Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಎಪಿಎಂಸಿಗೆ ಆರ್ಥಿಕ ನಷ್ಟ: ಕೃಷಿ ಮಾರಾಟ...

ಎಪಿಎಂಸಿಗೆ ಆರ್ಥಿಕ ನಷ್ಟ: ಕೃಷಿ ಮಾರಾಟ ಇಲಾಖೆಯಲ್ಲಿ ಮಾಹಿತಿಯೇ ಇಲ್ಲ

ಜಿ.ಮಹಾಂತೇಶ್ಜಿ.ಮಹಾಂತೇಶ್14 Jan 2022 7:57 AM IST
share
ಎಪಿಎಂಸಿಗೆ ಆರ್ಥಿಕ ನಷ್ಟ: ಕೃಷಿ ಮಾರಾಟ ಇಲಾಖೆಯಲ್ಲಿ ಮಾಹಿತಿಯೇ ಇಲ್ಲ

ಬೆಂಗಳೂರು, ಜ.13: ಎಪಿಎಂಸಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತಂದ ನಂತರ ರಾಜ್ಯದ ಎಪಿಎಂಸಿಗಳಲ್ಲಿ ವ್ಯಾಪಾರ ವಹಿವಾಟುಗಳು ತೀರಾ ಕಡಿಮೆಯಾಗಿದೆ ಮತ್ತು ಎಪಿಎಂಸಿಗಳು ಆರ್ಥಿಕ ನಷ್ಟ ಅನುಭವಿಸುತ್ತಿದೆ ಎಂದು ಸರಕಾರವೇ ಅಧಿಕೃತವಾಗಿ ಒಪ್ಪಿಕೊಂಡಿದ್ದರೂ ನಷ್ಟದ ಬಗ್ಗೆ ವಿವರವು ಕೃಷಿ ಮಾರಾಟ ಇಲಾಖೆಯಲ್ಲಿ ಮಾಹಿತಿಯೇ ಲಭ್ಯವಿಲ್ಲ.

ಎಪಿಎಂಸಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮತ್ತು ತಿದ್ದುಪಡಿ ತರುವ ಮುನ್ನ ಅನುಭವಿಸಿರುವ ನಷ್ಟದ ಮಾಹಿತಿ ಕೋರಿ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದ ‘the-file.in’ಗೆ ಉತ್ತರಿಸಿರುವ ಕೃಷಿ ಮಾರಾಟ ಇಲಾಖೆಯ ಜಂಟಿ ನಿರ್ದೇಶಕರು ‘ನಷ್ಟದ ಬಗ್ಗೆ ಕೇಂದ್ರ ಕಚೇರಿಯಲ್ಲಿ ಮಾಹಿತಿ ಲಭ್ಯವಿರುವುದಿಲ್ಲ’ ಎಂದು ಉತ್ತರ ನೀಡಿ ಕೈತೊಳೆದುಕೊಂಡಿದ್ದಾರೆ.

ಅಲ್ಲದೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಪ್ರತ್ಯೇಕ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಬೇಕು ಎಂದು ಉತ್ತರಿಸಿರುವ ಕೃಷಿ ಮಾರಾಟ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ಹಕ್ಕು ಕಾಯ್ದೆಯ ಕಲಂ 6(3)ರ ಅನ್ವಯ ಮಾಹಿತಿ ಪಡೆಯುವುದಕ್ಕಾಗಿ ಕೋರಿಕೆ ಅಧಿನಿಯಮವನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಅಧಿನಿಯಮದ ಪ್ರಕಾರ ‘ಒಬ್ಬ ಅರ್ಜಿದಾರನು ಮತ್ತೊಂದು ಸಾರ್ವಜನಿಕ ಪ್ರಾಧಿಕಾರ ಹೊಂದಿರುವ ಮಾಹಿತಿಗಾಗಿ ಅಥವಾ ವಸ್ತು ವಿಷಯವು ಮತ್ತೊಂದು ಸಾರ್ವಜನಿಕ ಪ್ರಾಧಿಕಾರದ ಕಾರ್ಯನಿರ್ವಹಣೆಗೆ ನಿಕಟವಾಗಿ ಸಂಬಂಧಿಸಿರುವ ಮಾಹಿತಿಗಾಗಿ ಸಾರ್ವಜನಿಕ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರೆ ಯಾವ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆಯೋ ಆ ಸಾರ್ವಜನಿಕ ಪ್ರಾಧಿಕಾರವು ಅರ್ಜಿಯನ್ನು ಅಥವಾ ಸಮುಚಿತವೆನಿಸಬಹುದಾದ ಅದರ ಭಾಗವನ್ನು ಆ ಮತ್ತೊಂದು ಪ್ರಾಧಿಕಾರಕ್ಕೆ ವರ್ಗಾಯಿಸತಕ್ಕದ್ದು ಮತ್ತು ಅಂಥ ವರ್ಗಾವಣೆಯನ್ನು ಅರ್ಜಿದಾರನಿಗೆ ತಿಳಿಸತಕ್ಕದ್ದು’ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

 ಆದರೆ ಕೃಷಿ ಮಾರಾಟ ಇಲಾಖೆಯ ಜಂಟಿ ನಿರ್ದೇಶಕರು ‘the-file.in’ ಸಲ್ಲಿಸಿದ್ದ ಅರ್ಜಿಯನ್ನು ಸಂಬಂಧಿಸಿದ ಎಪಿಎಂಸಿಗಳಿಗೆ ವರ್ಗಾಯಿಸದೇ ‘ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಲು ತಿಳಿಸಿದೆ’ ಎಂಬ ಉತ್ತರ ಒದಗಿಸಿದೆ.

ಎಪಿಎಂಸಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತಂದ ನಂತರ ರಾಜ್ಯದ ಎಪಿಎಂಸಿಗಳಲ್ಲಿ ವ್ಯಾಪಾರ ವಹಿವಾಟು ತೀರಾ ಕಡಿಮೆಯಾಗಿರುವುದು ಸರಕಾರದ ಗಮನಕ್ಕೆ ಬಂದಿದೆಯೇ ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಎಸ್‌ಟಿ. ಸೋಮಶೇಖರ್ ಅವರು ‘ಬಂದಿದೆ’ ಎಂದು ಉತ್ತರಿಸಿದ್ದಾರಾದರೂ ಎಪಿಎಂಸಿಗಳಲ್ಲಿನ ವ್ಯಾಪಾರ ವಹಿವಾಟುಗಳು ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ ಮತ್ತು ಇದರಿಂದ ಸಂಭವಿಸಿರುವ ನಷ್ಟದ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ.

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ದಿ) ಅಧಿನಿಯಮ 1966 ಕಾಯ್ದೆ (ಸಂಖ್ಯೆ; 59/2020) ಮೂಲಕ ಕಲಂ 8(2) ಹಾಗೂ ಕಲಂ 117ಕ್ಕೆ ತಿದ್ದುಪಡಿ ಮಾಡಿ ಅಧಿಸೂಚಿತ ಕೃಷಿ ಉತ್ಪನ್ನಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿಯೇ ಮಾರಾಟ ಮಾಡಬೇಕು ಎಂಬ ನಿರ್ಬಂಧ ತೆರವುಗೊಳಿಸಿದೆ. ಹಾಗೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ನಿಯಂತ್ರಣವನ್ನು ಪ್ರಾಂಗಣಕ್ಕಷ್ಟೇ ಸೀಮಿತಗೊಳಿಸಿದೆ. ಕಲಂ 8(2)ರ ಉಲ್ಲಂಘನೆಗೆ ದಂಡ ಮತ್ತು ಸಜೆ ಶಿಕ್ಷೆಯನ್ನು ವಿಧಿಸುತ್ತಿದ್ದ ಕಲಂ 117ನ್ನೂ ಕೈ ಬಿಡಲಾಗಿದೆ ಎಂದು ಸಚಿವ ಸೋಮಶೇಖರ್ ವಿವರ ಒದಗಿಸಿದ್ದರು.

 ಕಾಯ್ದೆ ತಿದ್ದುಪಡಿ ನಂತರ ರಾಜ್ಯದಲ್ಲಿನ ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಹಿಂದಿನಂತೆ ಪ್ರಾಂಗಣದಲ್ಲಿ ಲೈಸೆನ್ಸ್ ಹೊಂದಿರುವ ನೇರ ಖರೀದಿ ಕೇಂದ್ರ, ರೈತ-ಗ್ರಾಹಕ ಮಾರುಕಟ್ಟೆ ಪ್ರಾಂಗಣ, ಖಾಸಗಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ಅಥವಾ ತಮ್ಮ ಹೊಲದಲ್ಲೇ ತಮ್ಮ ಇಚ್ಛೆಯಂತೆ ಮಾರಾಟ ಮಾಡಲು ಅವಕಾಶ ಲಭ್ಯವಾಗಿದೆ. ಹಾಗಾಗಿ ರೈತ ಸಮುದಾಯಕ್ಕೆ ಅನುಕೂಲವಾಗಿದೆ. ರೈತರು ತೊಂದರೆಗೊಳಾಗಿರುವುದು ಕಂಡು ಬಂದಿರುವುದಿಲ್ಲ ಎಂದು ಉತ್ತರಿಸಿದ್ದರು.

 ಆರ್ಥಿಕ ನಷ್ಟವನ್ನು ಸರಿದೂಗಿಸಲು ರಾಜ್ಯ ಸಂಚಿತ ನಿಧಿ ವಂತಿಗೆ ಶೇ. 0.20ರಷ್ಟು ಹಂಚಿಕೆ ಮಾಡಲಾಗಿದೆ. ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶೇ.0.05ರಷ್ಟು ವಂತಿಗೆ, ಅಡಮಾನ ಸಾಲ ಯೋಜನೆಗೆ ಶೇ. 0.10, ಕೃಷಿ ವಿಶ್ವವಿದ್ಯಾಲಯಗಳ ವಂತಿಗೆ ಶೇ.0.01, ಅಪತದ್ಧನ ಶೇ.0.04, ಅಭಿವೃದ್ಧಿ ವೆಚ್ಚಗಳು ಶೇ.0.25, ಶಾಸನೇತರ ವೆಚ್ಚಗಳು ಶೇ.0.25, ರೆಮ್ಸ್ ಸಂಸ್ಥೆ ವಹಿವಾಟು ವೆಚ್ಚ ಶೇ.0.10, ಆವರ್ತ ನಿಧಿ ಶೇ. 0.40, ಮಾರುಕಟ್ಟೆ ಸುಧಾರಣೆ ನಿಧಿ ಶೇ.0.10 ವಂತಿಗೆ ಮರು ಹಂಚಿಕೆ ಮಾಡಿದೆ.

ಇದರಂತೆ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ವೇತನ, ಭತ್ಯೆ, ಮಾರುಕಟ್ಟೆ ಸಮಿತಿಗಳ ಚುನಾವಣೆ ವೆಚ್ಚ ಮುಂತಾದ ಬಾಬ್ತುಗಳಿಗೆ ತಗಲುವ ವೆಚ್ಚವನ್ನು ಮಾರುಕಟ್ಟೆ ಕಾಯ್ದೆ ಕಲಂ 91ರ ಮೇರೆಗೆ ಇಲಾಖೆ ನಿರ್ದೇಶಕರು ನಿಗದಿಪಡಿಸುವ ದರದಲ್ಲಿ ಮಾರುಕಟ್ಟೆ ಸಮಿತಿಗಳು ರಾಜ್ಯ ಸಂಚಿತ ನಿಧಿಗೆ ವಂತಿಗೆ ರೂಪದಲ್ಲಿ ಪಾವತಿಸಬೇಕಿತ್ತು. ಕಾಯ್ದೆ ಕಲಂ 64-ಬಿರ ಮೇರೆಗೆ ರಾಜ್ಯ ಸರಕಾರವು ಸ್ಥಾಪಿಸಿರುವ ಆವರ್ತ ನಿಧಿಗೆ ಜಮೆ ಮಾಡಬೇಕಿತ್ತು.

ಮಾರುಕಟ್ಟೆ ಸಮಿತಿಗಳು ಆಕರಿಸುವ ಮಾರುಕಟ್ಟೆ ಶುಲ್ಕ, ಬಳಕೆದಾರರ ಶುಲ್ಕವನ್ನು ಶೇ.0.60ಕ್ಕೆ ನಿಗದಿಪಡಿಸಿದೆ. ಹಾಗೆಯೇ ರಾಜ್ಯ ಸಂಚಿತ ನಿಧಿಗೆ ಸಮಿತಿಗಳಿಂದ ಪಾವತಿಸಬೇಕಿದ್ದ ವಂತಿಗೆಗೆ ವಿನಾಯಿತಿ ನೀಡಿ ಈ ವೆಚ್ಚವನ್ನೂ ಸರಕಾರವೇ ಭರಿಸಲು ಕ್ರಮ ವಹಿಸಿದೆ ಎಂಬ ಉತ್ತರಿಸಿದ್ದರು.

ರಾಜ್ಯ ಸರಕಾರವು ನಿಗದಿಪಡಿಸಿದ ಶೇ.0.60 ಮಾರುಕಟ್ಟೆ ಶುಲ್ಕ, ಬಳಕೆದಾರರ ಶುಲ್ಕದಲ್ಲಿ ಮರು ಹಂಚಿಕೆ ಮಾಡಿತ್ತು. ಆವರ್ತ ನಿಧಿಗೆ ಶೆ.0.10, ಕೃಷಿ ಮಾರಾಟ ಮಂಡಳಿಗೆ ವಂತಿಗೆ ಶೇ.0.05, ಮತ್ತು ಪ್ರಾಂಗಣದಲ್ಲಿ ಮೂಲಭೂತ ಸೌಕರ್ಯ, ನಿರ್ವಹಣೆ ಮತ್ತು ಸಮಿತಿ ಆಡಳಿತ ವೆಚ್ಚಕ್ಕೆ ಶೇ.0.44, ರೆಮ್ಸ್ ಸಂಸ್ಥೆಗೆ ವಹಿವಾಟು ಶುಲ್ಕದ ರೂಪದಲ್ಲಿ ಶೇ.0.01ರಷ್ಟು ಮರು ಹಂಚಿಕೆ ಮಾಡಿದೆ ಎಂದು ಉತ್ತರದಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X