂತೆ ತಜ್ಞರ ಸಮಿತಿಯ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ2 Jan 2022 11:08 PM IST
share
ನಾಗರಿಕ ಸೇವೆ ಐಸಿಎಎಸ್‌ ನಿಂದ ಕೆಲವು ವಿಕಲಾಂಗರನ್ನು ಹೊರಗಿಡುವಂತೆ ತಜ್ಞರ ಸಮಿತಿಯ ಶಿಫಾರಸು

ಹೊಸದಿಲ್ಲಿ,ಜ.2: ಸ್ನಾಯುಕ್ಷಯ, ಆಟಿಸಂ ಅಥವಾ ಸ್ವಲೀನತೆ, ಕಲಿಕೆಯಲ್ಲಿ ಕಷ್ಟವಾಗುವಿಕೆ ಅಥವಾ ಬೌದ್ಧಿಕ ಅಸಾಮರ್ಥ್ಯ ಮತ್ತು ಮಾನಸಿಕ ಅಸ್ವಸ್ಥತೆಯಂತಹ ಕೆಲವು ವೈಕಲ್ಯಗಳನ್ನು ಹೊಂದಿರುವ ವ್ಯಕ್ತಿಗಳನ್ನು ಇಂಡಿಯನ್ ಸಿವಿಲ್ ಅಕೌಂಟ್ಸ್ ಸೇವೆ (ಐಸಿಎಎಸ್)ಯಿಂದ ಹೊರಗಿರಿಸಬೇಕು ಎಂದು ಲೆಕ್ಕಪತ್ರಗಳ ಮಹಾ ನಿಯಂತ್ರಕರು(ಸಿಜಿಎ) ನೇಮಕಗೊಳಿಸಿದ್ದ ತಜ್ಞರ ಸಮಿತಿಯು ಶಿಫಾರಸು ಮಾಡಿದೆ.

ಐಸಿಎಎಸ್ ಕೇಂದ್ರ ವಿತ್ತ ಸಚಿವಾಲಯದ ವೆಚ್ಚ ಇಲಾಖೆಯಡಿ ಕಾರ್ಯ ನಿರ್ವಹಿಸುವ ‘ಗ್ರೂಪ್ ಎ’ ಹುದ್ದೆಯಾಗಿದೆ.

ಸಹಾಯಕ ಸಿಜಿಎ ಚಾರು ಗುಪ್ತಾ ಅವರು ಡಿ.24ರಂದು ಸಮಿತಿಯ ಶಿಫಾರಸುಗಳನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅವಗಾಹನೆಗೆ ಸಲ್ಲಿಸಿದ್ದಾರೆ. ಇಂತಹ ವಿಕಲಾಂಗ ವ್ಯಕ್ತಿಗಳನ್ನು ಐಸಿಎಎಸ್ ಸೇವೆಯಿಂದ ಹೊರಗಿರಿಸುವುದರ ವಿರುದ್ಧ ವೈದ್ಯರು ಮತ್ತು ಮಾನಸಿಕ ಆರೋಗ್ಯ ತಜ್ಞರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಶಿಫಾರಸು ‘ಸಾಮರ್ಥ್ಯ’ವನ್ನು ಮಾತ್ರ ಉತ್ತೇಜಿಸುತ್ತದೆ ಮತ್ತು ದೈಹಿಕ ವೈಕಲ್ಯಗಳು ಹಾಗೂ ಮಾನಸಿಕ ಅಸ್ವಸ್ಥತೆಗಳನ್ನು ಹೊಂದಿರುವ ಜನರ ವಿರುದ್ಧ ತಾರತಮ್ಯದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಸಿಜಿಎ ಎಂ.ಶ್ರೀಧರನ್,ಜಂಟಿ ಸಿಜಿಎ ಸುಮನ ಬಾಲಾ,ಸಹಾಯಕ ಸಿಜಿಎ ವಿಮಲಾ ನವಾರಿಯಾ,ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆಯ ಮಾಜಿ ನಿರ್ದೇಶಕ ಕೆ.ವಿ.ಎಸ್.ರಾವ್ ಮತ್ತು ದಿಲ್ಲಿಯ ಪಿಜಿಐಎಂಇಆರ್ ಆರ್ಎಂಎಲ್ ಆಸ್ಪತ್ರೆಯ ಮನಃಶಾಸ್ತ್ರಜ್ಞ ಡಾ.ಆರ್.ಪಿ.ಬೇನಿವಾಲ್ ಅವರನ್ನೊಳಗೊಂಡ ತಜ್ಞರ ಸಮಿತಿಯು ಜು.2ರಂದು ಸಭೆ ಸೇರಿ ವಿಭಾಗ,ಕ್ರಿಯಾತ್ಮಕ ವರ್ಗೀಕರಣ ಮತ್ತು ಭೌತಿಕ ಅವಶ್ಯಕತೆ ಇತ್ಯಾದಿಗಳನ್ನು ಪರಿಶೀಲಿಸಿದ ಬಳಿಕ ತನ್ನ ಶಿಫಾರಸುಗಳನ್ನು ಸಲ್ಲಿಸಿತ್ತು.

 ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯಡಿ ಅದರ ಅನುಷ್ಠಾನಕ್ಕಾಗಿ ಗುರುತಿಸಲಾದ ಹುದ್ದೆಗಳ ಪುನರ್ಪರಿಶೀಲನೆಗಾಗಿ ಸಿಜಿಎ ಪ್ರತಿ ಮೂರು ವರ್ಷಗಳಿಗೆ ತಜ್ಞರ ಸಮಿತಿಯನ್ನು ರಚಿಸುವುದು ಅಗತ್ಯವಾಗಿದೆ.

ಸರ್ವೋಚ್ಚ ನ್ಯಾಯಾಲಯವು ಇತ್ತೀಚಿಗೆ ಬೈಪೋಲಾರ್ ಡಿಸಾರ್ಡರ್ ಅಥವಾ ದ್ವಿಧ್ರುವಿ ಅಸ್ವಸ್ಥತೆ ಸಮಸ್ಯೆಯನ್ನು ಹೊಂದಿರುವ ವ್ಯಕ್ತಿಯನ್ನು ದಿಲ್ಲಿಯಲ್ಲಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಕಗೊಳಿಸಿರುವುದನ್ನು ಉಲ್ಲೇಖಿಸಿದ ಸ್ವತಃ ಅಂಗವೈಕಲ್ಯ ಹೊಂದಿರುವ ದಿಲ್ಲಿಯ ಜಿಟಿಬಿ ಆಸ್ಪತ್ರೆ ಫಿಜಿಯೋಲಾಜಿಸ್ಟ್ ಡಾ.ಸತೇಂದ್ರ ಸಿಂಗ್ ಅವರು,‘ಒಂದೆಡೆ ಇಂತಹ ಪ್ರಗತಿಪರ ಹೆಜ್ಜೆಗಳನ್ನು ನಾವಿಡುತ್ತಿದ್ದೇವೆ ಮತ್ತು ಇನ್ನೊಂದೆಡೆ ಇಂತಹ ವೈಕಲ್ಯಗಳನ್ನು ಹೊಂದಿರುವವರನ್ನು ನಾಗರಿಕ ಸೇವೆಗಳಿಂದ ಹೊರಗಿಡುತ್ತಿದ್ದೇವೆ ’ ಎಂದು ಕಳವಳವನ್ನು ವ್ಯಕ್ತಪಡಿಸಿದರು.

‘ಸಮಂಜಸವಾದ ಹೊಂದಾಣಿಕೆ ಎನ್ನುವುದೂ ಒಂದಿದ್ದು,ಇದು ವ್ಯಕ್ತಿಯ ಅಂಗವೈಕಲ್ಯಗಳ ಕೊರತೆಯನ್ನು ಸರಿದೂಗಿಸುತ್ತದೆ. ಉದಾಹರಣೆಗೆ ನನ್ನನ್ನೇ ತೆಗೆದುಕೊಳ್ಳಿ. ನಾನು ನಡೆದಾಡಲು ಕ್ಯಾಲಿಪರ್ಗಳನ್ನು ಬಳಸುತ್ತಿದ್ದೇನೆ. ಕ್ಯಾಲಿಪರ್ ನನ್ನ ಸಹಾಯಕ ಸಾಧನವಾಗಿದ್ದು,ಅವುಗಳ ನೆರವಿನಿಂದ ವೈದ್ಯನಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ. ಇದೇ ರೀತಿ ಸ್ನಾಯುಕ್ಷಯವನ್ನು ಹೊಂದಿರುವ ವ್ಯಕ್ತಿಯು ತನ್ನ ಹುದ್ದೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯಕ ಸಾಧನವೊಂದನ್ನು ಬಳಸಬಹುದು ’ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X