Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಚರಾಜ್ಯ ಚುನಾವಣೆ: ಜ.23ರವರೆಗೆ...

ಪಂಚರಾಜ್ಯ ಚುನಾವಣೆ: ಜ.23ರವರೆಗೆ ರ‍್ಯಾಲಿ,ರೋಡ್‌ ಶೋಗೆ ನಿಷೇಧ

ವಾರ್ತಾಭಾರತಿವಾರ್ತಾಭಾರತಿ15 Jan 2022 11:38 PM IST
share
ಪಂಚರಾಜ್ಯ ಚುನಾವಣೆ: ಜ.23ರವರೆಗೆ ರ‍್ಯಾಲಿ,ರೋಡ್‌ ಶೋಗೆ ನಿಷೇಧ

ಹೊಸದಿಲ್ಲಿ,ಜ.15: ವಿಧಾನಸಭಾ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ರ‍್ಯಾಲಿಗಳು ಹಾಗೂ ರೋಡ್ಶೋಗಳನ್ನು ಚುನಾವಣಾ ಆಯೋಗವು ಶನಿವಾರ ನಿಷೇಧಿಸಿದೆ. ಆದರೆ ರಾಜಕೀಯ ಪಕ್ಷಗಳು ಒಳಾಂಗಣಗಳಲ್ಲಿ 300 ಮಂದಿಯವರೆಗೆ ಅಥವಾ ಸಭಾಂಗಣದ ಸಾಮರ್ಥ್ಯದ ಶೇ.50ರಷ್ಟು ಸಭಿಕರೊಂದಿಗೆ ಸಭೆಗಳನ್ನು ನಡೆಸಲು ಅದು ಅನುಮತಿ ನೀಡಿದೆ.

ಕೋವಿಡ್19 ಪ್ರಕರಣಗಳು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಗೋವಾ, ಮಣಿಪುರ,ಪಂಜಾಬ್, ಉತ್ತರಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಜನವರಿ 8ರಂದು ಪ್ರಕಟಿಸಿದ ಸಂದರ್ಭ ಚುನಾವಣಾ ಆಯೋಗವು ಎಲ್ಲಾ ಭೌತಿಕ ರ‍್ಯಾಲಿಗಳನ್ನು, ರೋಡ್ ಶೋಗಳನ್ನು, ಪಾದಯಾತ್ರೆಗಳು, ಮೆರವಣಿಗೆ ಹಾಗೂ ವಾಹನ ರ‍್ಯಾಲಿಗಳನ್ನು ನಿಷೇಧಿಸಿತ್ತು. 

ಶನಿವಾರದ (ಜನವರಿ 15)ವರೆಗೆ ಈ ನಿಷೇಧ ಜಾರಿಯಲ್ಲಿರುವುದಾಗಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಆಗ ಘೋಷಿಸಿದ್ದರು. ಚುನಾವಣಾ ಆಯೋಗವು ಶನಿವಾರದಂದು ಕೇಂದ್ರ ಆರೋಗ್ಯ ಹಾಗೂ ಚುನಾವಣೆಗೆ ತೆರಳಲಿರುವ ಐದು ರಾಜ್ಯಗಳ ಕುಟುಂಬ ಕಲ್ಯಾಣ ಸಚಿವಾಲಯ , ಮುಖ್ಯ ಚುನಾವಣಾ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿಗಳು ಹಾಗೂ ಆರೋಗ್ಯ ಕಾರ್ಯದರ್ಶಿಗಳ ಜೊತೆ ವಿಡಿಯೋಕಾನ್ಫರೆನ್ಸ್ ನಡೆಸಿತು. ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿನ ಪ್ರಸಕ್ತ ಪರಿಸ್ಥಿತಿ ಹಾಗೂ ಕೋವಿಡ್ ಸಾಂಕ್ರಾಮಿಕದ ಪ್ರವೃತ್ತಿಗಳ ಬಗ್ಗೆ ಸಭೆಯಲ್ಲಿ ಸಮಗ್ರ ಪರಾಮರ್ಶೆ ನಡೆಸಲಾಯಿತು’’ ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ.
     
ಚುನಾವಣೆ ಎದುರಿಸುತ್ತಿರುವ ಐದು ರಾಜ್ಯಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಪ್ರಥಮ, ದ್ವಿತೀಯ ಹಾಗೂ ಬೂಸ್ಟರ್ ಡೋಸ್ಗಳನ್ನು ಪೂರ್ಣಗೊಳಿಸುವುದಕ್ಕಾಗಿ ನಡೆಸಲಾಗುವ ಲಸಿಕೆ ಅಭಿಯಾನಗಳ ಪ್ರತಿಯ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು. ಚುನಾವಣಾ ಆಯೋಗವು ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರ ( ಎಸ್ಡಿಎಂಎ)ಗಳ ನಿರ್ಬಂಧಗಳು ಹಾಗೂ ಜನತೆ ಸಭೆ ಸೇರುವುದಕ್ಕೆ ಸಂಬಂಧಿಸಿ ರಾಜ್ಯಗಳು ಜಾರಿಗೊಳಿಸಿರುವ ನಿರ್ದಿಷ್ಟ ಮಾರ್ಗದರ್ಶಿಸೂತ್ರಗಳನ್ನು ಕೂಡಾ ಆಯೋಗವು ಸಭೆಯಲ್ಲಿ ಪಾಲ್ಗೊಂಡಿತು.

ಚುನಾವಣಾ ಆಯೋಗವು ರೋಡ್ಶೋಗಳು,ಪಾದಯಾತ್ರೆಗಳು, ಸೈಕಲ್,ಬೈಕ್, ವಾಹನ ರ್ಯಾರಿಗಲು, ಮೆರವಣಿಗೆಗಳು ಹಾಗೂ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ರ್ಯಾಲಿಗಳನ್ನು ಜನವರಿ 22ರವರೆಗೆ ನಿಷೇಧಿಸಿದೆ.
   
ರಾಜಕೀಯ ಪಕ್ಷಗಳು ಕೋವಿಡ್ ನಿಯಮಾವಳಿಗಳ ಹಾಗೂ ಚುನಾವಣಾ ನೀತಿಸಂಹಿತೆಯನ್ನು ಅನುಸರಿಸುವುದನ್ನು ಖಾತರಿಪಡಿಸಬೇಕಾಗಿದೆ. ಜನವರಿ 8ರಂದು ಘೋಷಿಸಲಾದ ಎಲ್ಲಾ ನಿರ್ಬಂಧಗಳು ಹಾಗೂ ಮಾರ್ಗದರ್ಶಿ ಸೂತ್ರಗಳು ಮುಂದುವರಿಯಲಿದೆ ಎಂದು ಆಯೋಗ ತಿಳಿಸಿದೆ. ಈ ನಿಯಾಮವಳಿಗಳ ಅನುಸರಣೆಯಾಗುವುದನ್ನು ರಾಜ್ಯ ಹಾಗೂ ಜಿಲ್ಲಾ ಆಡಳಿತಗಳು ಖಾತರಿಪಡಿಸಿಕೊಳಬೇಕೆಂದು ಆಯೋಗವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X