Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ10 Jan 2022 12:05 AM IST
share
ಓ ಮೆಣಸೇ...

ಹೋರಾಟ ನನ್ನ ರಕ್ತದಲ್ಲೇ ಇದೆ
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಬಡಕಲಾಗಿರುವ ಕಾಂಗ್ರೆಸ್‌ಗೆ ತಿಂಗಳಿಗೆ ಒಮ್ಮೆಯಾದರೂ ರಕ್ತ ದಾನ ಮಾಡಿ.


ಕೊರೋನ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಿದೆ
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಜನಸಾಮಾನ್ಯರ ಮೇಲೆ ಮೂರನೇ ಹಲ್ಲೆ ಎಂದರೆ ಚೆನ್ನಾಗಿರುತ್ತದೆ.


ನಾನು ಸಚಿವನಾಗಿ ಅಧಿಕಾರದಲ್ಲೇ ಇರಬೇಕು ಎಂದು ಬಯಸುವವನಲ್ಲ
-ಗೋವಿಂದ ಕಾರಜೋಳ, ಸಚಿವ

ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದರೂ ನಡೆಯುತ್ತದೆ ಅಲ್ಲವೇ ?

ನಾನು ಈಗಲೂ ದೊಡ್ಡ ನಾಯಕ. ಪಕ್ಷ ಹೇಳಿದರೆ ಬ್ಯಾಗ್ ತೆಗೆದುಕೊಂಡು ಹೇಳಿದ ಸ್ಥಳಕ್ಕೆ ಹೋಗಿ ಸ್ಪರ್ಧಿಸಲು ಸಿದ್ಧ
-ಶ್ರೀರಾಮುಲು, ಸಚಿವ

ಬ್ಯಾಗ್‌ನೊಳಗೆ ಎಷ್ಟು ಕೋಟಿ ತುಂಬಿಕೊಂಡಿರುತ್ತೀರಿ?

ಯಾವ ಕಾರಣಕ್ಕೂ ದೇಶದ ಅಭಿವೃದ್ಧಿಯನ್ನು ತಡೆಯಲು ಕೊರೋನಕ್ಕೆ ಬಿಡುವುದಿಲ್ಲ
-ನರೇಂದ್ರ ಮೋದಿ, ಪ್ರಧಾನಿ

ಕೊರೋನಾಕ್ಕೆ ಮೊದಲೇ ಆ ಕೆಲಸ ನೀವೇ ಮಾಡುತ್ತಾ ಬಂದಿದ್ದೀರಿ.

ಕೊರೋನ ಬಗ್ಗೆ ನಿರ್ಲಕ್ಷ ತೋರಿದರೆ ಲಾಕ್‌ಡೌನ್ ಅನಿವಾರ್ಯ
-ಆರ್.ಅಶೋಕ್, ಸಚಿವ

ಇದು ರಾಜಕಾರಣಿಗಳಿಗೆ ಅನ್ವಯಿಸುತ್ತದೆಯೇ?

ಹಿಂದುತ್ವ ಮತ್ತು ಕಾರ್ಪೊರೇಟ್ ಯಜಮಾನಿಕೆಯಿಂದ ದೇಶ ವಿನಾಶದಂಚಿಗೆ ತಲುಪಿದೆ
-ಪ್ರಕಾಶ್ ಕಾರಟ್, ಸಿಪಿಐಎಂ ನಾಯಕ

ಸಿಪಿಎಂ ವಿನಾಶದಂಚಿಗೆ ತಲುಪಿರುವ ಕಾರಣಗಳನ್ನು ಕಂಡು ಹಿಡಿಯಿರಿ.

ಪೊಲೀಸರು ಒಳ್ಳೆಯ ಕೆಲಸ ಮಾಡದಿದ್ದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಂದರ್ಭ ಎದುರಾಗುತ್ತದೆ
-ಆರಗ ಜ್ಞಾನೇಂದ್ರ, ಸಚಿವ

ಇನ್ನಾದರೂ ಕೊಡಬಾರದೇ?

ಹಿಂದೂ ಸಮಾಜದ ಪ್ರತಿಯೊಂದು ಸಮುದಾಯಗಳು ತಮ್ಮತನವನ್ನು ಉಳಿಸಿಕೊಂಡಾಗ ಮಾತ್ರ ಹಿಂದೂ ಸಮಾಜ ಎದ್ದು ನಿಲ್ಲಲು ಸಾಧ್ಯ
-ರಾಘವೇಶ್ವರ ಸ್ವಾಮೀಜಿ, ರಾಮಚಂದ್ರಾಪುರ ಮಠ

ತಮ್ಮತನವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸ್ವಾಮೀಜಿಗೆ ಇಲ್ಲವೇ?

ಹಿಂದೂ, ಇಸ್ಲಾಮ್ ಮತ್ತು ಕ್ರೈಸ್ತ ಧರ್ಮಕ್ಕೂ ಮತಾಂತರದ ಕಂಟಕ ಇದೆ
-ನಳಿನ್ ಕುಮಾರ್ ಕಟೀಲು, ಸಂಸದ

ಮತಾಂತರ ಕಂಟಕ ಯಾರಿಗೆ? ಮತಾಂತರ ಆಗುವವರಿಗೆ ಅದೊಂದು ಬಿಡುಗಡೆ.

ಬಿಜೆಪಿಯದ್ದು ಬೇರ್ಪಡಿಸುವ ಕತ್ತರಿ, ಕಾಂಗ್ರೆಸ್‌ನದ್ದು ಜೋಡಿಸುವ ಸೂಜಿ

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಆ ಸೂಜಿಯಿಂದ ಹರಿದ ಕಾಂಗ್ರೆಸ್ಸನ್ನು ಹೊಲಿಯಬಾರದೇ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ‘ಆಕಸ್ಮಿಕ ಹಿಂದೂ’
-ಯೋಗಿ ಆದಿತ್ಯನಾಥ್, ಉ.ಪ್ರ. ಸಿಎಂ

ನೀವು ಕನಿಷ್ಠ ಒಬ್ಬ ಆಕಸ್ಮಿಕ ಮನುಷ್ಯನಾಗಿ ಯಾದರೂ ಬದಲಾಗಬಾರದೆ?

ಮುಖ್ಯಮಂತ್ರಿ ಬೊಮ್ಮಾಯಿ ಬದಲಾವಣೆ ಕುರಿತಂತೆ ಕಾಂಗ್ರೆಸ್‌ನವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ
-ಬಿ.ವೈ.ವಿಜಯೇಂದ್ರ, ಬಿಜೆಪಿ ಉಪಾಧ್ಯಕ್ಷ

ಬಿಜೆಪಿಯವರು ಹಬ್ಬಿಸುತ್ತಿರುವ ಸುದ್ದಿಯ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

ಪಾದಯಾತ್ರೆಯಿಂದ ಕೊರೋನ ಹೆಚ್ಚಿದರೆ ಅದಕ್ಕೆ ಕಾಂಗ್ರೆಸ್ಸೇ ಹೊಣೆ
-ನಳಿನ್ ಕುಮಾರ್ ಕಟೀಲು, ಸಂಸದ

ಪಾದಯಾತ್ರೆ ಇಲ್ಲದೆ ಇದ್ದಾಗ ಕೊರೋನ ಹೆಚ್ಚಿತಲ್ಲ, ಅದರ ಹೊಣೆಯನ್ನು ಬಿಜೆಪಿ ಹೊತ್ತುಕೊಂಡಿದೆಯೇ?

ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದಲ್ಲಿ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಭಾಗವಹಿಸಲು ಅವಕಾಶ
-ರಘುಪತಿ ಭಟ್, ಶಾಸಕ

ಎರಡು ಡೋಸ್ ಲಸಿಕೆ ಹಾಕಿದವರಿಗೆ ಗರ್ಭ ಗುಡಿ ಪ್ರವೇಶ ಸಿಗಬಹುದೇ?

ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಬೊಮ್ಮಾಯಿ ಹೀಗೆ ನಮ್ಮದು ಡಬಲ್ ಇಂಜಿನ್ ಸರಕಾರ -ಶ್ರೀರಾಮುಲು, ಸಚಿವ

ಡಬಲ್ ಇಂಜಿನ್ ಬುಲ್ಡೋಜರ್ ಎಂದರೆ ಚೆನ್ನಾಗಿತ್ತು. ಪ್ರಪಂಚದ ಯಾವುದೇ ಒಂದು ದೇಶ ಕೋವಿಡ್‌ನಿಂದ ಮುಕ್ತವಾಗಿಲ್ಲ
-ಡಾ.ಜಿ.ಪರಮೇಶ್ವರ್, ಶಾಸಕ

ಅದಕ್ಕಾಗಿ ಭಾರತ ಕೋವಿಡ್‌ನಿಂದ ಮುಕ್ತವಾಗುವ ಅಗತ್ಯವಿಲ್ಲ ಎಂದು, ಅಭಿಪ್ರಾಯವೇ?

ಮೇಕೆದಾಟು ವಿಳಂಬದ ಮಾಹಿತಿ ಹೊರ ಹಾಕುವೆ ಎಂದಿದ್ದಕ್ಕೆ ಕಾಂಗ್ರೆಸ್ ನಾಯಕರೆಲ್ಲ ಮೈಮೇಲೆ ದೆವ್ವ ಬಂದಂತೆ ಕುಣಿಯುತ್ತಿದ್ದಾರೆ
-ಗೋವಿಂದ ಕಾರಜೋಳ, ಸಚಿವ

ಪಾದಯಾತ್ರೆ ವಿರುದ್ಧ ನೀವೇಕೆ ಮೈಮೇಲೆ ಕೊರೋನ ಬಂದವರಂತೆ ಆಡುತ್ತಿರುವುದು? ಭಾರತದ ಅಭ್ಯುದಯ ಯುವ ಜನರ ಕೈಯಲ್ಲಿದೆ
-ಥಾವರ್‌ಚಂದ್ ಗೆಹ್ಲೋಟ್, ರಾಜ್ಯಪಾಲ

ಮೋದಿಗೆ ವಯಸ್ಸಾಯಿತೇ?

ಚುನಾವಣೆಯಲ್ಲಿ ಬಹುಮತದೊಂದಿಗೆ ಉ.ಪ್ರ.ದಲ್ಲಿ ಎಸ್ಪಿ ಸರಕಾರ ರಚನೆ ಮಾಡಲಿದೆ ಎಂದು ಶ್ರೀಕೃಷ್ಣನೇ ನನ್ನ ಕನಸಿನಲ್ಲಿ ಬಂದು ಹೇಳಿದ್ದಾನೆ
-ಅಖಿಲೇಶ್ ಯಾದವ್, ಎಸ್ಪಿ ಅಧ್ಯಕ್ಷ

ಸರಕಾರ ರಚನೆಯೂ ಕನಸಿನಲ್ಲೇ ನಡೆಯಲಿದೆಯೇ?

ರಾಜಕಾರಣಕ್ಕೆ ನಿವೃತ್ತಿ, ವಿದ್ಯಾರ್ಹತೆ ಎರಡೂ ಇಲ್ಲ
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಪ್ರಧಾನಿಯ ವಿದ್ಯಾರ್ಹತೆಯನ್ನು ಕೇಳಿದವರಿಗೆ ಇದು ಉತ್ತರವಿರಬೇಕು.

ಜೆಡಿಎಸ್‌ನ ನಾಮಾವಶೇಷ ಮಾಡಲು ಯಾರಿಂದಲೂ ಸಾಧ್ಯವಿಲ್ಲ
-ದೇವೇಗೌಡ, ಮಾಜಿ ಪ್ರಧಾನಿ

ನೀವು ಮತ್ತು ನಿಮ್ಮ ಮಕ್ಕಳೇ ಸಾಕು.

ಕೊರೋನ 3ನೇ ಅಲೆ ಬೇಗನೆ ಏರಿ, ಬೇಗನೇ ಇಳಿಯಲಿದೆ
-ಡಾ.ಸುಧಾಕರ್, ಸಚಿವ

ಕೊರೋನವನ್ನು ಅಡಿಕೆ ಮರ ಏರಲು ಬಳಸಿದರೆ ಹೇಗೆ?

ಪ್ರಧಾನಿ ಮೋದಿ ಭದ್ರತಾ ವೈಫಲ್ಯದಲ್ಲಿ ಕೇಂದ್ರದ ಭದ್ರತಾ ಪಡೆಗಳ ಲೋಪವೇ ಹೊರತು ರಾಜ್ಯ ಸರಕಾರದ್ದಲ್ಲ
-ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡ
ಕೇಂದ್ರದ ಲೋಪಗಳು ಜನರಿಗೆ ಅಭ್ಯಾಸ ಆಗಿದೆ.

share
ಪಿ.ಎ.ರೈ
ಪಿ.ಎ.ರೈ
Next Story
X