Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ ಯಾವುದೇ ಬಿಜೆಪಿ ಶಾಸಕ,...

ಇನ್ನು ಮುಂದೆ ಯಾವುದೇ ಬಿಜೆಪಿ ಶಾಸಕ, ಸಚಿವರಿಗೆ ನಮ್ಮ ಪಕ್ಷದಲ್ಲಿ ಜಾಗವಿಲ್ಲ: ಅಖಿಲೇಶ್ ಯಾದವ್

ವಾರ್ತಾಭಾರತಿವಾರ್ತಾಭಾರತಿ15 Jan 2022 8:13 PM IST
share
ಇನ್ನು ಮುಂದೆ ಯಾವುದೇ ಬಿಜೆಪಿ ಶಾಸಕ, ಸಚಿವರಿಗೆ ನಮ್ಮ ಪಕ್ಷದಲ್ಲಿ ಜಾಗವಿಲ್ಲ: ಅಖಿಲೇಶ್ ಯಾದವ್

ಲಕ್ನೋ, ಜ.15: ಮುಂಬರುವ ಉ.ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಆದಿತ್ಯನಾಥ ಸಂಪುಟವನ್ನು ತೊರೆದ ಇಬ್ಬರು ಸಚಿವರು ಸೇರಿದಂತೆ ಏಳು ಮಾಜಿ ಶಾಸಕರನ್ನು ಶುಕ್ರವಾರ ಪಕ್ಷಕ್ಕೆ ಸ್ವಾಗತಿಸಿದ್ದ ಸಮಾಜವಾದಿ ಪಕ್ಷ (ಎಸ್ಪಿ)ದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು,‌ ತನ್ನ ಪಕ್ಷದಲ್ಲಿ ಯಾವುದೇ ಬಿಜೆಪಿ ಶಾಸಕ, ಸಚಿವರಿಗೆ ಇನ್ನು ಮುಂದೆ ಜಾಗವಿಲ್ಲ ಎಂದು ಶನಿವಾರ ಇಲ್ಲಿ ಹೇಳಿದರು.

"ನಾನು ಇನ್ನಷ್ಟು ಬಿಜೆಪಿ ಶಾಸಕರು ಅಥವಾ ಸಚಿವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅವರು (ಬಿಜೆಪಿ) ಬಯಸಿದರೆ ತಮ್ಮ ನಾಯಕರಿಗೆ ಟಿಕೆಟ್ಗಳನ್ನು ನಿರಾಕರಿಸಬಹುದು" ಎಂದು ಅಖಿಲೇಶ್ ಸುದ್ದಿಗಾರರಿಗೆ ತಿಳಿಸಿದರು.
‌
ಅಖಿಲೇಶ್ ಶುಕ್ರವಾರ ಇಬ್ಬರು ಮಾಜಿ ಸಚಿವರು ಮತ್ತು ಪ್ರಮುಖ ಒಬಿಸಿ ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಮ್ ಸಿಂಗ್ ಸೈನಿ ಹಾಗೂ ಐವರು ಇತರ ಬಿಜೆಪಿ ಶಾಸಕರು ಮತ್ತು ಬಿಜೆಪಿಯ ಮಿತ್ರಪಕ್ಷ ಅಪ್ನಾ ದಳದ ಓರ್ವ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಈ ವಾರದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ ಬಿಜೆಪಿ ಮತ್ತು ಆದಿತ್ಯನಾಥ ಸರಕಾರದಿಂದ ನಿರ್ಗಮಿಸಿರುವ ಒಬಿಸಿ ನಾಯಕರ ದಂಡು ಮತ್ತೆ ಅಧಿಕಾರಕ್ಕೇರುವ ಬಿಜೆಪಿಯ ಪ್ರಯತ್ನಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ಪರಿಗಣಿಸಲಾಗುತ್ತಿದೆ.

ಮೌರ್ಯ ಮತ್ತು ಸೈನಿ ಜೊತೆಗೆ ಐವರು ಬಿಜೆಪಿ ಶಾಸಕರಾದ ರೋಶನ್ ಲಾಲ್ ವರ್ಮಾ,‌ ಬೃಜೇಶ್ ಪ್ರಜಾಪತಿ, ಮುಕೇಶ್ ವರ್ಮಾ, ವಿನಯ್ ಶಾಕ್ಯ ಮತ್ತು ಭಗವತಿ ಸಾಗರ್ ಅವರೂ ಶುಕ್ರವಾರ ಎಸ್ಪಿಗೆ ಸೇರ್ಪಡೆಗೊಂಡಿದ್ದಾರೆ. ಅಪ್ನಾ ದಳದ ಶಾಸಕ ಚೌಧರಿ ಅಮರ್ ಸಿಂಗ್ ಕೂಡ ಎಸ್ಪಿ ಸೇರಿದ್ದಾರೆ.
‌
ಬಿಜೆಪಿಯನ್ನು ತೊರೆದಿರುವ ಮೂರನೇ ಸಚಿವ ದಾರಾ ಸಿಂಗ್ ಚೌಹಾಣ್ ಅವರೂ ಶೀಘ್ರವೇ ಎಸ್ಪಿಗೆ ಸೇರಲಿದ್ದಾರೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

ಬೆಳಿಗ್ಗೆ ತನ್ನ ಆಜಾದ್ ಸಮಾಜ್ ಪಾರ್ಟಿ ಮತ್ತು ಎಸ್ಪಿ ನಡುವಿನ ಸ್ಥಾನ ಹೊಂದಾಣಿಕೆ ಮಾತುಕತೆಗಳು ವಿಫಲಗೊಂಡಿವೆ ಎಂದು ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಅಖಿಲೇಶರ ಈ ಘೋಷಣೆ ಹೊರಬಿದ್ದಿದೆ.
‘ನಾವು ಇನ್ನು ಮುಂದೆ ಯಾವುದೇ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಜನರನ್ನು ಒಟ್ಟುಗೂಡಿಸಲು ನಾವು ಬಹಳಷ್ಟು ತ್ಯಾಗ ಮಾಡಿದ್ದೇವೆ,ಆದರೆ ಈಗ ಬೇರೆ ಯಾರನ್ನೂ ಸೇರಿಸಿಕೊಳ್ಳಲು ಅವಕಾಶವಿಲ್ಲ ’ ಎಂದು ಅಖಿಲೇಶ್ ಹೇಳಿದರು.

ಅಖಿಲೇಶ್‌ ಗೆ ದಲಿತರ ಮತಗಳು ಬೇಕಿಲ್ಲ ಎಂದು ಆಜಾದ್ ಟೀಕಿಸಿದ್ದಾರೆ. ಫೆಬ್ರವರಿ- ಮಾರ್ಚ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅಖಿಲೇಶ ಬಿಜೆಪಿಯನ್ನು ಸೋಲಿಸಲು ಯಾದವೇತರ ಒಬಿಸಿ ಸಮುದಾಯಗಳ ಮೇಲೆ ಪ್ರಭಾವ ಹೊಂದಿರುವ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟವನ್ನು ರಚಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X