Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಕೆದಾಟು ಅಣೆಕಟ್ಟು ಯೋಜನೆಗೆ ಮೇಧಾ...

ಮೇಕೆದಾಟು ಅಣೆಕಟ್ಟು ಯೋಜನೆಗೆ ಮೇಧಾ ಪಾಟ್ಕರ್ ಆಕ್ಷೇಪ: ಉತ್ತರ ನೀಡಲು ನಾನು ಸರಕಾರವಲ್ಲ ಎಂದ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Jan 2022 6:13 PM IST
share
ಮೇಕೆದಾಟು ಅಣೆಕಟ್ಟು ಯೋಜನೆಗೆ ಮೇಧಾ ಪಾಟ್ಕರ್ ಆಕ್ಷೇಪ: ಉತ್ತರ ನೀಡಲು ನಾನು ಸರಕಾರವಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ. 15: `ಯಾರು ಏನು ಬೇಕಾದರೂ ಮಾಡಿಕೊಳ್ಳಲಿ, ಹೇಳಿಕೊಳ್ಳಲಿ. ಅವರಿಗೆ ಉತ್ತರ ಕೊಡಲು ಸರಕಾರ ಇದೆ, ನಾವ್ಯಾಕೆ ಉತ್ತರಿಸೋಣ? ಅವರಿಗೆ ಉತ್ತರ ನೀಡಲು ನಾನು ಸರಕಾರವಲ್ಲ. ನಾವು ಮೇಧಾ ಪಾಟ್ಕರ್ ಅವರ ಭಾವನೆ ಗೌರವಿಸುತ್ತೇವೆ. ಯೋಜನೆಗೆ ನನ್ನದೂ ಸೇರಿದಂತೆ ನಮ್ಮ ಕ್ಷೇತ್ರದ ಜನರ ಆಸ್ತಿಗಳು ಯೋಜನೆಗೆ ಹೋಗುತ್ತಿದ್ದು, ವಿರೋಧ ಮಾಡುವುದಾದರೆ ನಾವೇ ಮಾಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಮೇಧಾ ಪಾಟ್ಕರ್ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಆ ಹೆಣ್ಣು ಮಗಳ ಬಗ್ಗೆ ನಮಗೆ ಗೌರವವಿದೆ. ಅವರು ತಮ್ಮದೇ ಆದ ಚಿಂತನೆಗಳ ಮೇಲೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. ನಮ್ಮ ಹೋರಾಟ ವ್ಯಕ್ತಿಗತ ಚಿಂತನೆಯಲ್ಲ, ಜನರ ಚಿಂತನೆ. ನಮ್ಮದು ಜನರ ಬಯಕೆ, ಬದುಕಿನ ಹೋರಾಟ. ನೀರು ನಮಗೆ ಜೀವ, ಜೀವ ಇದ್ದರಷ್ಟೇ ಜೀವನ. ಅವರ ಅಭಿಪ್ರಾಯ ಅವರದ್ದು' ಎಂದು ಹೇಳಿದರು.

`ಸರಕಾರ ಇಂತಹ ಯೋಜನೆಗೆ ಪರಿಸರ ಇಲಾಖೆ ಅನುಮತಿಯಂತಹ ಕಾನೂನು ಮಾಡಿರುವುದು ಇವರಿಗಾಗಿಯೇ. ಕೆಲವರು ಒಂದು ಎಕರೆ ಮುಳುಗಡೆಯಾದರೆ ಎರಡು ಎಕರೆ ನೀಡಬೇಕು ಎಂದು ಹೇಳುತ್ತಾರೆ. ರಸ್ತೆ ಅಗಲ ಮಾಡಿದರೆ ಆಸ್ತಿ ಹೋಗುತ್ತದೆ ಎಂದು ಸುಮ್ಮನಿದ್ದರೆ ರಸ್ತೆ ಆಗುವುದಿಲ್ಲ. ರಾಜೀವ್ ಗಾಂಧಿ ಅವರು ಯೋಜನೆಗಳಿಗೆ ಆಸ್ತಿ ಸ್ವಾಧೀನ ಕಾನೂನು ತಂದು ಜನರಿಗೆ ಉತ್ತಮ ಪರಿಹಾರ ಸಿಗುವಂತೆ ಮಾಡಿದರು. ಕೆಲವರು ಸರಕಾರಿ ಅಧಿಕಾರಿಗಳನ್ನು ಜೊತೆ ಮಾಡಿಕೊಂಡು ಸುಳ್ಳು ದಾಖಲೆ ಸೃಷ್ಟಿಸಿ ಕೋಟ್ಯಂತರ ಹಣ ಪರಿಹಾರಕ್ಕೆ ಆಗ್ರಹಿಸುತ್ತಾರೆ' ಎಂದು ಅವರು ತಿಳಿಸಿದರು.

`ಮೇಕೆದಾಟು ಯೋಜನೆ ಎಲ್ಲರಿಗೂ ಅನುಕೂಲವಾಗಲಿದ್ದು, ನಮ್ಮ ಸರಕಾರ ಇದ್ದಾಗ ಕಾವೇರಿ ನ್ಯಾಯಾಧಿಕರಣ ತೀರ್ಪು ಹೊರ ಬಂದಿತ್ತು. ಹೀಗಾಗಿ ಈ ಯೋಜನೆಗೆ ಜೀವ ಬಂದಿತು. ತೀರ್ಪು ಬಂದ ನಂತರ ಡಿಪಿಆರ್ ಮಾಡಿದ್ದೆವು. ನಮ್ಮ ಸರಕಾರ ಇನ್ನೂ ಕೆಲ ತಿಂಗಳುಗಳ ಕಾಲ ಇದ್ದಿದ್ದರೆ ಈ ಯೋಜನೆ ಒಂದು ಹಂತಕ್ಕೆ ಬರುತ್ತಿತ್ತು. ಬಿಜೆಪಿ ಸರಕಾರ ಈ ಯೋಜನೆ ಮುಂದಕ್ಕೆ ತೆಗೆದುಕೊಂಡು ಹೋಗಲಿದೆ ಎಂದು ಭಾವಿಸಿದ್ದೆ.

ಅಲ್ಲಿದ್ದ ಮಂತ್ರಿಗಳು, ಇಲ್ಲಿದ್ದ ಮುಖ್ಯಮಂತ್ರಿಗಳು ಅವರವರ ಕೆಲಸದಲ್ಲೇ ಮುಳುಗಿದ್ದರು. ಹೊಸ ಮುಖ್ಯಮಂತ್ರಿ ಬಂದಿದ್ದಾರೆ, ಅವರಿಗೆ ನೀರಾವರಿ ಇಲಾಖೆ ನಿರ್ವಹಿಸಿ, ಅದರ ವ್ಯವಸ್ಥೆ ಗೊತ್ತಿದೆ. ನಾವು ಸ್ವಲ್ಪದಿನ ಕಾದು ನಂತರ ಹೋರಾಟ ಆರಂಭಿಸಿದ್ದೇವೆ. ಈ ಯೋಜನೆಯಿಂದ ನಮ್ಮ ತಾಲೂಕಿಗೆ ಬಹಳ ನಷ್ಟ ಉಂಟಾಗಲಿದೆ. ಬೆಂಗಳೂರಿಗೆ ನೀರು ತರಬೇಕಾದರೆ ನಮ್ಮ ಜಮೀನು ಹೋಗುತ್ತವೆ. ರೈತರ ಜಮೀನಿಗೆ ಉತ್ತಮ ಬೆಲೆ ನೀಡುವಂತೆ ಹೋರಾಟ ಮಾಡುತ್ತೇವೆ' ಎಂದು ಸ್ಪಷ್ಟಪಡಿಸಿದರು.

`ಮಳವಳ್ಳಿ ಮೂಲಕವಾಗಿ ಬೆಂಗಳೂರಿಗೆ ನೀರು ತಂದಿದ್ದಾರಲ್ಲಾ, ಅಲ್ಲೆಲ್ಲಾ ರೈತರಿಗೆ ಎಷ್ಟು ಪರಿಹಾರ ಕೊಟ್ಟಿದ್ದಾರೆ ಗೊತ್ತಾ? ಎಕರೆಗೆ ಕೇವಲ 30 ಸಾವಿರ ರೂ., 50 ಸಾವಿರ ರೂ., 1 ಲಕ್ಷ ರೂ.ನಂತೆ ಪರಿಹಾರ ಕೊಟ್ಟಿದ್ದಾರೆ. ಮೇಧಾ ಹಿರಿಯ ಮಹಿಳೆ, ಅವರಿಗೆ ಉತ್ತರ ನೀಡಲು ಬೊಮ್ಮಾಯಿ ಅವರು ಸೂಕ್ತ ವ್ಯಕ್ತಿ. ಬೆಂಗಳೂರಿನ ಕೆರೆ ಕಟ್ಟೆಗಳ ಜೀರ್ಣೋದ್ಧಾರ ಮಾಡಿದರೆ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಬಗ್ಗೆ ಸರಕಾರ ಈ ವಿಚಾರವಾಗಿ ಸಮಿತಿ ಮಾಡಲಿ. ಎಲ್ಲಿ ಕಟ್ಟುನಿಟ್ಟಿನ ಪಾಲನೆ ಆಗುತ್ತಿದೆ. ಎಲ್ಲರೂ ಮಳೆ ನೀರಿನ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕು ಎಂಬ ನಿಯಮವಿದೆ. ಎಲ್ಲರೂ ಅದನ್ನು ಎಲ್ಲಿ ಮಾಡುತ್ತಿದ್ದಾರೆ?' ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X