Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾವು ನಾಳೆ ಪಾದಯಾತ್ರೆ ಮಾಡುವುದು...

ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ: ಸಿದ್ದರಾಮಯ್ಯ

''ರಾಮನಗರ ಜಿಲ್ಲೆಯಲ್ಲಿ ಮಾತ್ರ ಇರುವ 144 ಸೆಕ್ಷನ್ ಬೇರೆ ಜಿಲ್ಲೆಯಲ್ಲಿ ಏಕಿಲ್ಲ?''

ವಾರ್ತಾಭಾರತಿವಾರ್ತಾಭಾರತಿ8 Jan 2022 1:24 PM IST
share
ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ: ಸಿದ್ದರಾಮಯ್ಯ

ಬೆಂಗಳೂರು:  ''ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ'' ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ''ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೋನ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ'' ಎಂದರು.

''ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು?''  ಎಂದು ಪ್ರಶ್ನಿಸಿದರು. 

''ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು'' ಎಂದರು.

''ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡುವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್ ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು'' ಎಂದರು. 

''ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂಗ ಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? '' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್ ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? '' ಎಂದರು. 

''ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ?'' ಎಂದು ಪ್ರಶ್ನಿಸಿದರು. 

''ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವ್ರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ'' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X