Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರಗರ ದೌರ್ಜನ್ಯದ ಹಿಂದಿನ ಕಾಣದ ಕೈಗಳ...

ಕೊರಗರ ದೌರ್ಜನ್ಯದ ಹಿಂದಿನ ಕಾಣದ ಕೈಗಳ ಕುರಿತು ತನಿಖೆಗೆ ಶ್ರೀಧರ್ ನಾಡ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Jan 2022 7:16 PM IST
share
ಕೊರಗರ ದೌರ್ಜನ್ಯದ ಹಿಂದಿನ ಕಾಣದ ಕೈಗಳ ಕುರಿತು ತನಿಖೆಗೆ ಶ್ರೀಧರ್ ನಾಡ ಆಗ್ರಹ

ಕುಂದಾಪುರ, ಜ.3: ಕೋಟ ಆದಿವಾಸಿ ಕೊರಗ ಸಮುದಾಯದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಸಂಘಟನಾ ಸಮಿತಿಯ ನೇತೃತ್ವದಲ್ಲಿ ಕುಂದಾಪುರ ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನಾ ಪ್ರದರ್ಶನ ಹಾಗೂ ಹಕ್ಕೊತ್ತಾಯವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಶ್ರೀಧರ್ ನಾಡ, ಕಳೆದ ಹಲವು ದಶಕಗಳಿಂದ ಕೊರಗ ಸಮುದಾಯದ ಜನಸಂಖ್ಯೆ ಅತ್ಯಂತ ಗಂಭೀರ ಸ್ಥಿತಿಯಲ್ಲಿ ಕಡಿಮೆ ಆಗುತ್ತಿದೆ. ಸಮುದಾಯ ವಿನಾಶದ ಅಂಚಿಗೆ ಸರಿದಿದೆ. ಸಮುದಾಯದ ವಿನಾಶದೊಂದಿಗೆ ಭಾಷೆ, ಬದುಕು, ಕಲೆ, ಸಂಸ್ಕೃತಿ ನಾಶವಾಗಲಿದೆ. ಈಗಾಗಲೇ ಕೊರಗ ಸಮುದಾಯದಲ್ಲಿ ಕೇವಲ ನಾಲ್ಕು ಸಾವಿರ ಜನ ಮಾತ್ರ ಕೊರಗ ಭಾಷೆಯನ್ನು ಮಾತನಾಡುತ್ತಾರೆ ಎಂದು ತಿಳಿಸಿದರು.

ಕೇಂದ್ರ ಸರಕಾರ ಕೊರಗ ಸಮುದಾಯವನ್ನು ಪಿ.ವಿ.ಟಿ.ಜೆ ಸಮುದಾಯದ ಪಟ್ಟಿಗೆ ಸೇರಿಸಿದೆ. ಅಂದರೆ ಅತ್ಯಂತ ಅಂಚಿಗೆ ತಳ್ಳಲ್ಪಟ, ಧಮನಕೆ ಒಳಾಗದ ಸಮುದಾಯವೆಂದು ಸರಕಾರವೇ ಗುರುತಿಸಿದೆ. ಅಂತಹ ಸಮುದಾಯವನ್ನು ಆಡಳಿತ ವ್ಯವಸ್ಥೆ ಉಳಿಸಿ ಬೆಳಸಲು ನಿರಂತರವಾಗಿ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಬದಲು ಆಡಳಿತವೆ ಅವರ ಮೇಲೆ ದೌರ್ಜನ್ಯ ನಡೆಸಿರುವುದು ಕ್ಷಮಗೆ ಅರ್ಹವಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೌರ್ಜನ್ಯ ಎಸಗಿರುವ ಎಸ್ಸೈ ಅಮಾನತು ಮಾಡಿದ ಕ್ಷಣ ಶಿಕ್ಷೆ ಆಗಿದೆ ಎಂದು ಅರ್ಥವಲ್ಲ. ಸಂಬಂಧಿಸಿದ ಪೊಲೀಸರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಕೇಸು ದಾಖಲಿಸಿ ಬಂಧಿಸಬೇಕು. ನೊಂದ ಕೊರಗ ಸಮುದಾಯದ ಬಂಧುಗಳಿಗೆ ಪೂರ್ಣ ಪ್ರಮಾಣದ ಪರಿಹಾರ ಕೂಡಲೇ ನೀಡಬೇಕು. ದೌರ್ಜನ್ಯ ನಡೆಸಿರುವ ಪೊಲೀಸ್ ಅಧಿಕಾರಿಗಳು ಇಡೀ ಕೊರಗ ಸಮುದಾಯದ ಕುರಿತು ಕ್ಷಮೆ ಕೇಳಬೇಕು. ಈ ಘಟನೆ ಹಿಂದೆ ಕೊರಗರ ಕುರಿತು ಕೀಳು ಮನೋಭಾವ ಹೊಂದಿರುವ ಕಾಣದ ಕೈ ಕುರಿತು ತನಿಖೆ ಆಗಬೇಕು ಮತ್ತು ಅವರಿಗೂ ಶಿಕ್ಷೆ ಆಗಬೆೀಕು ಎಂದು ಅವರು ಒತ್ತಾಯಿಸಿದರು.

ಬಳಿಕ ವಿವಿಧ ಬೇಡಿಕೆಗಳ ಕುರಿತ ಮನವಿಯನ್ನು ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯರ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು. ಪ್ರಮುಖರಾದ ಶಿವರಾಜ ನಾಡ, ಗಣೇಶ ಆಲೂರು, ಮಾಲತಿ ಆಲೂರು, ಸುರೇಂದ್ರ ಹೇರೂರು, ನಾಗೇಶ್ ಬಾರಂದಾಡಿ, ಬಸವ ಮುದೂರು, ಆಶಾ ಬಂಟ್ವಾಡಿ, ಗೋಪಾಲ ಕೊಣ್ಕಿ, ವಿಮಲ ಮರವಂತೆ, ಡಿವೈಎಫ್‌ಐ ಕಾರ್ಯದರ್ಶಿ ರಾಜೇಶ ವಡೆರಹೋಬಳಿ, ಕುಂದಾಪುರ ದಲಿತ ಹಕ್ಕುಗಳ ಸಮಿತಿಯ ಮಹಾಬಲ ವಡೆರಹೋಬಳಿ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ವಿ.ಚಂದ್ರಶೇಖರ, ರವಿ ಗುಲ್ಲಾಡಿ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಳು ಕೇಸು ವಾಪಾಸ್ಸು ಪಡೆಯಲು ಒತ್ತಾಯ

ಕೊರಗ ಸಮುದಾಯದ ಮೇಲೆ ದೌರ್ಜನ್ಯ ಎಸಗಿದ ಪೋಲಿಸರನ್ನು ಖಾಯಂ ಕರ್ತವ್ಯದಿಂದ ವಜಾಗೊಳಿಸಬೇಕು. ದೌರ್ಜನ್ಯಕ್ಕೆ ಒಳಗಾದ ಕೊರಗ ಬಂಧುಗಳಿಗೆ ಪರಿಹಾರ ನೀಡಬೇಕು ಮತ್ತು ಸಮಗ್ರ ತನಿಖೆಯಾಗಬೇಕು. ತಪ್ಪಿಸ್ಥರನ್ನು ಕೂಡಲೇ ಬಂಧಿಸಬೇಕು. ಅಮಾಯಕ ಕೊರಗ ಸಮುದಾಯದವರ ಮೇಲೆ ಸುಳ್ಳು ಕೇಸು ದಾಖಲಿಸಿದ್ದನ್ನು ಕೂಡಲೇ ಸರಕಾರ ಹಿಂದಕ್ಕೆ ಪಡೆಯ ಬೇಕು. ಕೊರಗರ ಭೂಮಿಗೆ ಸಂಬಂಧಿಸಿದ ಖಾತೆ ಬದಲಾವಣೆ ಮತ್ತು ಇತರೆ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು. ಕೇಂದ್ರ, ರಾಜ್ಯ ಸರಕಾರ ಕಳೆದ 6 ವರ್ಷಗಳಿಂದ ಕೊರಗರಿಗೆ ನೀಡಬೇಕಿರುವ ಅನುದಾನಗಳನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಮನೆ, ನೀರಾವರಿ, ವಿದ್ಯಾರ್ಥಿವೇತನ ಇತರ ಸೌಲಭ್ಯಕ್ಕೆ ಐಟಿಡಿಪಿಗೆ ಅರ್ಜಿ ಸಲ್ಲಿಸಿದ ಕೊರಗರಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ನಿರುದ್ಯೋಗಿ ಕೊರಗ ಯುವಜನರಿಗೆ 2 ವರ್ಷದಿಂದ ನೀಡ ಬೇಕಾದ ನಿರುದ್ಯೋಗ ಭತ್ಯೆ ನೀಡಬೇಕು. ಆಲೂರು ಕೊರಗ ಸಮುದಾಯವನ್ನು ಅಜಲು ಮುಕ್ತಗೊಳಿಸಿ, ಮುಹಮ್ಮದ್ ಪೀರ್ ವರದಿ ಪ್ರಕಾರ ಕನಿಷ್ಠ 2.50 ಎಕರೆ ಭೂಮಿ ಪ್ರತಿ ಕುಟುಂಬಕ್ಕೆ ನೀಬೇಕು ಎಂದು ಸಮಿತಿ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X