Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್...

15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಚಾಲನೆ

ಕೋವಿಡ್ ತೊಲಗಿಸಲು ಪಣ ತೊಡೋಣ: ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ3 Jan 2022 11:45 AM IST
share
15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು, ಜ.3: ರಾಜ್ಯದಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, ಆರೋಗ್ಯಭರಿತ  ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ಮಾಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೊಡೋಣ ಎಂದು ಕರೆ ನೀಡಿದರು.

ಬಿ.ಎಸ್.ಯಡಿಯೂರಪ್ಪರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್ ನ್ನು ನಿಯಂತ್ರಣ ಮಾಡಲಾಯಿತು. ಔಷಧಿ, ಬೆಡ್, ಆಕ್ಸಿಜನ್, ಸಮಸ್ಯೆಗಳನ್ನು ನಿಭಾಯಿಸಿ, ಕರ್ನಾಟಕವನ್ನು ಸುರಕ್ಷಿತ ರಾಜ್ಯ ವನ್ನಾಗಿಸಲು  ಅವರು ತೆಗೆದುಕೊಂಡ ಕ್ರಮಗಳು ಕಾರಣ ಎಂದರು.

ನಮ್ಮ ಸರ್ಕಾರ ಕೋವಿಡ್ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಹೀಗಾಗಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೋವಿಡ್ ಕಡಿಮೆ ಇದೆ. ಸೂಕ್ತ ಕ್ರಮಗಳನ್ನು ತೆಗೆದುಕೊಂಡ ಕಾರಣ ಇದನ್ನು ಸಾಧಿಸಲಾಗಿದೆ. ವೈಜ್ಞಾನಿಕ ಚಿಂತನೆ ಮಾಡಬೇಕು. ಸರಿಯಾದ ಕಾರ್ಯಸೂತ್ರ ರೂಪಿಸಿ,ಜನರನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು. ಆರೋಗ್ಯ ಮೂಲ ಸೌಕರ್ಯಗಳನ್ನು ಸಿದ್ಧಗೊಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡುತ್ತಿದೆ ಎಂದರು.

ಕೋವಿಡ್ ನಿಯಂತ್ರಣ ಸಾಧಿಸಲು ನೇರವಾದ ಎಲ್ಲಾ ಕೋವಿಡ್ ಸೇನಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿ ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯರು, ಇಲಾಖಾ ಮುಖ್ಯಸ್ಥರ ಪರಿಶ್ರಮದಿಂದ ಈ ಕೆಲಸವಾಗಿದೆ. ನಗರ ಪ್ರದೇಶದಲ್ಲಿ  ನಮ್ಮ ನಗರಾಭಿವೃದ್ಧಿ ಸಚಿವರು  ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಕೋವಿಡ್ ಹರಡದಿರಲು ಗಂಭೀರ ಯೋಜನೆ: ಇದರಿಂದಾಗಿ ಆರೋಗ್ಯ ಇಲಾಖೆಯಲ್ಲಿ  ಆಮೂಲಾಗ್ರ ಬದಲಾವಣೆ ತರಲಾಗಿದ್ದು,  ತಳಮಟ್ಟದಲ್ಲಿ  ಆರೋಗ್ಯ ಮೂಲಸೌಕರ್ಯ ಹೆಚ್ಚಳವಾಗಿದೆ. ಮೂರನೇ ಅಲೆ ಎಂದು ಬಿಂಬಿತವಾಗಿರುವ ಒಮೈಕ್ರಾನ್ ನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಲು ಗಡಿ ಭದ್ರತೆ, ಆರ್.ಟಿ.ಪಿ.ಸಿ.ಆರ್ ಕಡ್ಡಾಯ, ಎರಡು ಡೋಸ್ ಲಸಿಕೆಯಾಗಿರುವ ಬಗ್ಗೆ ಪರಿಶೀಲನೆ, ಸಂಪರ್ಕ ಪತ್ತೆ ಮಾಡುವ ಮೂಲಕ ಕ್ರಮ ಕೈಗೊಂಡಿದೆ. ಒಂದು ವಾರದಲ್ಲಿ ಪ್ರಕರಣಗಳು ಉಲ್ಬಣಗೊಂಡಿದ್ದು, ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಇದನ್ನು ವಿಭಿನ್ನವಾಗಿ ನಿಭಾಯಿಸಬೇಕಿದೆ. ಬೆಳೆಯುತ್ತಿರುವ ಆರ್ಥಿಕತೆಯನ್ನು ಗಮನಿಸಿ, ಕೋವಿಡ್ ಹರಡದಂತೆ ಮುನ್ನಡೆಯಬೇಕಿದೆ. ಈ ನಿಟ್ಟಿನಲ್ಲಿ ಗಂಭೀರ ಯೋಜನೆಗಳನ್ನು ರೂಪಿಸಲಾಗುವುದು. ಇದಕ್ಕೆ ಜನರ ಸಹಕಾರ ಅಗತ್ಯ. ಕರ್ನಾಟಕದ ಮಹಾಜನತೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಮನವಿ ಮುಖ್ಯಮಂತ್ರಿ ಮಾಡಿದರು.

ಲಸಿಕೆ ಅಭಿಯಾನಕ್ಕೆ ಸಹಕರಿಸಿ: 15- 18 ವರ್ಷದ ಮಕ್ಕಳ ಆರೋಗ್ಯ ಬಹಳ  ಮುಖ್ಯ. ರಾಜ್ಯದ್ಯಂತ ಇಂದು 4.41 ಲಕ್ಷ  ಮಕ್ಕಳಿಗೆ  ಹಾಗೂ ಬೆಂಗಳೂರಿನಲ್ಲಿ 30 ಸಾವಿರ  ಲಸಿಕೆಗಳನ್ನು ನೀಡಲಾಗುತ್ತಿದೆ. ಎರಡನೇ ಡೋಸ್ ನ್ನು 28 ದಿನಗಳ ನಂತರ ನೀಡಲಾಗುವುದು. ಜನವರಿ 10ರ ನಂತರ   60 ವರ್ಷ ಮೇಲ್ಪಟ್ಟವರಿಗೆ  ಮತ್ತು ಕೋ- ಮಾರ್ಬಿಡಿಟಿ ಇರುವವರಿಗೆ ಲಸಿಕೆ ನೀಡಲಾಗುವುದು. ಕೋವಿಡ್ ವಿರುದ್ಧ ಸುರಕ್ಷಾ ಚಕ್ರವನ್ನು ಕನ್ನಡಿಗರಿಗೆ, ವಿಶೇಷವಾಗಿ ಮಕ್ಕಳಿಗೆ ನೀಡಬೇಕು. ಅದಕ್ಕೆ ಪೋಷಕರು,ಮಕ್ಕಳು,  ಶಿಕ್ಷಕರೆಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನಮಂತ್ರಿ ಕ್ರಮ ವಿಶ್ವಕ್ಕೆ ಮಾದರಿ:  ಕರೋನಾ ಬಗ್ಗೆ ಏನೂ ತಿಳಿಯದಿದ್ದ ಸಂದರ್ಭದಲ್ಲಿ  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅದನ್ನು ಮುಂಚೂಣಿಯಲ್ಲಿ ನಿಂತು ಅದು ಒಡ್ಡಿದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ವಿ.ಸೋಮಣ್ಣ, ಡಾ.ಕೆ.ಸುಧಾಕರ, ಬೈರತಿ ಬಸವರಾಜ, ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X