ರೆಡ್ಕ್ರಾಸ್ ನಿಂದ ಕೋವಿಡ್ ಸಂತ್ರಸ್ಥರಿಗೆ ದಿನಸಿ ಕಿಟ್ಗಳ ವಿತರಣೆ

ಉಡುಪಿ, ಜ.1: ರೆಡ್ಕ್ರಾಸ್ ಸಂಸ್ಥೆ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾ ಗಿದ್ದು, ಕೋವಿಡ್ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾಸ್ಕ್, ಸೋಪು, ಸ್ಯಾನಟೈಸರ್ಗಳನ್ನು ವಿತರಿಸಿದೆ ಎಂದು ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದ್ದಾರೆ.
ಸೋಮವಾರ ಅಜ್ಜರಕಾಡಿನಲ್ಲಿರುವ ರೆಡ್ಕ್ರಾಸ್ ಭವನದಲ್ಲಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸಹಯೋಗದೊಂದಿಗೆ, ಕೋವಿಡ್ನಿಂದ ನೊಂದ ಬಡ ಫಲಾನುಭವಿಗಳಿಗೆ ರಾಜ್ಯ ಶಾಖೆಯಿಂದ ನೀಡಲ್ಪಟ್ಟ ದಿನಸಿ ಸಾಮಾಗ್ರಿಗಳ ಕಿಟ್ ಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.
ರೆಡ್ಕ್ರಾಸ್ನ ಅಂಗಸಂಸ್ಥೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಸಿಗುವ ಸೌಲಭ್ಯ ಹಾಗೂ ಕೃತಕ ಕಾಲು ನೀಡುವಿಕೆ, ತಜ್ಞರಾದ ಆಡಿಯೋಲಿಜಿಸ್ಟ್, ಸೈಕ್ಯಾಟ್ರಿಕ್ ಫಿಸಿಯೋಥೆರಪಿಸ್ಟ್ರ ಸೇವೆಯನ್ನು ಸಾರ್ವಜನಿಕರು ಬಳಸುವಂತೆ ಅವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಕೋವಿಡ್ನಿಂದ ಮೃತಪಟ್ಟ ಮನೆಯ ಸದಸ್ಯರು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಹೊಲಿಗೆ ಮೆಶಿನ್ ನೀಡಲಾಗುವುದು ಎಂದು ಬಸ್ರೂರು ರಾಜೀವ್ ಶೆಟ್ಟಿ ನುಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಯುನಿಟ್ ಇನ್ ಚಾರ್ಜ್ ಜಯಶ್ರೀ, ರೆಡ್ಕ್ರಾಸ್ ಮತ್ತು ಡಿಡಿಆರ್ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಸ್ವಾಗತಿಸಿದರು. ಆಡಳಿತ ಮಂಡಳಿ ಸದಸ್ಯೆ ರಮಾದೇವಿ ವಂದಿಸಿದರು.
ಕಾರ್ಯಕ್ರಮದಲ್ಲಿ ಕೋವಿಡ್ನಿಂದ ನೊಂದ ಬಡ ಕುಟುಂಬದ ಫಲಾನು ಭವಿಗಳಿಗೆ ದಿನಸಿ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಲಾುತು.







