Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಕೆದಾಟು ಯೋಜನೆ ಮೈಸೂರು- ಬೆಂಗಳೂರು...

ಮೇಕೆದಾಟು ಯೋಜನೆ ಮೈಸೂರು- ಬೆಂಗಳೂರು ಜನತೆಯ ಹಕ್ಕು: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Jan 2022 11:24 AM IST
share
ಮೇಕೆದಾಟು ಯೋಜನೆ ಮೈಸೂರು- ಬೆಂಗಳೂರು ಜನತೆಯ ಹಕ್ಕು: ಡಿ.ಕೆ.ಶಿವಕುಮಾರ್

ಮೈಸೂರು, ಜ.3: ರಾಜ್ಯದ ಹಿತ, ಕುಡಿಯುವ ನೀರು, ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ನಾವು ಮೇಕೆದಾಟು ಹೋರಾಟ ಮಾಡುತ್ತಿದ್ದೇವೆ. ಈ ಯೋಜನೆ ಮೈಸೂರು ಹಾಗೂ ಬೆಂಗಳೂರು ಜನತೆಯ ಹಕ್ಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಮೇಕೆದಾಟು ಪಾದಯಾತ್ರೆಗೆ ಕೋವಿಡ್ ಮಾರ್ಗಸೂಚಿ ಅಡ್ಡಿಯಾದೀತೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಎಲ್.ಕೆ.ಅಡ್ವಾಣಿ ರಥಯಾತ್ರೆ ಮಾಡಿದರು. ಈ ಹಿಂದೆ ದೇವೇಗೌಡರು ಅನೇಕ ಯಾತ್ರೆ ಮಾಡಿದ್ದಾರೆ. ಅದನ್ನೆಲ್ಲ ನೀವು ಏನೆಂದು ಕರೆಯುತ್ತೀರಿ. ಕುಮಾರಸ್ವಾಮಿ ಹೋರಾಟ ಮಾಡುವುದಾಗಿ ಹೇಳಿದ್ದರು. ಅದಕ್ಕೆ ಏನನ್ನುತ್ತೀರಿ? ಯಡಿಯೂರಪ್ಪ ಹೋರಾಟ ಮಾಡಿದ್ದರು, ಮೊನ್ನೆ ನೂತನ ಕೇಂದ್ರ ಸಚಿವರು ಕೋವಿಡ್ ಸಮಯದಲ್ಲೇ ಯಾತ್ರೆ ಮಾಡಿದರು. ಅದಕ್ಕೆ ಅವಕಾಶ ಇತ್ತೇ? ಇದೆಲ್ಲವನ್ನು ನಿಮ್ಮ ವಿವೇಚನೆಗೆ ಬಿಡುತ್ತೇವೆ ಎಂದರು.

ಯಾವುದೇ ಶುಭ ಕಾರ್ಯಕ್ರಮ ಮಾಡುವ ಮುನ್ನ ದೇವಿಯ ಪ್ರಾರ್ಥನೆ ಮಾಡುವುದು ಸಂಪ್ರದಾಯ. ಎಲ್ಲ ಅಡಚಣೆಗಳನ್ನು ಸಂಹಾರ ಮಾಡುವ ಶಕ್ತಿ ಈ ದೇವಿಗೆ ಇದೆ. ತಾಯಿ ಚಾಮುಂಡೇಶ್ವರಿಯನ್ನು ನಂಬಿರುವವರು ನಾವು. ಈ ಹಿನ್ನೆಲೆಯಲ್ಲಿ ಇಂದಿಲ್ಲಿ ಪೂಜೆ ಸಲ್ಲಿಸಿದ್ದೇನೆ ಎಂದರು.

ಚಾಮರಾಜನಗರ ನಗರ ಕೂಡ ಮೈಸೂರು ಜಿಲ್ಲೆ ಭಾಗ. ಮತ್ತೊಂದು ರಾಮನಗರ ಬೆಂಗಳೂರಿನ ಒಂದು ಭಾಗ. ಮೇಕೆದಾಟು ಒಂದು ದಡ ಮೈಸೂರು ಜಿಲ್ಲೆಯಾದರೆ, ಮತ್ತೊಂದು ದಡ ಬೆಂಗಳೂರಿಗೆ ಸೇರಿದೆ. ಅದರ ಮಧ್ಯೆ ಕಾವೇರಿ ತಾಯಿ ಹರಿಯುತ್ತಿದ್ದಾಳೆ. ಈ ಯೋಜನೆ ಮೈಸೂರು ಹಾಗೂ ಬೆಂಗಳೂರು ಜನತೆಯ ಹಕ್ಕು. ಮೈಸೂರು ಬೆಂಗಳೂರು ಸೇರಿಸುವ ಸ್ಥಳವೇ ಸಂಗಮ ಹಾಗೂ ಮೇಕೆದಾಟು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X