ಭಟ್ಕಳ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಭಟ್ಕಳ: ಸಾಗರ ರಸ್ತೆಯ ಕಲ್ಲಾಬೇ ಕ್ರಾಸ್ನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ 7:30ರ ಸುಮಾರಿಗೆ ತಾಯಿ ಸರೋಜ ಬಾದಿ ಮತ್ತು ಮಗ ರಮೇಶ ಬಾದಿ ಎಕ್ಟಿವಾ ದ್ವಿಚಕ್ರ ವಾಹನದಲ್ಲಿ ಕುಂಟವಾಣಿಯಿಂದ ಭಟ್ಕಳ ಸರಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಮೋಟಾರ್ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಭಟ್ಕಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವಾಗ ಓರ್ವ ಗಾಯಾಳು ಪ್ರದೀಪ್ ರಾಮಯ್ಯ ಗೊಂಡ ಎಂಬವರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಎಕ್ಟಿವಾದಲ್ಲಿದ್ದ ತಾಯಿ ಸರುಜಾ ಕೃಷ್ಣ ಬಂಡೆ (55) ಮತ್ತು ಮಗ ರಮೇಶ (20) ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
Next Story