Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ.26ರಿಂದ ಜೆಡಿಎಸ್ ನಿಂದ 'ಜನತಾ ಜಲಧಾರೆ'...

ಜ.26ರಿಂದ ಜೆಡಿಎಸ್ ನಿಂದ 'ಜನತಾ ಜಲಧಾರೆ' ಅಭಿಯಾನ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ8 Jan 2022 12:10 AM IST
share
ಜ.26ರಿಂದ ಜೆಡಿಎಸ್ ನಿಂದ ಜನತಾ ಜಲಧಾರೆ ಅಭಿಯಾನ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜ. 7: ರಾಜ್ಯದ ಎಲ್ಲ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷದಿಂದ ರಾಜ್ಯವ್ಯಾಪಿ ಇದೇ ಜ.26ರಿಂದ `ಜನತಾ ಜಲಧಾರೆ' ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅನಾವರಣಗೊಳಿಸಿ ಮಾತನಾಡಿದ ಅವರು, ಕರ್ನಾಟಕ ಅತಿವೃಷ್ಟಿ-ಅನಾವೃಷ್ಟಿಗೆ ತುತ್ತಾಗುವ ರಾಜ್ಯ. ಅಗಾಧವಾಗಿ ಸುರಿಯುವ ಮಳೆ ನೀರನ್ನು ಪೋಲಾಗದಂತೆ ಬಳಕೆ ಮಾಡಿಕೊಳ್ಳುವುದು ಹಾಗೂ ವರುಣನ ಕೃಪೆ ಇಲ್ಲದೆ ಬರದಿಂದ ತತ್ತರಿಸುವ ಬಯಲುಸೀಮೆಯನ್ನು ಜಲಶ್ಯಾಮಲಗೊಳಿಸುವ ಕನಸು ನಮ್ಮದು.

ಸಸ್ಯಶ್ಯಾಮಲದ ಕನಸಿನೊಂದಿಗೆ ಕೃಷಿಗೆ ಸಮೃದ್ಧ ನೀರು ಹಾಗೂ ಜಲ ಶ್ಯಾಮಲಕ್ಕಾಗಿ ಕುಡಿಯಲು ಸಮೃದ್ಧ ನೀರು ಒದಗಿಸುವುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಜಾತ್ಯತೀತ ಜನತಾದಳ ಏನು ಮಾಡುತ್ತದೆ? ಯಾವ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂಬ ಬಗ್ಗೆ ಜನರಿಗೆ ಹೇಳುತ್ತೇವೆ. ಗಂಗೆಯನ್ನು ಪರಮ ಪವಿತ್ರವೆಂದು ಭಾವಿಸುವ ಪರಂಪರೆ ನಮ್ಮದು. ಈ ನಂಬಿಕೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ರಾಜ್ಯದ 15 ನದಿಗಳ ಪವಿತ್ರ ಜಲವನ್ನು ಕಲಶಗಳಲ್ಲಿ ಸಂಗ್ರಹ ಮಾಡಿ, ಆ ನೀರನ್ನು  ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನಕ್ಕೆ ಬರಮಾಡಿಕೊಂಡು ಗಂಗಾಪೂಜೆ ನೆರೆವೇರಿಸುವುದು.

ಜ.23ಕ್ಕೆ ಗಂಗಾ ರಥಗಳಿಗೆ ಹಸಿರು ನಿಶಾನೆ: ಜ.23ರಂದು ರಾಮನಗರದ ಚಾಮುಂಡೇಶ್ವರಿ ಅಮ್ಮನವರ ದೇಗುಲದಿಂದ ರಾಜ್ಯದ 15 ದಿಕ್ಕುಗಳಿಗೆ ಹೊರಡುವ ಗಂಗಾ ರಥಗಳಿಗೆ (15 ವಾಹನಗಳು) ನಾನು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಚಾಲನೆ ನೀಡುವರು.

ಜ.26ರಿಂದ ಜಲಧಾರೆ ಆರಂಭ: ಜ.26ರಂದು ಇಷ್ಟೂ ವಾಹನಗಳಲ್ಲಿ ಅಳವಡಿಸಲಾಗಿರುವ ಕಲಶಗಳ ಮೂಲಕ ಪೂರ್ವ ನಿಗದಿ ಮಾಡಲಾಗಿರುವ ಸ್ಥಳಗಳಲ್ಲಿ ಬೆಳಗ್ಗೆ 9 ಗಂಟೆಗೆ ಕಾವೇರಿ, ಕಬಿನಿ, ಮೇಕೆದಾಟು, ಹೇಮಾವತಿ, ನೇತ್ರಾವತಿ, ಕುಮಾರಧಾರ, ತುಂಗಭದ್ರಾ, ಶರಾವತಿ, ಅಘನಾಶಿನಿ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಭೀಮಾ, ಅರ್ಕಾವತಿ, ಉತ್ತರ ಪಿನಾಕಿನಿ, ಚಿತ್ರಾವತಿ ಸೇರಿ 15 ಸ್ಥಳಗಳಲ್ಲಿ ಮೊದಲ ದಿನ ಜಲ ಸಂಗ್ರಹ ಮಾಡಲಾಗುವುದು. 

ಜಲ ಸಂಗ್ರಹ ಮಾಡುವ ದಿನ ರಾಜ್ಯದ ವಿವಿಧ ಭಾಗಗಳಲ್ಲಿ ನಾನು, ದೇವೇಗೌಡ, ಎಚ್.ಕೆ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಸಾ.ರಾ.ಮಹೇಶ್, ನಾಡಗೌಡರು, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸೇರಿದಂತೆ ಪಕ್ಷದ ಎಲ್ಲ ನಾಯಕರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಒಟ್ಟು 51 ಕಡೆ ಜಲ ಸಂಗ್ರಹ: ಇಡೀ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 51 ಸ್ಥಳಗಳಲ್ಲಿ ಪವಿತ್ರ ನದಿಗಳ ಜಲ ಸಂಗ್ರಹ ಮಾಡಲಾಗುವುದು. ರಾಜ್ಯದ 180 ಕ್ಷೇತ್ರಗಳು, 140 ತಾಲೂಕು ಕೇಂದ್ರಗಳಲ್ಲಿ ಈ ಕಲಶಗಳು ಹಾದು ಹೋಗಲಿದ್ದು, ಎಲ್ಲೆಡೆ ಜಲ ತುಂಬಿದ ಕಲಶಗಳ ಮೆರವಣಿಗೆ, ಕಲಾ ತಂಡಗಳ ಮೆರಗು, ಮಂಗಳವಾದ್ಯಗಳ ಮೇಳ, ಕಲಶಗಳೊಂದಿಗೆ ಮಹಿಳೆಯರ ನಡಿಗೆ ನಡೆಯಲಿದೆ. ದಿನಂಪ್ರತಿ 15 ಕಡೆ ಇಂಥ ಕಾರ್ಯಕ್ರಮಗಳು ನಡೆಯಲಿವೆ. 

ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ: ರಾಜ್ಯದ ಉದ್ದಗಲಕ್ಕೂ ಸಾಗಿ ಬರುವ ಈ ಹದಿನೈದೂ ವಾಹನಗಳು 15-20 ದಿನಗಳ ಒಳಗಾಗಿ  ಬೆಂಗಳೂರು ತಲುಪುತ್ತವೆ. ಅಂದು ಇಡೀ ಬೆಂಗಳೂರನ್ನು ಪ್ರದಕ್ಷಿಣೆ ಹಾಕುವ ಇಷ್ಟೂ ವಾಹಗಳು ಅದೇ ದಿನ ಸಂಜೆ  ಅರಮನೆ ಮೈದಾನದಲ್ಲಿ ಸೇರಲಿವೆ. ಆ ನಂತರ ಎರಡು ದಿನಗಳಲ್ಲಿ ಒಂದು ಬೃಹತ್ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಉದ್ದಗಲಕ್ಕೂ ಸಂಗ್ರಹಿಸಲಾದ ಜಲವನ್ನು ದೊಡ್ಡ ಕಲಶಕ್ಕೆ ತುಂಬಿಸಿ ಗಂಗಾ ಪೂಜೆ, ಗಂಗಾ ಆರತಿ ಕಾರ್ಯಕ್ರಮಗಳನ್ನು ನೆರವೇರಿಸಲಾಗುವುದು. ಆ ಕಾರ್ಯಕ್ರಮದಲ್ಲಿ ಎಚ್.ಡಿ.ದೇವೇಗೌಡರು, ನಾಡಿನ ಧರ್ಮಗುರುಗಳು, ಗುರು ಹಿರಿಯರು ಸೇರಿ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ ಎಂದರು.

ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ: ನಮಗೆ ಧಾವಂತವಿಲ್ಲ. ವೈರಸ್ ನಿಯಂತ್ರಣಕ್ಕೆ ಸರಕಾರ ಜಾರಿ ಮಾಡುವ ಎಲ್ಲ ನಿಯಮಗಳಿಗೆ ಬದ್ಧರಾಗಿ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ. ಕಾಂಗ್ರೆಸ್ ನಾಯಕರಂತೆ ಅನುಮತಿ ಕೊಡದಿದ್ದರೆ ಪ್ರಾಣ ಬಿಡುತ್ತೇವೆ ಎಂದು ನಾವು ಬೆದರಿಕೆ ಹಾಕುವುದಿಲ್ಲ ಎಂದ ಅವರು, ನೀರಿನ ಬಗ್ಗೆ ಇಡೀ ದೇಶದಲ್ಲೇ ಅತ್ಯಂತ ಕಿರುಕುಳಕ್ಕೆ ಒಳಗಾದ, ಅಷ್ಟೇ ಅನ್ಯಾಯಕ್ಕೆ ಒಳಗಾದ ರಾಜ್ಯ ಕರ್ನಾಟಕ. ಒಕ್ಕೂಟ ವ್ಯವಸ್ಥೆಯಲ್ಲೇ ಇದ್ದರೂ ಭಾಷೆ, ನೆಲ, ಜಲ, ಅಭಿವೃದ್ಧಿ, ಅನುದಾನ; ಇತ್ಯಾದಿಗಳಲ್ಲಿ ಇನ್ನಿಲ್ಲದ ಅವಗಣನೆಗೆ ಒಳಗಾದ ರಾಜ್ಯವೂ ಕರ್ನಾಟಕವೇ ಎಂದು ಹೇಳಿದರು.

`ದಕ್ಷಿಣದ ಇತರೆ ರಾಜ್ಯಗಳಂತೆ ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗಳಿಗೆ ಜನರು ಉತ್ತೇಜನ ನೀಡಲಿಲ್ಲ. ಸದಾ ಕಾಲ ರಾಷ್ಟ್ರೀಯ ಪಕ್ಷಗಳೆಂಬ ಮಾಯಾಜಿಂಕೆಗಳನ್ನು ಬೆನ್ನು ಹತ್ತಿದ ಪರಿಣಾಮ ಇಂದಿಗೂ ನಾವು ನೀರಿಗಾಗಿ ಮಹಾರಾಷ್ಟ್ರ, ಗೋವಾ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ರಾಜ್ಯಗಳ ಜತೆ ಗುದ್ದಾಡುತ್ತಿದ್ದೇವೆ. ಈಗ ಮೇಕೆದಾಟು ಯೋಜನೆ ಆ ಒದ್ದಾಟದ ಹೊಸ ಹೆಸರು'

-ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X