Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು: ಬ್ಯಾರಿ ಅಕಾಡಮಿಯ ನೂತನ...

ತೊಕ್ಕೊಟ್ಟು: ಬ್ಯಾರಿ ಅಕಾಡಮಿಯ ನೂತನ ಕಚೇರಿಗೆ ಶಿಲಾನ್ಯಾಸ

ಬ್ಯಾರಿ ಭವನ ನಿರ್ಮಾಣ ಯೋಜನೆ ಕೈಬಿಟ್ಟ ಅಕಾಡಮಿ

ವಾರ್ತಾಭಾರತಿವಾರ್ತಾಭಾರತಿ3 Jan 2022 2:21 PM IST
share
ತೊಕ್ಕೊಟ್ಟು: ಬ್ಯಾರಿ ಅಕಾಡಮಿಯ ನೂತನ ಕಚೇರಿಗೆ ಶಿಲಾನ್ಯಾಸ

ಮಂಗಳೂರು, ಜ.3: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ನೂತನ ಕಚೇರಿಗೆ ಶಿಲಾನ್ಯಾಸ ಕಾರ್ಯಕ್ರಮವು ಸೋಮವಾರ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ನಡೆಯಿತು.

ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಡೆಯುತ್ತಿರುವ ಕಾಮಗಾರಿಯ ಶಿಲಾನ್ಯಾಸವನ್ನು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ತುಳು, ಕೊಂಕಣಿ, ಕೊಡವ, ಅರೆಭಾಷೆ ಅಕಾಡಮಿಗಳಿಗೆ ಭವನಗಳನ್ನು ಸರಕಾರ ನೀಡಿದಂತೆ ಯಾವುದೇ ತಾರತಮ್ಯ ತೋರದೆ ಬ್ಯಾರಿ ಅಕಾಡಮಿಗೂ ಭವನ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿ 6 ಕೋ.ರೂ.ಬಿಡುಗಡೆ ಮಾಡಿತ್ತು. ಇದೀಗ ಶಿಲಾನ್ಯಾಸ ನಡೆದ ಅಣತಿ ದೂರದಲ್ಲಿ ಅಬ್ಬಕ್ಕ ಭವನ ನಿರ್ಮಾಣವಾಗಲಿರುವುದರಿಂದ ಎರಡು ಭವನ ಜೊತೆಯಾಗಿರುವುದು ಬೇಡ ಎಂದು ಕೆಲವು ವ್ಯಕ್ತಿಗಳು ಹಾಗೂ ಸಂಘಟನೆಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಅವರ ಭಾವನೆಯನ್ನು ಗೌರವಿಸಿಕೊಂಡು ಭವನ ನಿರ್ಮಾಣದ ಉದ್ದೇಶವನ್ನು ಕೈ ಬಿಟ್ಟು, ಬಿಡುಗಡೆಯಾದ 6 ಕೋ.ರೂ. ಪೈಕಿ 3 ಕೋ.ರೂ. ವೆಚ್ಚದ ತಳಮಟ್ಟದಲ್ಲಿ ವಾಹನ ನಿಲುಗಡೆ ಹಾಗೂ ಒಂದನೇ ಮಹಡಿಯಲ್ಲಿ ಅಕಾಡಮಿಗೆ ಸರಕಾರಿ ಕಚೇರಿಯನ್ನು ಮಾತ್ರ ನಿರ್ಮಾಣ ಮಾಡುವ ಬಗ್ಗೆ ಯೋಚಿಸಿ ಹೊಸ ನಕ್ಷೆ ವಿನ್ಯಾಸಗೊಳಿಸಿ ಕಾಮಗಾರಿ ಆರಂಭಿಸಲು ಇಲಾಖೆಯು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದರು.

ಈ ಕಟ್ಟಡದಲ್ಲಿ 2 ಸಾವಿರ ಚ.ಅಡಿಯ ಪೆರ್ಮನ್ನೂರು ಗ್ರಾಮಕರಣಿಕರ ಮತ್ತು ಸರ್ವೇಯರ್ ಕಚೇರಿಯು ನಿರ್ಮಾಣವಾಗಲಿದೆ. ಇಲ್ಲಿ ಯಾವುದೇ ಭವನ ನಿರ್ಮಾಣವಾಗದೆ ಕೇವಲ ಸರಕಾರಿ ಕಚೇರಿ ನಿರ್ಮಾಣವಾಗುವುದಾದರೆ ತಮ್ಮ ಯಾವುದೇ ಅಭ್ಯಂತರವಿಲ್ಲ ಎಂಬ ಸಂಘಟನೆಯ ಅಭಿಪ್ರಾಯಕ್ಕೆ ಪೂರಕವಾಗಿ ಶಿಲಾನ್ಯಾಸ ನೆರವೇರಿಸಿದ್ದು ಗೊಂದಲ ಉಂಟಾಗದಿರಲಿ ಎಂಬ ಕಾರಣಕ್ಕಾಗಿ ಹಿಂದೂ ಧರ್ಮದ ಅರ್ಚಕರ ಮೂಲಕ ಭೂಮಿ ಪೂಜೆ ಹಾಗೂ ಇಸ್ಲಾಂ ಧರ್ಮದ ಪ್ರಕಾರ ದುಆವನ್ನು ಜಂಟಿಯಾಗಿ ನಡೆಸಲಾಯಿತು ಎಂದು ರಹೀಂ ಉಚ್ಚಿಲ್ ತಿಳಿಸಿದರು.

ಅಕಾಡಮಿಯ ನೂತನ ಕಚೇರಿಯು ಹಜ್ ಮತ್ತು ವಕ್ಫ್ ಇಲಾಖೆ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕಟ್ಟಡ ಇದಾಗಿದ್ದು, ಈ ಕಚೇರಿಯಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ ಎಂದು ರಹೀಂ ಉಚ್ಚಿಲ್ ಸ್ಪಷ್ಟಪಡಿಸಿದರು,

ತಿರುಮಲೇಶ್ ಭಟ್ ಭೂಮಿ ಪೂಜೆ ನೆರವೇರಿಸಿದರು. ಸೈಯದ್ ಮುಸ್ತಫಾ ತಂಙಳ್ ದುಆಗೈದರು. ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ಕರ್ನಾಟಕ ಗೃಹ ಮಂಡಳಿಯ ಇಂಜಿನಿಯರ್ ವಿಜಯ್ ಕುಮಾರ್ ವಂದಿಸಿದರು. ಗುತ್ತಿಗೆದಾರ ಪ್ರಭಾಕರ್ ಯೆಯ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X