Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ 3ನೇ ಅಲೆ ಪೆಬ್ರವರಿ 1-15ರ ನಡುವೆ...

ಕೋವಿಡ್ 3ನೇ ಅಲೆ ಪೆಬ್ರವರಿ 1-15ರ ನಡುವೆ ಉತ್ತುಂಗಕ್ಕೆ ತಲುಪಲಿದೆ: ಮದ್ರಾಸ್ ಐಐಟಿ ವಿಶ್ಲೇಷಣೆ

ವಾರ್ತಾಭಾರತಿವಾರ್ತಾಭಾರತಿ8 Jan 2022 11:23 PM IST
share
ಕೋವಿಡ್ 3ನೇ ಅಲೆ ಪೆಬ್ರವರಿ 1-15ರ ನಡುವೆ ಉತ್ತುಂಗಕ್ಕೆ ತಲುಪಲಿದೆ: ಮದ್ರಾಸ್ ಐಐಟಿ ವಿಶ್ಲೇಷಣೆ

ಹೊಸದಿಲ್ಲಿ, ಜ. 8: ಕೋವಿಡ್ ಹರಡುವುದನ್ನು ಸೂಚಿಸುವ ಭಾರತದ ಆರ್-ನಾಟ್ ಮೌಲ್ಯ ಈ ವಾರ 4 ದಾಖಲಾಗಿದೆ. ಇದು ಅತಿ ಹೆಚ್ಚು ಸೋಂಕು ಹರಡುವ ದರವನ್ನು ಸೂಚಿಸುತ್ತದೆ ಎಂದು ಹೇಳಿರುವ ಮದ್ರಾಸ್ ಐಐಟಿಯ ಪ್ರಾಥಮಿಕ ವಿಶ್ಲೇಷಣೆ, ಕೋವಿಡ್ ಮೂರನೇ ಅಲೆ ಫೆಬ್ರವರಿ 1 ಹಾಗೂ 15ರ ನಡುವೆ ಉತ್ತುಂಗ ಸ್ಥಿತಿಗೆ ತಲುಪುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಿದೆ. 

ಆರ್-ನಾಟ್ ಅಥವಾ ಆರ್0 ಓರ್ವ ಸೋಂಕಿತ ವ್ಯಕ್ತಿಯು ಸೋಂಕನ್ನು ಹರಡಬಹುದಾದ ವ್ಯಕ್ತಿಗಳ ಸಂಖ್ಯೆಯನ್ನು ಸೂಚಿಸುತ್ತದೆ. ಈ ಸಂಖ್ಯೆ 1ಕ್ಕಿಂತ ಕೆಳಗೆ ಇಳಿದರೆ ಸಾಂಕ್ರಾಮಿಕ ರೋಗ ಅಂತ್ಯಗೊಳ್ಳುತ್ತದೆ ಎಂದು ಪರಿಗಣಿಸಲಾಗುತ್ತದೆ. ಮದ್ರಾಸ್ ಐಐಟಿಯ ಕಂಪ್ಯೂಟೇಶನಲ್ ಮಾಡಲೆಂಗ್ ನ ಮೂಲಕ ಮಾಡಿದ ಪ್ರಾಥಮಿಕ ವಿಶ್ಲೇಷಣೆಯಲ್ಲಿ ಕಳೆದ ವಾರ (ಡಿಸೆಂಬರ್ 25ರಿಂದ ಡಿಸೆಂಬರ್ 31)ದ ವರೆಗೆ ದೇಶಾದ್ಯಂತ ಆರ್ ನಾಟ್ ವೌಲ್ಯ 2.9ರ ಸಮೀಪಕ್ಕೆ ಬಂದಿತ್ತು. 

ಈ ವಾರ (ಜನವರಿ 1-6) ಆ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಆರ್-ನಾಟ್ ಮೂರು ಅಂಶಗಳನ್ನು ಆಧರಿಸಿದೆ, ಒಂದು ಹರಡುವ ಸಾಧ್ಯತೆ, ಎರಡನೇಯದು ಸಂಪರ್ಕ ದರ ಹಾಗೂ ಮೂರನೆಯದು ಸೋಂಕು ತಗಲುವ ನಿರೀಕ್ಷಿತ ಮಧ್ಯಂತರ ಸಮಯ ಎಂದು ಮದ್ರಾಸ್ ಐಐಟಿಯ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಯಂತ್ ಝಾ ಅವರು ವಿವರಿಸಿದ್ದಾರೆ. 

‘‘ಕ್ವಾರಂಟೈನ್ ಕ್ರಮಗಳು ಅಥವಾ ನಿರ್ಬಂಧದಿಂದ ಈಗ ಸಂಪರ್ಕ ದರ ಇಳಿಕೆಯಾಗುವ ಸಾಧ್ಯತೆ ಇದೆ. ಅನಂತರ ಆರ್ ನಾಟ್ ಪ್ರಕರಣಗಳಲ್ಲಿ ಇಳಿಕೆಯಾಗಬಹುದು. ಆದುದರಿಂದ ಕಳೆದ ಕೇವಲ ಎರಡು ವಾರಗಳನ್ನು ಆಧರಿಸಿದ ನಮ್ಮ ಪ್ರಾಥಮಿಕ ವಿಶ್ಲೇಷಣೆ ಮೂಲಕ ಈ ಸಂಖ್ಯೆಯನ್ನು ಹೇಳಬಹುದು. ಆದರೆ, ಸಾಮಾಜಿಕವಾಗಿ ಸೇರುವಿಕೆಗೆ ಹಾಗೂ ಇತರ ಎಲ್ಲ ಅಂಶಗಳಿಗೆ ಸಂಬಂಧಿಸಿ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಈ ಸಂಖ್ಯೆಗಳು ಬದಲಾಗುವ ಸಾಧ್ಯತೆ ಇರುತ್ತದೆೆ’’ ಎಂದು ಅವರು ಹೇಳಿದ್ದಾರೆ. 

ಒಮೈಕ್ರಾನ್ ರೂಪಾಂತರಿಯಿಂದ ಕೋವಿಡ್ ಸೋಂಕಿನ ಪ್ರಕರಣಗಳು ಅತಿಯಾಗಿ ಏರಿಕೆಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿತ್ತು. ಇದು ದೇಶದ ಆರ್ ನಾಟ್ ಮೌಲ್ಯ 2.69 ಹಾಗೂ ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಉತ್ತುಂಗದ ಸಂದರ್ಭ ದಾಖಲಾದ 1.69ಕ್ಕಿಂತ ಹೆಚ್ಚು ಎಂಬುದರ ಬಗ್ಗೆ ಬೆಳಕು ಬೀರಿದೆ ಎಂದು ಝಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X