ಮಂಗಳೂರು, ಜ.9: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರ ಸೂಚನೆ ಮತ್ತು ಮಾಜಿ ಶಾಸಕ ಜೆ.ಆರ್.ಲೋಬೋರ ಶಿಫಾರಸ್ಸಿನ ಮೇರೆಗೆ ಕಾರ್ಮಿಕ ಮುಖಂಡ ಅಬ್ದುಲ್ ವಹಾಬ್ ಕುದ್ರೋಳಿ ಅವರನ್ನು ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿಯನ್ನಾಗಿ ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.