Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಗೌರವ ಪ್ರಶಸ್ತಿ ಮತ್ತು ಪುಸ್ತಕ...

ತುಳು ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ4 Jan 2022 8:42 PM IST
share

ಮಂಗಳೂರು, ಜ.4: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯು 2021ನೆ ಸಾಲಿನ ಗೌರವ ಪ್ರಶಸ್ತಿ ಮತ್ತು ತುಳು ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನಿಸಿದೆ.

ತುಳು ಭಾಷೆ, ಸಾಹಿತ್ಯ ಸಂಶೋಧನೆಗಳ ಕ್ಷೇತ್ರ, ತುಳು ನಾಟಕ-ಚಲನಚಿತ್ರ ಕ್ಷೇತ್ರದಲ್ಲಿ ಸಾಹಿತಿ ಅಥವಾ ಕಲಾವಿದ, ತುಳು ಜಾನಪದ ಕ್ಷೇತ್ರದಲ್ಲಿ (ಜಾನಪದ ಕುಣಿತ, ಪಾಡ್ದನ, ದೈವನರ್ತನ) ಗಣನೀಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಪ್ರತಿಯೊಂದು ಕ್ಷೇತ್ರಕ್ಕೆ ಒಬ್ಬರಂತೆ ಮೂವರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.

ಈ ಸಂದರ್ಭ ವಿಶೇಷವಾಗಿ ಸೇವೆ ಸಲ್ಲಿಸಿರುವ ಬಾಲ ಪ್ರತಿಭೆ, ಯುವ ಸಾಧಕ, ಸಂಘಟನೆ (ಬಿರ್ಸೆ ಬಾಲೆ ತಮ್ಮನ, ಬಿರ್ಸೆ ಜವನೆರೆ ತಮ್ಮನ, ಬಿರ್ಸೆ ಕೂಟ ತಮ್ಮನ)ಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಅರ್ಜಿಗಳನ್ನು ಸ್ವತ: ಅಭ್ಯರ್ಥಿಗಳೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸು ಮಾಡಿ ಅರ್ಜಿ ಸಲ್ಲಿಸಬಹುದು.

ಈ ಹಿಂದಿನ ಸಾಲಿನಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ, ಆಯ್ಕೆಯಾಗದ ಮಹನೀಯರ ಅರ್ಜಿಗಳನ್ನು ಈ ವರ್ಷವೂ ಪರಿಗಣಿಸಲಾಗು ವುದು. ಅವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಆದರೆ ಸಾಧನೆಯ ಪೂರಕ ವಿವರಗಳಿದ್ದಲ್ಲಿ ಕಳುಹಿಸಿಕೊಡಬ ಹುದು. ಹೊಸದಾಗಿ ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಗಳನ್ನು ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಗಳೊಂದಿಗೆ ಅಕಾಡಮಿಗೆ ಕಳುಹಿಸಿ ಕೊಡಬಹುದು.

ಪುಸ್ತಕ ಬಹುಮಾನ 2021: 2021ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಗೊಂಡ ಪುಸ್ತಕಗಳನ್ನು (ತುಳು ಕವನ ಸಂಕಲನ, ತುಳು ಕಥಾ ಸಂಕಲನ, ತುಳು ಕಾದಂಬರಿ, ತುಳು ಕಾವ್ಯ, ತುಳು ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ ಅಥವಾ ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು) ಲೇಖಕರು/ಪ್ರಕಾಶಕರು ತಲಾ ನಾಲ್ಕು ಪ್ರತಿಯೊಂದಿಗೆ ಕಳುಹಿಸಬಹುದು.

ಈ 7 ವಿಭಾಗಗಳಲ್ಲೂ ಕನಿಷ್ಠ 3 ಪುಸ್ತಕಗಳು ಬಂದಲ್ಲಿ ಮಾತ್ರ ಅಕಾಡಮಿಯ ನಿಯಮಾವಳಿಯಂತೆ 1 ಪುಸ್ತಕವನ್ನು ಆಯ್ಕೆ ಮಾಡಲಾಗುವುದು. ಪ್ರತಿ ಪ್ರಕಾರಗಳಲ್ಲಿ ಮೂರಕ್ಕಿಂತ ಕಡಿಮೆ ಪುಸ್ತಕಗಳು ಸ್ವೀಕೃತವಾದಲ್ಲಿ, ಮೌಲ್ಯಯುತ ಪುಸ್ತಕಗಳಾಗಿದ್ದರೂ ಸಹ ಅಕಾಡಮಿಯ ನಿಯಮಾವಳಿಯಂತೆ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲಾಗುವುದಿಲ್ಲ.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ತುಳು ಅಕಾಡಮಿ ಗೌರವ ಪ್ರಶಸ್ತಿ -2021 ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ತುಳು ಅಕಾಡಮಿ ಪುಸ್ತಕ ಬಹುಮಾನ ಯೋಜನೆ -2021 ಎಂದು ಕಡ್ಡಾಯವಾಗಿ ಬರೆದು ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ತುಳುಭವನ, ಅಂಚೆ: ಅಶೋಕನಗರ, ಉರ್ವಸ್ಟೋರ್, ಮಂಗಳೂರು - 575 006 ಈ ವಿಳಾಸಕ್ಕೆ ಜನವರಿ 31ರೊಳಗೆ ಕಳುಹಿಸಬಹುದು. ವಿವರಿಗಳಿಗೆ ಮೊ.ಸಂ: 7411572115 ಸಂಪರ್ಕಿಸಬಹುದು ಎಂದು ಅಕಾಡಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ ಸಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X