Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಲಸಿಕೆ ವಿರುದ್ಧ ಫ್ರಾನ್ಸ್,...

ಕೋವಿಡ್ ಲಸಿಕೆ ವಿರುದ್ಧ ಫ್ರಾನ್ಸ್, ಜರ್ಮನಿ, ಆಸ್ಟ್ರಿಯ, ಇಟಲಿಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Jan 2022 11:35 PM IST
share
ಕೋವಿಡ್ ಲಸಿಕೆ ವಿರುದ್ಧ ಫ್ರಾನ್ಸ್, ಜರ್ಮನಿ, ಆಸ್ಟ್ರಿಯ, ಇಟಲಿಯಲ್ಲಿ ಪ್ರತಿಭಟನೆ

ಹೊಸದಿಲ್ಲಿ, ಜ. 9: ಕೋವಿಡ್ ಲಸಿಕೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಪಶ್ಚಿಮ ಯುರೋಪ್‌ ನಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಲಸಿಕೆ ತೆಗೆದುಕೊಳ್ಳದವರ ಹಕ್ಕುಗಳನ್ನು ನಿರ್ಬಂಧಿಸುವ ಸರಕಾರದ ಯೋಜನೆಗಳನ್ನು ವಿರೋಧಿಸಿ ಫ್ರಾನ್ಸ್ ನಲ್ಲಿ 1 ಲಕ್ಷಕ್ಕೂ ಅಧಿಕ ಜನರು ರ್ಯಾಲಿ ನಡೆಸಿದ್ದಾರೆ.

ಫ್ರಾನ್ಸ್ ನ ರಾಜಧಾನಿ ಪ್ಯಾರಿಸ್ ನಲ್ಲಿ ಪ್ರತಿಭಟನಕಾರರು (ಹೆಚ್ಚಿನವರು ಮಾಸ್ಕ್ ಧರಿಸಿಲ್ಲ) ಮಳೆ, ಚಳಿ ಲೆಕ್ಕಿಸದೆ ಶನಿವಾರ ರ‍್ಯಾಲಿ ನಡೆಸಿದರು. ಅಲ್ಲದೆ ಅವರು ‘ಸತ್ಯ’, ‘ಸ್ವಾತಂತ್ರ’ ಹಾಗೂ ‘ಲಸಿಕೆ ಪಾಸ್ ಗೆ ಧಿಕ್ಕಾರ’ ಮೊದಲಾದ ಪ್ರದರ್ಶನಾ ಫಲಕಗಳನ್ನು ಹಿಡಿದುಕೊಂಡಿದ್ದರು.

ಲಸಿಕೆ ಪಡೆದುಕೊಳ್ಳದವರ ಬದುಕು ಹೇಗೆ ದುಸ್ತರವಾಗಿ ಮಾಡುತ್ತೇನೆಂದರೆ, ಅವರು ಕೊನೆಗೆ ಲಸಿಕೆ ತೆಗೆದುಕೊಳ್ಳಬೇಕಾದ ದುಸ್ಥಿತಿ ಬರುತ್ತದೆ ಎಂದು ಕಳೆದ ವಾರ ಹೇಳಿಕೆ ನೀಡುವ ಮೂಲಕ ಕೋಲಾಹಲಕ್ಕೆ ಕಾರಣವಾಗಿದ್ದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡಿದ್ದಾರೆ.

ಫ್ರಾನ್ಸ್ ನಲ್ಲಿ ಆಹಾರ ಸೇವನೆ ಸ್ಥಳಕ್ಕೆ ಆಗಮಿಸುವ, ಅಂತರ್ನಗರ ರೈಲುಗಳಲ್ಲಿ ಪ್ರಯಾಣಿಸುವ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ ಕೋವಿಡ್ ವಿರುದ್ಧ ಸಂಪೂರ್ಣ ಲಸಿಕೆ ತೆಗೆದುಕೊಂಡಿರುವುದನ್ನು ಜನರು ಸಾಬೀತುಪಡಿಸಬೇಕೆಂಬ ಸರಕಾರದ ವಿಧೇಯಕಕ್ಕೆ ದೇಶದ ಕೆಳಮನೆ ಅನುಮೋದನೆ ನೀಡಿದ ಹಾಗೂ ಶುಕ್ರವಾರ ಒಂದೇ ದಿನ 300,000ಕ್ಕೂ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವಂತೆ ಈ ಪ್ರತಿಭಟನೆ ನಡೆದಿದೆ.

ಜನವರಿ ಒಳಗೆ ಹೊಸ ನಿಯಮಗಳನ್ನು ನಿರೀಕ್ಷಿಸಿದೆ. ಆದರೆ ಸೆನೆಟ್ ಲ್ಲಿರುವ ಶಾಸಕರು ಈ ಪ್ರಕ್ರಿಯೆಯನ್ನು ವಿಳಂಬ ಮಾಡಬಹುದು ಎಂದು ಸರಕಾರ ತಿಳಿಸಿದೆ.

ಫ್ರಾನ್ಸ್ ನಾದ್ಯಂತ ಶನಿವಾರ ನಡೆದ ಪ್ರತಿಭಟನೆಯಲ್ಲಿ 105,200 ಜನರು ಪಾಲ್ಗೊಂಡಿದ್ದಾರೆ. ಪ್ಯಾರೀಸ್ ನಗರವೊಂದರಲ್ಲೇ 18,000 ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. 10 ಮಂದಿ ಪ್ರತಿಭಟನಕಾರರನ್ನು ಬಂಧಿಸಲಾಗಿದೆ. ಮೂವರು ಅಧಿಕಾರಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ವರದಿ ಮಾಡಿದ್ದಾರೆ ಎಂದು ಫ್ರಾನ್ಸ್ ನ ಗೃಹ ಸಚಿವಾಲಯ ತಿಳಿಸಿದೆ.

ಇನ್ನೊಂದೆಡೆ 24 ಮಂದಿಯನ್ನು ಬಂಧಿಸಲಾಗಿದೆ ಹಾಗೂ 7 ಪೊಲೀಸರಿಗೆ ಅಲ್ಪಸ್ಪಲ್ಪ ಗಾಯಗಳಾಗಿವೆ ಎಂದು ಸಚಿವಾಲಯ ತಿಳಿಸಿದೆ.

ಟೌಲೋನ್ ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 6,000 ಪ್ರತಿಭಟನಾಕಾರರು ಪಾಲ್ಗೊಂಡಿದ್ದಾರೆ. ಇಲ್ಲಿ ಪ್ರತಿಭಟನಕಾರರೊಂದಿಗೆ ಘರ್ಷಣೆ ನಡೆದ ಸಂದರ್ಭ ಮೋಂಟ್ಪೆಲ್ಲಿಯರ್ ಪೊಲೀಸರು ಅಶ್ರುವಾಯು ಸೆಲ್ ಗಳನ್ನು ಸಿಡಿಸಿದ್ದಾರೆ.

ಕೋವಿಡ್ ಲಸಿಕೆಯನ್ನು ಮುಂದಿನ ತಿಂಗಳಿಂದ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಆಸ್ಟ್ರೇಲಿಯಾದ ರಾಜಧಾನಿ ವಿಯೆನ್ನಾದಲ್ಲಿ 40,000ಕ್ಕೂ ಅಧಿಕ ಜನರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
  
ಜರ್ಮನಿಯಲ್ಲಿ ಪ್ರತಿಭಟನಕಾರರು ಹಲವು ನಗರಗಳಲ್ಲಿ ಶನಿವಾರ ರ‍್ಯಾಲಿ ನಡೆಸಿದ್ದಾರೆ. ಹಂಬರ್ಗ್ ನಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, 16,000 ಪ್ರತಿಭಟನಾಕಾರರು ಪಾಲ್ಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ‘‘ಸಾಕು! ನಮ್ಮ ಮಕ್ಕಳ ಮೇಲಿಂದ ಕೈ ತೆಗೆಯಿರಿ’’ ಸಂಘಟನೆಯ ಅಡಿಯಲ್ಲಿ ಪ್ರತಿಭಟನೆ ನಡೆಯಿತು.  

ಲಸಿಕೆ ಕಡ್ಡಾಯಗೊಳಿಸಲು ಬಯಸುತ್ತಿರುವ ಜರ್ಮನಿ ಕಳೆದ ತಿಂಗಳಿಂದ 5ರಿಂದ 11 ವರ್ಷಗಳ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಿದೆ. ಓರ್ವ ಪ್ರತಿಭಟನಾಕಾರನು ಯೆಹೂದಿ ಧರ್ಮದ ಸಂಕೇತವಾದ ‘ಸ್ಟಾರ್ ಆಫ್ ಡೆವಿಡ್’ ಲಾಂಛನವನ್ನು ‘ಲಸಿಕೆ ಪಡೆದುಕೊಂಡಿಲ್ಲ’ ಎಂಬ ಬರಹದೊಂದಿಗೆ ಧರಿಸಿದ್ದನು ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರ್ಲಿನ್ ನಲ್ಲಿ ಕೋವಿಡ್ ಲಸಿಕೆಯ ವಿರುದ್ಧ ಕಾರು ಹಾಗೂ ಬೈಕ್ ಗಳ ರ‍್ಯಾಲಿ ನಡೆಸಲಾಯಿತು. 100 ವಾಹನಗಳು, 70 ಬೈಕ್ ಗಳು ಹಾಗೂ ಸರಿಸುಮಾರು 200 ಜನರು ಪಾಲ್ಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಲಸಿಕೆ ವಿರೋಧಿಸುತ್ತಿರುವವರು ಹಾಗೂ ಕೊರೋನ ವೈರಸ್ ಅನ್ನು ನಿರಾಕರಿಸುತ್ತಿರುವವರು ವಾದಗಳಲ್ಲಿ ಹುರುಳಿಲ್ಲ ಎಂದು ಜರ್ಮನ್ ನ ಆರೋಗ್ಯ ಸಚಿವ ಕಾರ್ಲ್ ಲೌಟರ್ಬೇಕ್ ತಿಳಿಸಿದ್ದಾರೆ.

 ‘‘’ಒಂದು ಸಣ್ಣ ಗುಂಪು ಎಲ್ಲಾ ವೈಜ್ಞಾನಿಕ ಜ್ಞಾನವನ್ನು ಅಲ್ಲಗಳೆಯುತ್ತಿದೆ ಹಾಗೂ ಸ್ವಯಂಪ್ರೇರಿತವಾಗಿ ಸುಳ್ಳಿನ ಗುಳ್ಳೆ ಮೇಲೆ ತೇಲಾಡುತ್ತಿದೆ’ ಎಂದು ಅವರು ‘ವೆಲ್ಟ್ ಆ್ಯಮ್ ಸೊಂಟೇಜ್’ ಪತ್ರಿಕೆಗೆ ತಿಳಿಸಿದ್ದಾರೆ. ಇಟಲಿಯಲ್ಲಿ ಕೂಡ ಪ್ರತಿಭಟನೆ ನಡೆದಿದೆ. 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಟುರಿನ್ ನ ನಗರದಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X