Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‍ನ ಮೇಕೆದಾಟು ಚಳವಳಿಯಿಂದ...

ಕಾಂಗ್ರೆಸ್‍ನ ಮೇಕೆದಾಟು ಚಳವಳಿಯಿಂದ ಬಿಜೆಪಿ ಮುಖಂಡರಿಗೆ ನಡುಕು ಶುರುವಾಗಿದೆ: ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್

ವಾರ್ತಾಭಾರತಿವಾರ್ತಾಭಾರತಿ3 Jan 2022 11:29 PM IST
share
ಕಾಂಗ್ರೆಸ್‍ನ ಮೇಕೆದಾಟು ಚಳವಳಿಯಿಂದ ಬಿಜೆಪಿ ಮುಖಂಡರಿಗೆ ನಡುಕು ಶುರುವಾಗಿದೆ: ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್

ಚಿಕ್ಕಮಗಳೂರು, ಜ.3: ಬೆಂಗಳೂರಿಗೆ ಕುಡಿಯುವ ನೀರೊದಗಿಸಲು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಜನಪರ ಹೋರಾಟವಾಗಿದ್ದು, ಈ ಪಾದಯಾತ್ರೆಯಿಂದ ಆಡಳಿತ ಪಕ್ಷ ಬಿಜೆಪಿಗೆ ನಡುಕ ಶುರುವಾಗಿದೆ. ಇಂತಹ ಹೋರಾಟದ ಬಗ್ಗೆ ಕಂದಾಯ ಸಚಿವ ತುಚ್ಛವಾಗಿ ಮಾತನಾಡಿರುವುದು ಖಂಡನೀಯ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಟೀಕಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷದ ಮುಖಂಡರು ಮೊದಲು ಚಳವಳಿಗೆ ಗೌರವಕೊಡಬೇಕು. ಮೇಕೆದಾಟು ಯೋಜನೆ ಸಂಬಂಧ ಕಾಂಗ್ರೆಸ್ ಹಮ್ಮಿಕೊಂಡಿರುವ ಚಳವಳಿ ರಾಜಕೀಯ ಪ್ರೇರಿತವಾದ ಹೋರಾಟವಲ್ಲ, ಇದು ಜನಪರ ಹೋರಾಟವಾಗಿದೆ. ಆ ಭಾಗದ ಜನರಿಗೆ ನ್ಯಾಯಕೊಡಿಸುವ ಉದ್ದೇಶದಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಿಂದ ಬಿಜೆಪಿಯಲ್ಲಿ ನಡುಕ ಆರಂಭವಾಗಿದ್ದು, ಕಂದಾಯ ಸಚಿವ ಆರ್.ಅಶೋಕ್ ಹತಾಶೆಯಿಂದ ತಮ್ಮ ಘನತೆ, ಗೌರವ ಲೆಕ್ಕಸದೇ ಅಸಡ್ಡೆಯಿಂದ ಮಾತನಾಡಿರುವುದು ಸರಿಯಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಆರಂಭಗೊಂಡಿರುವ ಪಾದಯಾತ್ರೆ ಬಗ್ಗೆ ಸಚಿವ ಆರ್.ಅಶೋಕ್ ಅವಹೇಳನಕಾರಿಯಾಗಿ ಮಾತನಾಡಿ, ಈ ಹೋರಾಟದಿಂದ ಕಾಂಗ್ರೆಸ್ ಪಕ್ಷದವರಿಗೆ ಮೇಕೆಯೂ ಸಿಗಲ್ಲ, ಮಾಂಸವೂ ಸಿಗಲ್ಲ ಎಂದು ಚಳವಳಿಯೊಂದರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಚಳವಳಿಗಳ ಬಗ್ಗೆ ಗೌರವ ಇಲ್ಲದವರು ಮಾತ್ರ ಹೀಗೆ ಮಾತನಾಡಲು ಸಾಧ್ಯ, ಚಳವಳಿಗೆ ತನ್ನದೇಯಾದ ಗೌರವ, ಘನತೆ ಇದ್ದು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದೂ ಚಳವಳಿಯಿಂದಲೇ ಎಂಬುದನ್ನು ಸಚಿವ ಆರ್.ಅಶೋಕ್ ಮನಗಾಣಬೇಕು ಎಂದ ಅವರು, ರಾಜ್ಯ ಸರಕಾರಕ್ಕೆ ಮಾನ ಮರ್ಯಾದೆ ಇದ್ದಲ್ಲಿ ಕಾಂಗ್ರೆಸ್ ಹೋರಾಟದ ಬಗ್ಗೆ ತುಚ್ಛವಾಗಿ ಮಾತನಾಡಿರುವ ಆರ್.ಅಶೋಕ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷ ಮೇಕೆ ಮತ್ತು ಮಾಂಸಕ್ಕಾಗಿ ಹೋರಾಡುತ್ತಿಲ್ಲ, ಜನರಿಗಾಗಿ ಹೋರಾಡುತ್ತಿದೆ. ಆಡಳಿತ ಪಕ್ಷದ ಸಚಿವರು ಹುಂಬತನವನ್ನು ಕೈಬಿಟ್ಟು ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ. ಅಧಿಕಾರಕ್ಕೆ ಬಂದಾಗಿನಿಂದ ಒಂದೇ ಒಂದು ಜನಪರ ಯೋಜನೆ ನೀಡದ ಬಿಜೆಪಿ ಸರಕಾರ ಚುನಾವಣೆ ಸಂದರ್ಭಗಳಲ್ಲಿ ಪಟಾಕಿ ಹೊಡೆದು ಚಟಾಕಿ ಹಾರಿಸುವುದನ್ನೇ ಸಾಧನೆ ಎಂದು ತಿಳಿದಿದ್ದಾರೆ. ಇದನ್ನು ಇನ್ನಾದರೂ ಅವರು ನಿಲ್ಲಿಸಬೇಕು ಎಂದರು.

ಅತಿವೃಷ್ಟಿಯಿಂದ ಬೆಳೆಕಳೆದುಕೊಂಡಿರುವ ರೈತರಿಗೆ ಹೆಕ್ಟೇರ್‍ಗೆ 15ಸಾವಿರ ರೂ. ನೀಡುವುದಾಗಿ ಕಂದಾಯ ಸಚಿವರು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದರು. ಇದನ್ನು ನಂಬಿ ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ಸಲ್ಲಿಸಿದ ರೈತರಿಗೆ ನಯಾಪೈಸೆ ಪರಿಹಾರವನ್ನೂ ನೀಡಿಲ್ಲ. ಅತಿವೃಷ್ಟಿಗೆ ಮನೆ ಕಳೆದುಕೊಂಡವರಿಗೆ ಒಂದೇ ಒಂದು ಮನೆ ನೀಡಲು ಸಾಧ್ಯವಾಗಿಲ್ಲ ಸಚಿವರ ಮಾತುಗಳು ಕೇವಲ ಭಾಷಣಕ್ಕೆ ಸೀಮಿತಗೊಂಡಿವೆ ಆರೋಪಿಸಿದರು.

ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ಅವರು ಜಿಲ್ಲೆಗೆ ನೀಡಿರುವ ಕೊಡುಗೆ ಶೂನ್ಯವಾಗಿದೆ. ಕೃಷಿ ಸಚಿವರಾಗಿರುವ ಅವರು ಜಿಲ್ಲೆಗೆ ಶೈತ್ಯಾಗಾರದ ಭರವಸೆ ನೀಡಿದ್ದು, ಇನ್ನೂ ಸಾಕಾರಗೊಂಡಿಲ್ಲ ಎಂದ ಅವರು, ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿಯವರು ಹಣ ಹೆಂಡದ ಹೊಳೆ ಹರಿಸಿ, ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿ ಅಧಿಕಾರ ಹಿಡಿದಿದ್ದಾರೆ. ನಗರದ ಜನತೆ ಕಾಂಗ್ರೆಸ್‍ಗೆ 12 ಸ್ಥಾನ ನೀಡಿದ್ದು, ನಗರಸಭೆಯಲ್ಲಿ ಕಾಂಗ್ರೆಸ್ ಸಮರ್ಥ ವಿರೋಧ ಪಕ್ಷವಾಗಿ ಜನಪರ ಕೆಲಸಗಳಿಗೆ ಒತ್ತು ನೀಡಲಿದೆ ಎಂದರು.
ಮುಖಂಡರಾದ ಎಂ.ಡಿ.ರಮೇಶ್, ಜಮೀಲ್ ಅಹ್ಮದ್, ಕುಶ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X