ವೀಕೆಂಡ್ ಕರ್ಫ್ಯೂ: ಬಸ್ ಗಳ ಓಡಾಟ, ಪೊಲೀಸರಿಂದ ತಪಾಸಣೆ
ಮಂಗಳೂರು, ಜ.15: ಕಳೆದ ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಮಂಗಳೂರು ನಗರದಲ್ಲಿ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳು ಮುಚ್ಚಿವೆ. ಬೆಳಗ್ಗೆಯಿಂದ ನಗರದಲ್ಲಿ ಬಸ್ಸುಗಳು ಓಡಾಟ ನಡೆಸುತ್ತಿದ್ದರೂ ಕಳೆದ ವಾರದ ವೀಕೆಂಡ್ ಕರ್ಫ್ಯೂಗೆ ಹೋಲಿಸಿದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಅದೇರೀತಿ ಜನ ಸಂಚಾರವೂ ವಿರಳವಾಗಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ಬಳಿ ಡಿಸಿಪಿ ಬ್ಯಾರಿಕೇಡ್ ಗಳನ್ನು ಅಳವಡಿಸಿರುವ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ಸಕಾರಣವಿಲ್ಲದೆ ವಾಹನಗಳಲ್ಲಿ ಸಂಚಾರ ಮಾಡುವವರನ್ನು ತಡೆದು ದಂಡ ಹಾಕುವ ಪ್ರಕ್ರಿಯೆ ಜಿಲ್ಲಾದ್ಯಂತ ಪೊಲೀಸರಿಂದ ನಡೆಯುತ್ತಿದೆ.