Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳನ್ನು ಸಾಕುವ ಹೊಣೆಯನ್ನು...

ಮಕ್ಕಳನ್ನು ಸಾಕುವ ಹೊಣೆಯನ್ನು ನಿರ್ಧರಿಸುವಾಗ ಹೆತ್ತವರ ಹಕ್ಕುಗಳು ಅಪ್ರಸ್ತುತ, ಮಗುವಿನ ಹಿತ ಮುಖ್ಯ: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Jan 2022 11:17 PM IST
share
ಮಕ್ಕಳನ್ನು ಸಾಕುವ ಹೊಣೆಯನ್ನು ನಿರ್ಧರಿಸುವಾಗ ಹೆತ್ತವರ ಹಕ್ಕುಗಳು ಅಪ್ರಸ್ತುತ, ಮಗುವಿನ ಹಿತ ಮುಖ್ಯ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಜ.13: ಮಕ್ಕಳ ಪಾಲನೆಯ ಹೊಣೆಯನ್ನು ನಿರ್ಧರಿಸುವಾಗ ಹೆತ್ತವರ ಹಕ್ಕುಗಳು ಅಪ್ರಸ್ತುತವಾಗುತ್ತವೆ ಮತ್ತು ಇಂತಹ ಸಂದರ್ಭಗಳಲ್ಲಿ ಮಗುವಿನ ಹಿತಚಿಂತನೆಯು ಅತ್ಯಂತ ಮುಖ್ಯವಾಗಿರುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

ಬುಧವಾರ ವಿಚಾರಣೆ ಸಂದರ್ಭ ನ್ಯಾಯಮೂರ್ತಿಗಳಾದ ಅಜಯ ರಸ್ತೋಗಿ ಮತ್ತು ಎ.ಎಸ್.ಓಕಾ ಅವರ ಪೀಠವು,ಅಪ್ರಾಪ್ತ ವಯಸ್ಕ ಮಗು ಯಾರ ಬಳಿಯಲ್ಲಿರಬೇಕು ಎನ್ನುವುದನ್ನು ಮತ್ತು ಮಗು ತನ್ನ ತವರು ದೇಶಕ್ಕೆ ಮರಳುವ ವಿಚಾರವನ್ನು ಅದರ ಹಿತಚಿಂತನೆಯ ಮಾನದಂಡದಲ್ಲಿ ಮಾತ್ರ ನಿರ್ಧರಿಸಬಹುದೇ ಹೊರತು ಹೆತ್ತವರ ಕಾನೂನು ಹಕ್ಕುಗಳ ಆಧಾರದಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿತು.

ತನ್ನ ಅಪ್ರಾಪ್ತ ವಯಸ್ಕ ಮಗುವಿನ ಪಾಲನೆಯ ಹೊಣೆಯನ್ನು ಅಮೆರಿಕದ ಪ್ರಜೆಯಾಗಿರುವ ತಂದೆಗೆ ಒಪ್ಪಿಸಿರುವ ಪಂಜಾಬ್ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ತಾಯಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. ಮಗುವಿನೊಂದಿಗೆ ಅಮೆರಿಕಕ್ಕೆ ಮರಳುವಂತೆ ಉಚ್ಚ ನ್ಯಾಯಾಲಯವು ತಾಯಿಗೆ ನಿರ್ದೇಶ ನೀಡಿದ್ದು,ಇದನ್ನು ಆಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.

ಮಗುವಿನ ಮೂತ್ರಪಿಂಡ ಊತದ ಚಿಕಿತ್ಸೆಗಾಗಿ ತಾಯಿ ಅದನ್ನು ಭಾರತಕ್ಕೆ ಕರೆತಂದಿದ್ದರು. ಚಿಕಿತ್ಸೆಯ ಬಳಿಕ ತಾನು ಮಗುವಿನೊಂದಿಗೆ ಅಮೆರಿಕಕ್ಕೆ ಮರಳುವುದಾಗಿ ಒಪ್ಪಿಗೆ ಪತ್ರಕ್ಕೆ ಆಕೆ 2019,ಸೆ.26ರಂದು ಸಹಿ ಹಾಕಿದ್ದರು. ಈ ಪತ್ರದಂತೆ ಯೋಜನೆಯಲ್ಲಿ ಯಾವುದೇ ಬದಲಾವಣೆಯು ಹೆತ್ತವರ ಸಮ್ಮತಿಗೊಳಪಟ್ಟಿದೆ.

ಆದರೆ ಚಿಕಿತ್ಸೆ ಪೂರ್ಣಗೊಂಡ ಬಳಿಕ ಮಗುವನ್ನು ಅಮೆರಿಕಕ್ಕೆ ಮರಳಲು ತಾಯಿ ಅವಕಾಶ ನೀಡಿರಲಿಲ್ಲ.

ವೈದ್ಯಕೀಯ ಚಿಕಿತ್ಸೆಯಿಂದಾಗಿ ಮಗುವನ್ನು ಅಮೆರಿಕಕ್ಕೆ ಕರೆದೊಯ್ಯುವುದು ಕಾರ್ಯಸಾಧ್ಯವಲ್ಲ ಎಂದು ಆಕೆ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದ್ದರು.

ಬಳಿಕ ಮಗುವಿನ ತಂದೆ ಅದನ್ನು ತನ್ನ ಪಾಲನೆಗೆ ಒಪ್ಪಿಸುವಂತೆ ಕೋರಿ ಅಮೆರಿಕದ ಅರ್ಕಾನ್ಸಸ್‌ನ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು. ತನ್ನ ಮಗುವನ್ನು ದೇಶದ ಹೊರಗೆ ಅಕ್ರಮವಾಗಿ ದಿಗ್ಬಂಧನದಲ್ಲಿರಿಸಲಾಗಿದೆ ಎಂದು ಅವರು ಆರೋಪಿಸಿದ್ದರು. ಅನುಸರಣಾ ಚಿಕಿತ್ಸೆಗಾಗಿ ಭಾರತದಲ್ಲಿ ತನ್ನ ವಾಸ್ತವ್ಯಕ್ಕೆ ಯಾವುದೇ ಸಮರ್ಥನೀಯ ಕಾರಣಗಳನ್ನು ಅರ್ಜಿದಾರರು (ಮಗುವಿನ ತಾಯಿ) ನೀಡಿಲ್ಲ ಎಂದು ಅವರು ತಿಳಿಸಿದ್ದರು.

ಅಪ್ರಾಪ್ತ ವಯಸ್ಕ ಮಗುವನ್ನು ಚಿಕಿತ್ಸೆಗಾಗಿ ಭಾರತದಲ್ಲಿ ಇಟ್ಟುಕೊಳ್ಳಲು ಯಾವುದೇ ಪುರಾವೆಗಳಿಲ್ಲ ಎಂದು ಭಾರತದಲ್ಲಿ ವಿಚಾರಣೆ ಸಂದರ್ಭ ತಿಳಿಸಿದ ಸರ್ವೋಚ್ಚ ನ್ಯಾಯಾಲಯವು,ಮಗುವು ಅಮೆರಿಕಕ್ಕೆ ಮರಳುವುದು ಅದರ ಹಿತಾಸಕ್ತಿ ಮತ್ತು ಹಿತಚಿಂತನೆಗೆ ಅನುಗುಣವಾಗಿದೆ ಎಂಬ ನಿರ್ಧಾರಕ್ಕೆ ಬರಲು ಕಾರಣಗಳನ್ನು ಉಚ್ಚ ನ್ಯಾಯಾಲಯವು ನೀಡಿದೆ. ಉಚ್ಚ ನ್ಯಾಯಾಲಯವು ಅಮೆರಿಕದ ನ್ಯಾಯಾಲಯದ ಆದೇಶವನ್ನು ನಿರ್ಣಾಯಕ ಎಂದು ಪರಿಗಣಿಸಿಲ್ಲ. ಉಚ್ಚ ನ್ಯಾಯಾಲಯವು ತನ್ನ ಅಧಿಕಾರ ಚಲಾಯಿಸಿರುವುದನ್ನು ವಿಕೃತ ಅಥವಾ ಕಾನೂನುಬಾಹಿರ ಎಂದು ಹೇಳುವಂತಿಲ್ಲ ಎಂದು ಹೇಳಿತು. ಹೆತ್ತವರು ಎಲ್ಲಿ ವಾಸವಾಗುತ್ತಾರೆ ಎಂದು ತಾನು ಅವರನ್ನು ಕೇಳುವುದಿಲ್ಲ,ಏಕೆಂದರೆ ಅದು ಅವರ ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆ. ಮಗುವಿನ ಹಿತಚಂತನೆಯನ್ನು ಖಚಿತಪಡಿಸುವಂತೆ ತಾನು ಅವರನ್ನು ಆದೇಶಿಸಬಹುದು ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X