Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಥಿಯೋಪಿಯಾ: ಟಿಗ್ರೆ ವಲಯದ ಮೇಲಿನ...

ಇಥಿಯೋಪಿಯಾ: ಟಿಗ್ರೆ ವಲಯದ ಮೇಲಿನ ವಾಯುದಾಳಿಗೆ ವಿಶ್ವಸಂಸ್ಥೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ15 Jan 2022 11:25 PM IST
share
ಇಥಿಯೋಪಿಯಾ: ಟಿಗ್ರೆ ವಲಯದ ಮೇಲಿನ ವಾಯುದಾಳಿಗೆ ವಿಶ್ವಸಂಸ್ಥೆ ಖಂಡನೆ

ನ್ಯೂಯಾರ್ಕ್, ಜ.15: ಇಥಿಯೋಪಿಯಾದ ಟಿಗ್ರೆ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವ ಹಲವಾರು ವಾಯುದಾಳಿ ಪ್ರಕರಣಗಳಲ್ಲಿ ಕನಿಷ್ಟ 108 ನಾಗರಿಕರು ಮೃತಪಟ್ಟಿರುವ ವರದಿ ತೀವ್ರ ಆತಂಕಕಾರಿಯಾಗಿದೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕುಗಳ ಕಚೇರಿ ಹೇಳಿದೆ.

ಖಾಸಗಿ ಮಿನಿಬಸ್, ವಿಮಾನ ನಿಲ್ದಾಣ ಮತ್ತು ನಿರಾಶ್ರಿತರ ಶಿಬಿರದ ಮೇಲೆ ನಡೆದಿರುವ ದಾಳಿಯನ್ನು ವಿಶ್ವಸಂಸ್ಥೆ ಮಾನವಹಕ್ಕು ಆಯುಕ್ತರ ಕಚೇರಿಯ ವಕ್ತಾರೆ ಲಿರ್ ಥ್ರೊಸೆಲ್ ಖಂಡಿಸಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ದಾಳಿಯಲ್ಲಿ ಕನಿಷ್ಟ 59 ಮಂದಿ ಬಲಿಯಾಗಿದ್ದರು. 2022ರ ಜನವರಿಯಿಂದ ಇದುವರೆಗೆ ಟಿಗ್ರೆ ವಲಯದಲ್ಲಿ ನಡೆದಿರುವ ಹಲವು ವಾಯುದಾಳಿಯಲ್ಲಿ ಕನಿಷ್ಟ 108 ನಾಗರಿಕರು ಮೃತಪಟ್ಟಿದ್ದು ಇತರ 75 ಮಂದಿ ಗಾಯಗೊಂಡಿರುವ ವರದಿ ಕಳವಳಕಾರಿಯಾಗಿದೆ.

ಇಥಿಯೋಪಿಯಾದ ಸರಕಾರ ಹಾಗೂ ಅದರ ಮಿತ್ರರಾಷ್ಟ್ರಗಳು ದಾಳಿಯ ಉದ್ದೇಶಿತ ಗುರಿಯನ್ನು ನಿಖರಪಡಿಸಿಕೊಂಡು, ಅಂತರಾಷ್ಟ್ರೀಯ ನಿಯಮಕ್ಕೆ ಅನುಸಾರವಾಗಿ ನಾಗರಿಕರ ರಕ್ಷಣೆಯನ್ನು ಖಾತರಿಗೊಳಿಸಬೇಕು. ವ್ಯತ್ಯಾಸ ಮತ್ತು ಅನುಪಾತದ ತತ್ವವನ್ನು ಗೌರವಿಸಲು ವಿಫಲವಾದರೆ ಅದು ಯುದ್ಧಾಪರಾಧವಾಗುತ್ತದೆ ಎಂದು ಥ್ರೊಸೆಲ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. ಈ ಮಧ್ಯೆ, ಟಿಗ್ರೆ ವಲಯದಲ್ಲಿ ಸಂಘರ್ಷ ಉಲ್ಬಣಿಸಿರುವುದರಿಂದ ವಿಶ್ವ ಸಂಸ್ಥೆಯ ಆಹಾರ ನೆರವಿನ ಉಪಕ್ರಮವನ್ನು ಟಿಗ್ರೆಯ ರಾಜಧಾನಿ ಮೆಕೆಲ್ಲೆಗೆ ತಲುಪಿಸಲು ಅಡ್ಡಿಯಾಗಿದೆ. ಜೀವರಕ್ಷಕ ಆಹಾರ ನೆರವಿನ ಉಪಕ್ರಮ ಸ್ಥಗಿತಗೊಳ್ಳುವ ಅಪಾಯದಲ್ಲಿದೆ . 14 ತಿಂಗಳ ಸಂಘರ್ಷದ ಬಳಿಕ ಇನ್ನಷ್ಟು ಜನ ಆಹಾರದ ತುರ್ತು ನೆರವಿನ ನಿರೀಕ್ಷೆಯಲ್ಲಿದ್ದಾರೆ. ಆಹಾರದ ಕೊರತೆ, ಇಂಧನದ ಕೊರತೆ, ಸಂಪರ್ಕದ ಕೊರತೆಯಿಂದ ನಾವು ಭಾರೀ ಮಾನವೀಯ ಬಿಕ್ಕಟ್ಟಿನ ಅಂಚಿನಲ್ಲಿದ್ದೇವೆ ಎಂದು ವಿಶ್ವಸಂಸ್ಥೆ ಆಹಾರ ನೆರವು ಯೋಜನೆ(ಡಬ್ಲ್ಯೂಎಫ್ಪಿ)ಯ ವಕ್ತಾರ ಥಾಮ್ಸನ್ ಫಿರಿ ಹೇಳಿದ್ದಾರೆ.

ಇಥಿಯೋಪಿಯಾದ ಜನತೆ ಪಡುತ್ತಿರುವ ಸಂಕಟವನ್ನು ಕಂಡು ತೀವ್ರ ನೋವಾಗಿದೆ. ಮಾನವೀಯ ನೆರವಿನ ಅಗತ್ಯವಿರುವ ಎಲ್ಲರಿಗೂ ಸಾಧ್ಯವಾದಷ್ಟು ಬೇಗ ನೆರವು ಒದಗಿಸಬೇಕಾಗಿದೆ. ಈಗ ಮಾತುಕತೆ ಮತ್ತು ಸಂಧಾನದ ಸಮಯವಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರ್ರಸ್ ಶುಕ್ರವಾರ ಹೇಳಿದ್ದರು. ಟಿಗ್ರೆ ಬಂಡುಗೋರರ ವಿರುದ್ಧದ 14 ತಿಂಗಳಾವಧಿಯ ಸಂಘರ್ಷದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಇಥಿಯೋಪಿಯಾ ಸರಕಾರ ಈ ಹಿಂದೆ ಹೇಳಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X