Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಣ ಪಾವತಿಸಿದ ತಕ್ಷಣ ಮಾಲಕರಿಗೆ ವಾಹನ...

ಹಣ ಪಾವತಿಸಿದ ತಕ್ಷಣ ಮಾಲಕರಿಗೆ ವಾಹನ ಹಸ್ತಾಂತರಿಸಬೇಡಿ: ಆರ್‌ಟಿಓ

ವಾರ್ತಾಭಾರತಿವಾರ್ತಾಭಾರತಿ9 Jan 2022 7:47 PM IST
share

ಉಡುಪಿ, ಜ.9: ವಾಹನದ ನೋಂದಣಿಗೋಸ್ಕರ ವಾಹನದ ಅಡಿಗಚ್ಚಿನ ಪೆನ್ಸಿಲ್ ಮಾರ್ಕ್‌ನ್ನು ತೆಗೆದ ಕೂಡಲೇ ವಾಹನವನ್ನು ಯಾವ ಕಾರಣದಿಂದಲೂ ವಾಹನ ಮಾಲಕರಿಗೆ ನೀಡಬಾರದು. ನೋಂದಣಿ ಅರ್ಜಿಯನ್ನು ಕಚೇರಿಗೆ ಸಲ್ಲಿಸಿದ 24 ಗಂಟೆಯ ನಂತರವೇ ವಾಹನದ ಮಾಲಕರಿಗೆ ವಾಹನವನ್ನು ಹಸ್ತಾಂತರಿಸಬೇಕು ಎಂದು ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ ತಿಳಿಸಿದ್ದಾರೆ.

ಇತ್ತೀಚೆಗೆ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲೆಯ ದ್ವಿಚಕ್ರ ಮತ್ತು ಲಘು ಮೋಟಾರು ವಾಹನ ಮಾರಾಟ ಗಾರರ ಪ್ರತಿನಿಧಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು. ಹಣ ಪಾವತಿಸಿದ ಕೂಡಲೇ ಯಾರು ವಾಹನವನ್ನು ವಾಹನದ ಮಾಲಕರಿಗೆ ಹಸ್ತಾಂತರಿಸುತ್ತಾರೋ ಅವರೇ ವಾಹನ ಅಪಘಾತವಾದ ಸಂದರ್ಭದಲ್ಲಿ ಕಾನೂನು ರೀತಿಯ ಹೊಣೆಗಾರಿಕೆಯನ್ನು ಭರಿಸಬೇಕಾಗುತ್ತದೆ ಎಂದರು.

ನೋಂದಣಿಯಾದ ವಾಹನಗಳ ಪರಿಶೀಲನಾ ಪತ್ರವನ್ನು ಹೇಗೆ ಭರ್ತಿ ಮಾಡ ಬೇಕು ಹಾಗೂ ಗ್ಯಾಸ್‌ ರಹಿತ ವಾಹನಗಳಿಗೆ ಕೂಡ ಗ್ಯಾಸ್ ರಹಿತ ಎಂದು ಮೋಟಾರು ವಾಹನ ಮಾರಾಟಗಾರರ ಪರಿಶೀಲನಾ ವರದಿಯಲ್ಲಿ ಸೂಕ್ತವಾಗಿ ಸರಿಯಾಗಿ ಅಚ್ಚುಕಟ್ಟಾಗಿ ಭರ್ತಿ ಮಾಡುವ ವಿವರಗಳನ್ನು ಸಭೆಯಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ವಿಳಂಬವಾಗಿ ವಾಹನ ನೋಂದಣಿಗೆ ಅರ್ಜಿ ಸಲ್ಲಿಸುವುದರಿಂದ ಆಗುವಂತಹ ತೊಂದರೆ ಬಗ್ಗೆ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಆರ್‌ಟಿಓ ಕಚೇರಿ ಅಧೀಕ್ಷಕಿಯರಾದ ಪಮಿತ, ಗೀತಾ ಹಾಗೂ 25 ಮಂದಿ ಮಾರಾಟ ಗಾರರ ಪ್ರತಿನಿಧಿಗಳು ಹಾಜರಿದ್ದರು.

ಬಿಎಚ್ ಶ್ರೇಣಿಯ ವಾಹನ ನೋಂದಾವಣೆ

ಬಿಎಚ್ ಶ್ರೇಣಿಯ ವಾಹನಗಳನ್ನು ನೋಂದಾಯಿಸಲು ಡೀಲರ್ ಮೂಲಕವಾಗಲೀ, ವಾಹನದ ಮಾಲಕರಾಗಲೀ ನೋಂದಣಿ ಸಮಯದಲ್ಲಿ ವಾಹನದ ಮಾಲಕರ ವಿಳಾಸ, ಪುರಾವೆ, ಗುರುತು ಚೀಟಿ, ಸಂಬಂಧಪಟ್ಟ ಕಚೇರಿಯ ಅಧಿಕೃತ ಅಧಿಕಾರಿಯ ಮೊಹರು ಹಾಗೂ ಸರಿ ಇರುವ ವೇತನ ಪ್ರಮಾಣಪತ್ರ ಅದಕ್ಕೆ ತತ್ಸಬಂಧ ಅಧಿಕಾರಿಗಳ ದೃಢೀಕೃತ ಪ್ರತಿಗಳನ್ನು ನಮೂನೆ 20ರೊಂದಿಗೆ ಲಗತ್ತಿಸಿ ಪರಿಶೀಲನಾ ಸಮಯದಲ್ಲಿ ಎಲ್ಲವನ್ನೂ ಹಾಜರು ಪಡಿಸಬೇಕು ಎಂದು ಜೆ.ಪಿ.ಗಂಗಾಧರ ತಿಳಿಸಿದರು.

ಅಖಿಲ ಭಾರತ ಸೇವೆಯ ಅಧಿಕಾರಿಗಳು, ಅಂತಾರಾಜ್ಯ ವರ್ಗಾವಣೆ ಹೊಂದುವ ಹುದ್ದೆಯಲ್ಲಿರುವ ಬ್ಯಾಂಕ್ ಅಧಿಕಾರಿಗಳು, ಕೇಂದ್ರ ಸರಕಾರದ ಬಿಎಚ್ ಶ್ರೇಣಿಯ ವಾಹನಗಳ ನೋಂದಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಉಡುಪಿ ಆರ್‌ಟಿಓ ಕಚೇರಿಯಲ್ಲಿ 2021ರ ಜ.1ರಿಂದ 2022ರ ಜ.7 ರವರೆಗೆ ಎಲೆಕ್ಟ್ರಿಕ್ ವಾಹನಗಳಾದ ಮೋಟಾರ್ ಸೈಕಲ್ -714, ಮೋಟಾರು ಕಾರು- 29, ಆಟೋ ರಿಕ್ಷಾ -1 ನೋಂದಾಯಿಸಲಾಗಿದೆ ಎಂದು ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X