ಕಾವೂರು: ರಿಕ್ಷಾ ಟೆಂಪೋ ಮಗುಚಿ ಚಾಲಕ ಮೃತ್ಯು
ಮಂಗಳೂರು, ಜ.8: ನಗರ ಹೊರವಲಯದ ಕಾವೂರಿನಲ್ಲಿ ರಿಕ್ಷಾ ಟೆಂಪೊವೊಂದು ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಕಾವೂರಿನ ಶ್ರೀಕಾಂತ್ (60) ಮೃತಪಟ್ಟವರು.
ಇವರು ಕಾವೂರು-ಪಂಜಿಮೊಗರು ರಸ್ತೆಯಲ್ಲಿ ಚಲಾಯಿಸುತ್ತಿದ್ದ ರಿಕ್ಷಾ ಟೆಂಪೋ ಏಕಾಏಕಿ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಸಂಚಾರ ಉತ್ತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





