Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಂಗಳೂರು ವಿವಿ ದೇಹದಾರ್ಢ್ಯ ಸ್ಪರ್ಧೆ:...

ಮಂಗಳೂರು ವಿವಿ ದೇಹದಾರ್ಢ್ಯ ಸ್ಪರ್ಧೆ: ಆಳ್ವಾಸ್ ಚಾಂಪಿಯನ್ಸ್, ತೆಂಕನಿಡಿಯೂರು ರನ್ನರ್‌ ಅಪ್

ವಾರ್ತಾಭಾರತಿವಾರ್ತಾಭಾರತಿ13 Jan 2022 9:32 PM IST
share

ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜು ತಂಡ ಚಾಂಪಿಯನ್‌ ಶಿಪ್ ಗೆದ್ದುಕೊಂಡಿದೆ.

ಆಳ್ವಾಸ್ ಪ್ರಥಮ ದರ್ಜೆ ಕಾಲೇಜಿನ ಅಕ್ಷಯ್ ಕೃಷ್ಣ‘ಮಿಸ್ಟರ್ ಯುನಿವರ್ಸಿಟಿ’ ಕಿರೀಟ ಧರಿಸಿದರು. ಆತಿಥೇಯ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ರನ್ನರ್‌ಅಪ್ ಪ್ರಶಸ್ತಿ ಗಳಿಸಿದೆ.

ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಸಿದ್ದರು. ಮಲ್ಪೆ ಲಯನ್ಸ್ ಅಧ್ಯಕ್ಷ ಕೃಷ್ಣಾನಂದ ಮಲ್ಪೆ, ಶಿಕ್ಷಣತಜ್ಞ ದಯಾನಂದ ಶೆಟ್ಟಿ ಕೊಜಕುಳಿ, ನಗರಸಭಾ ಸದಸ್ಯ ವಿಜಯ ಕೊಡವೂರು, ಮಂಗಳೂರು ವಿವಿ ಪರವಾಗಿ ದೈಹಿಕ ಶಿಕ್ಷಣ ಉಪ ನಿರ್ದೇಶಕ ಹರಿದಾಸ ಕೂಳೂರು, ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಶನ್ ಕಾರ್ಯದರ್ಶಿ ದಿಲೀಪ್‌ಕುಮಾರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಜೇತರಿಗೆ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಿದರು.

ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ ಸ್ವಾಗತಿಸಿದರೆ, ಕನ್ನಡ ಸಹ ಪ್ರಾಧ್ಯಾಪಕ ಡಾ. ಹೆಚ್.ಕೆ. ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ವಂದಿಸಿದರು.

ವಿಜೇತ ವಿವರಗಳು:

60 ಕೆ.ಜಿ. ವಿಭಾಗ: ಅಭಿಲಾಷ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕಡಿಯೂರು ಪ್ರಥಮ, ಶ್ರೀಧರ ಭಂಡಾರ್‌ಕಾರ್ಸ್‌ ಕಾಲೇಜು ಕುಂದಾಪುರ ದ್ವಿತೀಯ, ವೈಭವ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ತೃತೀಯ.

65 ಕೆ.ಜಿ. ವಿಭಾಗ : ಶರತ್ ಶೇರಿಗಾರ್ ಆಳ್ವಾಸ್ ಕಾಲೇಜು ಮೂಡಬಿದಿರೆ ಪ್ರಥಮ, ಅಮೃತ್ ಎನ್.ಕೆ. ಸೈಂಟ್ ಫಿಲೋಮಿನಾ ಕಾಲೇಜು ಪುತ್ತೂರು ದ್ವಿತೀಯ, ಶರತ್ ಜಿ. ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕಡಿಯೂರು ತೃತೀಯ.

70 ಕೆ.ಜಿ. ವಿಭಾಗ: ಜಯಜಿತ್ ಸಿಂಗ್ ಆಳ್ವಾಸ್ ಕಾಲೇಜು ಮೂಡಬಿದಿರೆ ಪ್ರಥಮ, ಕಾರ್ತಿಕ್‌ರಾಜ್ ವಿವೇಕಾನಂದ ಕಾಲೇಜು ಪುತ್ತೂರು ದ್ವಿತೀಯ, ರಿಯಾನ್ ಅನ್ಸಾನ್ ಕುಟಿನೋ ಸಂತ ಅಲೋಶಿಯಸ್ ಕಾಲೇಜು ತೃತೀಯ.

75 ಕೆ.ಜಿ. ವಿಭಾಗ: ಕಾರ್ತಿಕ್ ಬಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಶಾಲ ನಗರ ಪ್ರಥಮ, ಯೋಗೀಶ್ ಆಳ್ವಾಸ್ ಕಾಲೇಜು ಮೂಡಬಿಡಿದರೆ ದ್ವಿತೀಯ, ವಿಶ್ವಾಸ್ ಭಂಡಾರ್‌ಕಾರ್ಸ್‌ ಕಾಲೇಜು ಕುಂದಾಪುರ ತೃತೀಯ.
80 ಕೆ.ಜಿ. ವಿಭಾಗ: ಪ್ರಜ್ವಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ರಿಯಡಕ ಪ್ರಥಮ. 85 ಕೆ.ಜಿ. ವಿಭಾಗ: ಅಕ್ಷಯ್ ಕೃಷ್ಣ ಆಳ್ವಾಸ್ ಕಾಲೇಜು ಮೂಡಬಿಡಿದರೆ ಪ್ರಥಮ. 90 ಕೆ.ಜಿ. ವಿಭಾಗ: ಮೋಕ್ಷಿತ್ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಪ್ರಥಮ, ರೋಹಿತ್ ಜಿ. ಕ್ರಾಸ್‌ಲ್ಯಾಂಡ್ ಕಾಲೇಜು ಬ್ರಹ್ಮಾವರ ದ್ವಿತೀಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X