ಬೆಂಗಳೂರು: ಬೈಕ್, ಕಾರುಗಳ ಮೇಲೆ ಬಿದ್ದ ಟಿಪ್ಪರ್; ಆರು ಮಂದಿ ಸ್ಥಳದಲ್ಲೇ ಮೃತ್ಯು
ಬೆಂಗಳೂರು: ಟಿಪ್ಪರ್ ವೊಂದು ಎರಡು ಕಾರು ಮತ್ತು ಒಂದು ಬೈಕ್ ಮೇಲೆ ಉರುಳಿ ಬಿದ್ದಿದ್ದು, ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು - ಮೈಸೂರು ಹೆದ್ದಾರಿಯ ಕುಂಬಳಗೋಡು ಸಮೀಪ ಘಟನೆ ಸಂಭವಿಸಿದೆ.
ಎರಡು ಕಾರುಗಳಲ್ಲಿ 10 ಮಂದಿ ಪ್ರಯಾಣಿಕರಿದ್ದು, ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯ ಅಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಸದ್ಯ ಸ್ಥಳಕ್ಕೆ ಕುಂಬಳಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.