Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ.6ರಿಂದ 'ಕಂಪೆನಿ ಸೆಕ್ರೆಟರಿಗಳ...

ಜ.6ರಿಂದ 'ಕಂಪೆನಿ ಸೆಕ್ರೆಟರಿಗಳ ರಾಷ್ಟ್ರೀಯ ಸಮಾವೇಶ': ರಾಜ್ಯಪಾಲರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Jan 2022 10:03 PM IST
share
ಜ.6ರಿಂದ ಕಂಪೆನಿ ಸೆಕ್ರೆಟರಿಗಳ ರಾಷ್ಟ್ರೀಯ ಸಮಾವೇಶ: ರಾಜ್ಯಪಾಲರಿಂದ ಚಾಲನೆ

ಬೆಂಗಳೂರು, ಜ, 5: ‘ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಮಹತ್ವದ ಪಾತ್ರ ವಹಿಸುತ್ತಿರುವ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ವತಿಯಿಂದ ‘ಉತ್ತಮ ಆಡಳಿತ: ಸಾರ್ವತ್ರಿಕ ಧರ್ಮ' ಎಂಬ ವಿಷಯದಡಿ ನಾಳೆ(ಜ.6)ಯಿಂದ ಮೂರು ದಿನಗಳ 49ನೆ ಕಂಪೆನಿ ಸೆಕ್ರೆಟರಿಗಳ ರಾಷ್ಟ್ರೀಯ ಸಮಾವೇಶ ಆರಂಭವಾಗಲಿದೆ' ಎಂದು ಐಸಿಎಸ್‌ಐ ಅಧ್ಯಕ್ಷ ಸಿ.ಎಸ್.ನಾಗೇಂದ್ರ ರಾವ್ ತಿಳಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿರುವ ಸಮಾವೇಶವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಎಸ್‌ಬಿಐನ ವ್ಯವಸ್ಥಾಪಕ ನಿರ್ದೇಶಕ ಸ್ವಾಮಿನಾಥನ್ ಜಾನಕಿರಾಮನ್ ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಸಮಾವೇಶದಲ್ಲಿ ವಿವಿಧ ಗೋಷ್ಠಿಗಳನ್ನು ಆಯೋಜಿಸಲಾಗಿದೆ' ಎಂದರು.

‘ಮೊದಲ ದಿನದಂದು ಸಂಜೆ ನಾಯಕತ್ವದಲ್ಲಿ ಪರಿವರ್ತನೆ ಮತ್ತು ಉತ್ತಮ ಆಡಳಿತ ಕುರಿತು ಜೈನ್ ವಿವಿಯ ಡಾ.ರಾಜ್‌ದೀಪ್ ಮನ್ವಾನಿ ಮಾತನಾಡಲಿದ್ದಾರೆ. ಜ.7ರಂದು ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಆಡಳಿತ ಕುರಿತು ಮೈಸೂರಿನ ಯದುವಿರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಲಿದ್ದಾರೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಮಹಾರಾಷ್ಟ್ರದ ನಿವೃತ್ತ ಐಎಎಸ್ ಅಧಿಕಾರಿ ಸಂಜಯ್ ಉಬಲೆ ಭಾಗಿಯಾಗಲಿದ್ದಾರೆ' ಎಂದು ವಿವರಿಸಿದರು.

‘ಡಿಟಿಟಲ್ ಯುಗದಲ್ಲಿ ಆಡಳಿತ, ಸವಾಲುಗಳು ಮತ್ತು ಅವಕಾಶಗಳು' ಕುರಿತ ಗೋಷ್ಠಿಯಲ್ಲಿ ರಾಷ್ಟ್ರೀಯ ಕಾನೂನು ಶಾಲೆಯ ಉಪಕುಲಪತಿ ಪ್ರೊ.ಸುಧೀರ್ ಕೃಷ್ಣಸ್ವಾಮಿ ಮಾತನಾಡಲಿದ್ದು, ಸಾಂಸ್ಥಿಕ ಮಂಡಳಿಗಳು, ವೈವಿಧ್ಯತೆ, ಇಕ್ವಿಟಿ ಮತ್ತು ಎಲ್ಲವನ್ನೊಳಗೊಂಡ ಪರಿಣಾಮಕಾರಿ ಆಡಳಿತ ಕುರಿತು ಬೆಂಗಳೂರಿನ ಐಎಸ್‌ಬಿಎಂನ ಸಹಾಯಕ ಪ್ರಾಧ್ಯಾಪಕ ಡಾ.ರಂಗರಾಜನ್ ಶ್ರೀನಿವಾಸನ್ ಮಾತನಾಡಲಿದ್ದಾರೆ. ಬಳಿಕ ಮಂಡಳಿಗಳ ಸ್ವಾಯತ್ತತೆ, ಆಡಳಿತದ ಗುಣಮಟ್ಟ ಹೆಚ್ಚಳ ಕುರಿತು ಎನ್‌ಎಸ್‌ಡಿಎಲ್‌ನ ಕಾರ್ಯಕಾರಿ ನಿರ್ದೇಶಕ ಸಮೀರ್ ಬನ್ವಾತ್ ಬೆಳಕು ಚೆಲ್ಲಲಿದ್ದಾರೆ ಎಂದರು.

ಉದ್ಯೋಗಕ್ಕೆ ವಿಫುಲ ಅವಕಾಶ: ಕೋವಿಡ್ ಸಂಕಷ್ಟದ ನಡುವೆಯೂ ಪ್ರತಿದಿನ ದೇಶದಲ್ಲಿ 600 ಕಂಪೆನಿಗಳು ನೋಂದಣಿಯಾಗುತ್ತಿದ್ದು, ಇದೊಂದು ಸಕಾರಾತ್ಮಕ ಬೆಳವಣಿಗೆ. ಪ್ರಸ್ತುತ 67,205 ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಮುಂಬರುವ ದಿನಗಳಲ್ಲೂ ಹೊಸ ಹೊಸ ಕಂಪೆನಿಗಳಿಗೆ ಅವಕಾಶಗಳಿವೆ. ಹೀಗಾಗಿ ಮುಂಬರುವ ದಿನಗಳಲ್ಲಿ ಸಿಐಎಸ್‌ಐ ತನ್ನ ಕೋರ್ಸ್ಗಳನ್ನು ಎಸೆಸೆಲ್ಸಿ ಮತ್ತು ಪಿಯುಸಿ ಹಂತದಲ್ಲಿ ಪರಿಚಯಿಸಲು ಚಿಂತನೆ ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಈ ಕೋರ್ಸ್ ಬಗ್ಗೆ ತಿಳಿದುಕೊಳ್ಳಲು ಮತ್ತು ಆಯ್ಕೆ ಮಾಡಿಕೊಳ್ಳಲು ಸಹಕಾರಿ ಎಂದು ನಾಗೇಂದ್ರ ರಾವ್ ಹೇಳಿದರು. 

ರಾಜ್ಯದಲ್ಲಿ ಪಿಯುಸಿ ತರಗತಿ ಪರೀಕ್ಷೆಗಳನ್ನು ಪೂರ್ಣಗೊಳಿಸಿದ ನಂತರ ಸಿಎಸ್ ಕೋರ್ಸ್ಗಳನ್ನು ತೆಗೆದುಕೊಳ್ಳಬಹುದು. ಪ್ರಸ್ತುತ 2.5ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಂಪೆನಿ ಸೆಕ್ರೇಟರಿ ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣಿಗೆ ಹಾಗೂ ಉದ್ಯೋಗಾವಕಾಶ ಒದಗಿಸಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಐಸಿಎಸ್‌ಐ ಕಾರ್ಯದರ್ಶಿ ಆಶಿಶ್ ಮೋಹನ್, ಬೆಂಗಳೂರು ಘಟಕದ ಅಧ್ಯಕ್ಷ ವಿಜಯ್‌ಕುಮಾರ್ ಸಜ್ಜನ್, ಉಪಾಧ್ಯಕ್ಷ ಸಿ.ರಾಮಸುಬ್ರಮಣ್ಯಂ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X