ರಾಜ್ಯದಲ್ಲಿಂದು 12 ಸಾವಿರ ಮಂದಿಗೆ ಕೊರೋನ ದೃಢ, ನಾಲ್ಕು ಮಂದಿ ಮೃತ್ಯು

ಬೆಂಗಳೂರು, ಜ.9: ರಾಜ್ಯದಲ್ಲಿ ರವಿವಾರ 12 ಸಾವಿರ ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 4 ಮಂದಿ ಸೋಂಕಿಗೆ ಬಲಿಯಾಗಿದ್ದು, 901 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3,051,958ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,370ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 49,602ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ನಾಲ್ವರ ಸಾವು: ಬಳ್ಳಾರಿ 1, ಬೆಂಗಳೂರು ನಗರ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 12000 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 10, ಬಳ್ಳಾರಿ 107, ಬೆಳಗಾವಿ 105, ಬೆಂಗಳೂರು ಗ್ರಾಮಾಂತರ 98, ಬೆಂಗಳೂರು ನಗರ 9,020, ಬೀದರ್ 20, ಚಾಮರಾಜನಗರ 26, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 78, ಚಿತ್ರದುರ್ಗ 24, ದಕ್ಷಿಣ ಕನ್ನಡ 298, ದಾವಣಗೆರೆ 30, ಧಾರವಾಡ 147, ಗದಗ 7, ಹಾಸನ 182, ಹಾವೇರಿ 8, ಕಲಬುರಗಿ 98, ಕೊಡಗು 29, ಕೋಲಾರ 83, ಕೊಪ್ಪಳ 19, ಮಂಡ್ಯ 261, ಮೈಸೂರು 398, ರಾಯಚೂರು 7, ರಾಮನಗರ 20, ಶಿವಮೊಗ್ಗ 198, ತುಮಕೂರು 190, ಉಡುಪಿ 340, ಉತ್ತರ ಕನ್ನಡ 94, ವಿಜಯಪುರ 49, ಯಾದಗಿರಿ ಜಿಲ್ಲೆಯಲ್ಲಿ 10 ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 9,020 ಜನರಿಗೆ ಕೊರೋನ ದೃಢ
ರಾಜಧಾನಿಯಲ್ಲಿ ರವಿವಾರದಂದು 9,020 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,42,326 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,99,319 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,422 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಏಳು ವಿದೇಶಿ ಪ್ರಯಾಣಿಕರಲ್ಲಿ ಕೊರೋನ ದೃಢ
ವಿದೇಶದಿಂದ ರವಿವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇಂಗ್ಲೆಂಡ್ನಿಂದ ಬಂದಿರುವ ಮೂವರು, ಅಮೆರಿಕಾದ ಇಬ್ಬರು, ಐಲೆರ್ಂಡ್ ಹಾಗೂ ಟಾಂಜಾನಿಯಾ ಮೂಲದ ಓರ್ವ ವ್ಯಕ್ತಿಯಲ್ಲಿ ಸೊಂಕು ಪತ್ತೆಯಾಗಿದೆ.







