Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರ ಉದ್ಯೋಗ ಸೃಷ್ಟಿಸುವ ಬದಲು, ಇದ್ದ...

ಸರಕಾರ ಉದ್ಯೋಗ ಸೃಷ್ಟಿಸುವ ಬದಲು, ಇದ್ದ ಕೆಲಸ ಕಿತ್ತುಕೊಂಡಿದೆ: ಆಕ್ರೋಶ ವ್ಯಕ್ತಪಡಿಸಿದ ಅತಿಥಿ ಉಪನ್ಯಾಸಕರು

"ಅವೈಜ್ಞಾನಿಕ ಆದೇಶ ನೀಡಿರುವ ಸರಕಾರ 7,250 ಮಂದಿಯನ್ನು ಬೀದಿಪಾಲು ಮಾಡಿದೆ"

ವಾರ್ತಾಭಾರತಿವಾರ್ತಾಭಾರತಿ15 Jan 2022 7:50 PM IST
share
ಸರಕಾರ ಉದ್ಯೋಗ ಸೃಷ್ಟಿಸುವ ಬದಲು, ಇದ್ದ ಕೆಲಸ ಕಿತ್ತುಕೊಂಡಿದೆ: ಆಕ್ರೋಶ ವ್ಯಕ್ತಪಡಿಸಿದ ಅತಿಥಿ ಉಪನ್ಯಾಸಕರು

ಉಡುಪಿ, ಜ.15: ರಾಜ್ಯ ಸರಕಾರದ ಅವೈಜ್ಞಾನಿಕ ಆದೇಶದಿಂದ ರಾಜ್ಯದ 14,500 ಅತಿಥಿ ಉಪನ್ಯಾಸಕರ ಪೈಕಿ 7,250 ಮಂದಿ ನಿರುದ್ಯೋಗಿಗಳಾಗಿದ್ದಾರೆ. ಸರಕಾರ ಉದ್ಯೋಗ ಸೃಷ್ಠಿ ಮಾಡುವ ಬದಲು ಇದ್ದ ಉದ್ಯೋಗವನ್ನು ಕಿತ್ತುಕೊಂಡು ನಮ್ಮನ್ನು ಬೀದಿಪಾಲು ಮಾಡಿದೆ ಎಂದು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಹಿತರಕ್ಷಣಾ ಸಮಿತಿಯ ಜಿಲ್ಲಾ ಘಟಕ ಅಧ್ಯಕ್ಷೆ ಡಾ.ಶಾಹಿದಾ ಜಹಾನ್ ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆ ಈಡೇರಿಸುವಂತೆ ಕಳೆದ ಒಂದು ತಿಂಗಳಿನಿಂದ ನಾವು ಹೋರಾಟ ಮಾಡುತ್ತಿದ್ದೇವೆ. ಇದರ ಫಲವಾಗಿ ಸರಕಾರ ಹೊಸ ಆದೇಶವನ್ನು ಹೊರಡಿಸಿತು. ಅತಿಥಿ ಉಪನ್ಯಾಸಕರ ಸಂಭಾವನೆ ಹೆಚ್ಚಿಸುವುದಕ್ಕಾಗಿ 14,500 ಮಂದಿಯ ಬದಲಿಗೆ 7,250 ಮಂದಿಗೆ ಮಾತ್ರ ಅವಕಾಶ ನೀಡಿ, ಎಂಟು ಗಂಟೆಗಳ ಕಾರ್ಯ ಭಾರವನ್ನು 15ಗಂಟೆಗಳಿಗೆ ಹೆಚ್ಚಿಸಲಾಗಿದೆ. ಮೂರು ದಿನದ ಬದಲಿಗೆ ಆರು ದಿನಗಳ ಕಾಲ ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸಲಾಗಿದೆ ಎಂದರು.

ಇದರಿಂದ ವಾರದಲ್ಲಿ ಮೊದಲ ಮೂರು ದಿನ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಕೆಲಸ ಸಿಕ್ಕಿದರೆ, ನಂತರದ ಮೂರು ದಿನ ಕಾರ್ಯ ನಿರ್ವಹಿಸುತ್ತಿದ್ದವರು ಕೆಲಸ ಕಳೆದುಕೊಳ್ಳಲಿದ್ದಾರೆ. ಮೊದಲು ಪಾವತಿಸುತ್ತಿದ್ದ 13,500ರೂ. ವೇತನವನ್ನು ದುಪ್ಪಟ್ಟುಗೊಳಿಸಿ 28,000-32,000 ರೂ.ಗೆ ಹೆಚ್ಚಿಸಲಾಗಿದೆ. ಅಂದರೆ ಇಬ್ಬರ ಕೆಲಸ ಒಬ್ಬರಿಂದಲೇ ಮಾಡಿಸಿ, ಇಬ್ಬರ ಸಂಬಳ ಒಬ್ಬರಿಗೆ ನೀಡಲಾಗುತ್ತಿದೆ. ಇದು ಹಣ ಹೆಚ್ಚಿಸಿರುವುದಲ್ಲ, ಬದಲು ಒಬ್ಬರ ಹಣ ಕಸಿದು ಇನ್ನೊಬ್ಬರಿಗೆ ನೀಡುತ್ತಿರುವುದಾಗಿದೆ. ಸರಕಾರದ ಹಿಡನ್ ಅಜೆಂಡಾವನ್ನು ನಾವು ಅರ್ಥ ಮಾಡಬೇಕಾಗಿದೆ ಎಂದು ಅವರು ದೂರಿದರು.

ಕುಂದಾಪುರ ತಾಲೂಕು ಅಧ್ಯಕ್ಷ ಮಣಿಕಂಠ ಮಾತನಾಡಿ, ಹೊಸ ಆದೇಶ ದಂತೆ ಜ.17ರಿಂದ ಐದು ದಿನಗಳ ಕಾಲ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನಾವು ವರ್ಷದ 12 ತಿಂಗಳೂ ಕಾರ್ಯಭಾರದೊಂದಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಹೋರಾಟದ ಮಾಡಿರುವುದು. ಆದರೆ ಸರಕಾರ ಇದಕ್ಕೆ ಒಪ್ಪದೆ ಕೇವಲ 10 ತಿಂಗಳಿಗೆ ಸಂಭಾವನೆ ನೀಡಿ ಪ್ರತಿವರ್ಷ ಮರು ನೇಮಕಾತಿ ಮಾಡಬೇಕೆಂದು ಆದೇಶ ನೀಡಿದೆ. ನಮ್ಮನ್ನು ಖಾಯಮಾತಿ ಮಾಡಿಲ್ಲ. ಆದುದರಿಂದ ನಾವು ಯಾರು ಕೂಡ ಈ ಕೆಲಸಕ್ಕೆ ಅರ್ಜಿ ಸಲ್ಲಿಸುವು ದಿಲ್ಲ. ಎಲ್ಲ 14,500 ಮಂದಿಗೂ ನ್ಯಾಯ ಸಿಗುವವರೆಗೆ ಹೋರಾಟ ಮುಂದು ವರೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅತಿಥಿ ಉಪನ್ಯಾಸಕರಾದ ಸುಜಾತ, ಗುರುರಾಜ್, ವಿನಯಚಂದ್ರ, ವೇದ ಉಪಸ್ಥಿತರಿದ್ದರು.

ಈಗಾಗಲೇ ಸರಕಾರದ ನೀತಿಯಿಂದ ಹಲವು ಮಂದಿ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಕಾರ ಅತಿಥಿ ಉಪನ್ಯಾಸಕರಿಗೆ ಈ ಆದೇಶದ ಮೂಲಕ ಸಿಹಿ ನೀಡಿರುವುದಲ್ಲ, ಬದಲು ವಿಷ ನೀಡಿದೆ. 7,250 ಮಂದಿ ಉದ್ಯೋಗ ಕಳೆದುಕೊಂಡ ಭೀತಿಯಲ್ಲಿ ಮಾನಸಿಕ ಖಿನ್ನತೆ ಒಳಗಾಗಿದ್ದಾರೆ. ಇದು ನಮ್ಮ ಹೋರಾಟವನ್ನು ಹತ್ತಿಕ್ಕುವ ಯತ್ನ ಮತ್ತು ಒಡೆದು ಆಳುವ ನೀತಿಯಾಗಿದೆ.
-ವಿನಯಚಂದ್ರ, ಅತಿಥಿ ಉಪನ್ಯಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X