Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚತ್ತೀಸ್ ಗಢ: ಮುಸ್ಲಿಮರೊಂದಿಗೆ...

ಚತ್ತೀಸ್ ಗಢ: ಮುಸ್ಲಿಮರೊಂದಿಗೆ ವ್ಯವಹರಿಸದಂತೆ ಪ್ರತಿಜ್ಞೆ ಮಾಡುವ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ8 Jan 2022 10:11 PM IST
share
ಚತ್ತೀಸ್ ಗಢ: ಮುಸ್ಲಿಮರೊಂದಿಗೆ ವ್ಯವಹರಿಸದಂತೆ ಪ್ರತಿಜ್ಞೆ ಮಾಡುವ ವೀಡಿಯೊ ವೈರಲ್

ರಾಯ್‌ ಪುರ: ರಾಯ್‌ಪುರದಿಂದ ಸುಮಾರು 350 ಕಿಮೀ ಉತ್ತರಕ್ಕೆ ಛತ್ತೀಸ್‌ಗಢದ ಅಂಬಿಕಾಪುರ ಜಿಲ್ಲೆಯಲ್ಲಿ ಎರಡು ಗ್ರಾಮಗಳ ನಡುವೆ ನಡೆದ ಜಗಳವು ಕೋಮು ತಿರುವು ಪಡೆದುಕೊಂಡಿದೆ.  ಈ ನಡುವೆ ಗ್ರಾಮವೊಂದರಲ್ಲಿ ನಡೆದಿದೆ ಎನ್ನಲಾದ ಸಭೆಯ ವಿಡಿಯೋ ಒಂದು ವೈರಲ್‌ ಆಗಿದ್ದು, ಅದರಲ್ಲಿ ಗ್ರಾಮಸ್ಥರು ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಕಂಡುಬಂದಿದೆ.

ಪ್ರಕರಣದ ಕುರಿತಂತೆ ಶುಕ್ರವಾರ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು  ಅಂಬಿಕಾಪುರದ ಹೆಚ್ಚುವರಿ ಎಸ್ಪಿ ವಿವೇಕ್ ಶುಕ್ಲಾ  ತಿಳಿಸಿದ್ದಾರೆ, ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು,  ಸ್ಥಳೀಯ ಗುಪ್ತಚರ ಜಾಲವನ್ನು ಬಲಪಡಿಸಿದ್ದಾರೆ ಎಂದು ಅವರು ಹೇಳಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಆರಾ ಗ್ರಾಮದಿಂದ ಕೆಲವು ಮುಸ್ಲಿಂ ಯುವಕರು ಹೊಸ ವರ್ಷದ ಪಿಕ್ನಿಕ್‌ಗೆ ಹೊರಟ ಬಳಿಕ ಈ ಘರ್ಷಣೆಗಳು ಆರಂಭಗೊಂಡಿದೆ.  ಕುಂದಿಕಲಾ ಗ್ರಾಮದ ನಿವಾಸಿಗಳೊಂದಿಗೆ ಆರಾ ಗ್ರಾಮದ ಯುವಕರಿಗೆ ಮಾತಿನ ಚಕಮಕಿ ನಡೆದಿದೆ. ಸಿಟ್ಟಿಗೆದ್ದ ಆರಾ ಯುವಕರು ಕೆಲವು ಮನೆಗಳಿಗೆ ನುಗ್ಗಿದ್ದು, ಕುಂದಿಕಲಾ  ಸ್ಥಳೀಯರಿಗೆ ಥಳಿಸಿ, ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಲಾಗಿದೆ.

ಘಟನೆಯ ಸೂಕ್ಷ್ಮತೆಯನ್ನು ಅರಿತು ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಎಫ್‌ಐಆರ್‌ ದಾಖಲಿಸಿ ಆರು ಮಂದಿಯನ್ನು ಬಂಧಿಸಿದ್ದರು. ಆದರೆ ಅವರಿಗೆ ಬೇಗನೇ ಜಾಮೀನು ಸಿಕ್ಕಿದೆ.   ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. 

ಈ ಪ್ರತಿಭಟನೆಯ ನಂತರ ಜನವರಿ 5 ರಂದು ಮುಸ್ಲಿಮರಿಗೆ ಬಹಿಷ್ಕಾರ ಹಾಕಲು ತೀರ್ಮಾನಿಸಿದ ಸಭೆ ನಡೆದಿದೆ.  ವೈರಲ್ ವೀಡಿಯೊದಲ್ಲಿ ಗ್ರಾಮಸ್ಥರು ಮುಸ್ಲಿಮರಿಂದ ಏನನ್ನೂ ಖರೀದಿಸುವುದಿಲ್ಲ ಹಾಗೂ ಅವರಿಗೆ ಏನನ್ನೂ ಮಾರಾಟ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
 
ಹೊರಗಿನ ಕೆಲವರು ಗ್ರಾಮಕ್ಕೆ ಬಂದಿದ್ದು, ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಂತೆ ಸಾರ್ವಜನಿಕವಾಗಿ ನಿವಾಸಿಗಳನ್ನು ಕೇಳಿಕೊಂಡಿರುವುದಾಗಿ ನಮ್ಮ ಗಮನಕ್ಕೆ ಬಂದಿದೆ. ನಾವು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೆಚ್ಚುವರಿ ಎಸ್ಪಿ ತಿಳಿಸಿದ್ದಾರೆ.

Boycott "Muslims Vendors",Villagers in Sarguja Chhattisgarh, seen taking the Oath in Viral Video, according to the officials, the video appears to be a fallout of a brawl between residents of two villages on January 1, police have initiated a probe @ndtv @ndtvindia pic.twitter.com/zAdPKDtzNw

— Anurag Dwary (@Anurag_Dwary) January 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X