Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೋದ್ 5 ರಿಯಾಲಿಟಿ ಶೋ: ವೈಭವ್ ಕಾಮತ್-...

ಸೋದ್ 5 ರಿಯಾಲಿಟಿ ಶೋ: ವೈಭವ್ ಕಾಮತ್- ಸೋನಲ್ ಮೊಂತೇರೊ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ3 Jan 2022 8:07 PM IST
share
ಸೋದ್ 5 ರಿಯಾಲಿಟಿ ಶೋ: ವೈಭವ್ ಕಾಮತ್- ಸೋನಲ್ ಮೊಂತೇರೊ ಆಯ್ಕೆ

ಮಂಗಳೂರು : ಮಾತೃಭಾಷೆಗೆ ಕೊಡುಗೆ ನೀಡಿದ ಯುವ ಪ್ರತಿಭೆಗಳನ್ನು ಗುರುತಿಸುವ ಹಾಗೂ ಹಿರಿಯರನ್ನು ಗೌರವಿಸುವ ಕಾರ್ಯ ಉತ್ತಮವಾದುದು. ಒಂದು ಭಾಷೆ ಕಲಿಯುವಾಗ ಆ ಜನರ ಸಂಸ್ಕೃತಿ ಮತ್ತು ಯೋಚನಾ ರೀತಿಯೂ ತಿಳಿಯುತ್ತದೆ. ಭಾಷೆಯ ಮುಖಾಂತರ ಮನುಷ್ಯನ ವ್ಯಕ್ತಿತ್ವದ ಅರಿವಾಗುತ್ತದೆ. ಭಾಷೆಯ ಕೆಲಸದಲ್ಲಿ, ಪ್ರತಿಭೆಗಳ ಹುಡುಕಾಟದಲ್ಲಿ ಮಾಂಡ್ ಸೊಭಾಣ್ ಕಾರ್ಯ ಪ್ರಶಂಸನೀಯ ಎಂದು ಮಂಗಳೂರು ಬಿಷಪ್ ಅ.ವಂ.ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅಭಿಪ್ರಾಯಪಟ್ಟರು.

ನಗರದ ಕಲಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಕೊಂಕಣಿಯ ಪ್ರಖ್ಯಾತ ರಿಯಾಲಿಟಿ ಶೋ ‘ಎಂಸಿಸಿ ಬ್ಯಾಂಕ್ ಲಿ. ಸೋದ್ 5 ಮ್ಯಾಂಗೋವಾ’ದ ವಿಜೇತರನ್ನು ಗೌರವಿಸಿ ಅವರು ಮಾತನಾಡುತ್ತಿದ್ದರು.

ರಾಯ್ ಕೊಗುಳ್ (ರಾಜ ಕೋಗಿಲೆ) ಆಗಿ ಆಯ್ಕೆಯಾದ ವೈಭವ್ ವಿಶ್ವಾಸ್ ಕಾಮತ್ ಗೋವಾ ಹಾಗೂ ರಾಣಿ ಕೊಗುಳ್ (ರಾಣಿ ಕೋಗಿಲೆ) ಆಗಿ ಆಯ್ಕೆಯಾದ ಸೋನಲ್ ಆಗ್ನೆಸ್ ಮೊಂತೇರೊ ಮಂಗಳೂರು ಅವರಿಗೆ ತಲಾ 50,000 ರೂ. ನಗದು ನೀಡಿ, ಕಿರೀಟ ತೊಡಿಸಿ ಹಾಗೂ ಸ್ಮರಣಿಕೆ ನೀಡಿ ಮಂಗಳೂರು ಬಿಷಪ್ ಹಾಗೂ ಮರಾಠಿ ಸಿನೆಮ ಕ್ಷೇತ್ರದ ಸಂಗೀತ ನಿರ್ದೇಶಕ ಅಶೋಕ್ ಪಾತ್ಕಿ ಗೌರವಿಸಿದರು.

ಈ ಸಂದರ್ಭ ವಿಜೇತರಿಗೆ ಎಸ್‌ಕೆಎ ಲಂಡನ್ ವತಿಯಿಂದ ಕಾರ್ಯಕ್ರಮ ನೀಡಲು ಅವಕಾಶ ಲಭಿಸಿರುವುದನ್ನು ಘೋಷಿಸಲಾಯಿತು. ಅಲ್ಲದೆ ಗೋವಾದ ಗಾಯನ ಕೋಗಿಲೆ ಲೋರ್ನಾ ಕೊರ್ಡೆರೊರಿಗೆ ಜೀವಮಾನ ಸಾಧನೆ ಪುರಸ್ಕಾರವನ್ನು ಬಿಷಪ್ ಘೋಷಿಸಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ದಾಯ್ಜಿವರ್ಲ್ಡ್ ಆಡಳಿತ ನಿರ್ದೇಶಕ ವಾಲ್ಟರ್ ಡಿಸೋಜ, ಗೋವನ್ ವರ್ಲ್ಡ್ ಡಾಟ್.ಕಾಮ್ ಇದರ ನಿರ್ದೇಶಕ ಜೊಯ್ ಫೆರ್ನಾಂಡಿಸ್, ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ ಮತ್ತು ಅಧ್ಯಕ್ಷ ಲುವಿ ಪಿಂಟೊ, ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ರಾಯ್ ಕ್ಯಾಸ್ತೆಲಿನೊ ಉಪಸ್ಥಿತರಿದ್ದರು.

ಗಾಯಕಿ ಸೋನಿಯಾ ಶಿರ್ಸಾಟ್ ಗೋವಾ, ಸಂಗೀತಗಾರರಾದ ಕ್ಯಾಜಿಟನ್ ಡಾಯಸ್ ಬೆಂಗಳೂರು ಹಾಗೂ ನಿತಿನ್ ಕೂಟೂಂಗಳ್ ಕೇರಳ ತೀರ್ಪುದಾರರಾಗಿ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಬಸ್ತಿ ವಾಮನ್ ಶೆಣೈ ಅವರಿಗೆ ಸಂತಾಪ ಸೂಚಿಸಲಾಯಿತು. ಅರುಣ್ ರಾಜ್ ರಾಡ್ರಿಗಸ್, ಡಾ.ಮೋನಾ ಮೆಂಡೊನ್ಸಾ, ಪ್ರಿಥುಮಾ ಮೊಂತೆರೊ ಕಾರ್ಯಕ್ರಮಗಳನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X