Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿಯಲ್ಲಿ ಮೂರು ಪುಟ್ಟ ಕಂದಮ್ಮಗಳ...

ಬೆಳಗಾವಿಯಲ್ಲಿ ಮೂರು ಪುಟ್ಟ ಕಂದಮ್ಮಗಳ ನಿಗೂಢ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ16 Jan 2022 12:48 PM IST
share
ಬೆಳಗಾವಿಯಲ್ಲಿ ಮೂರು ಪುಟ್ಟ ಕಂದಮ್ಮಗಳ ನಿಗೂಢ ಮೃತ್ಯು

ಬೆಳಗಾವಿ, ಜ. 16: ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ `ರುಬೆಲ್ಲಾ' ಲಸಿಕೆ(ಚುಚ್ಚುಮದ್ದು) ಪಡೆದಿದ್ದ ಮೂವರು ಮಕ್ಕಳು ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದು, ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ.

ರಾಮದುರ್ಗ ತಾಲೂಕಿನ ಪವಿತ್ರಾ ಹುಲಗೂರ(13 ತಿಂಗಳು), ಮಧು ಕರಗುಂದಿ(14 ತಿಂಗಳು) ಮತ್ತು ಚೇತನ ಪೂಜಾರಿ(15 ತಿಂಗಳು) ಎನ್ನುವ ಮಕ್ಕಳು ಸಾವನ್ನಪ್ಪಿವೆ. ಇನ್ನೊಂದು ಮಗುವಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕ ದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಒಂದು ಮಗು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಮೃತಪಟ್ಟಿತ್ತು. ಇನ್ನೆರಡು ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲಸಿಕೆಯಿಂದ ಅಡ್ಡಪರಿಣಾಮ ಆಗಿರುವ ಸಾಧ್ಯತೆ ಇದೆ ಎಂದು ಸಂಶಯ ವ್ಯಕ್ತವಾಗಿದೆ.

ಕೊರೋನ ಸೇರಿ ವಿವಿಧ ಲಸಿಕಾ ಅಭಿಯಾನ ನಡೆಯುತ್ತಿರುವ ಈ ಸಂದರ್ಭದಲ್ಲಿ ನಡೆದಿರುವ ಘಟನೆಯು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. 25 ಮಕ್ಕಳಿಗೆ ಜ.12ರಂದು ವಿವಿಧ ಲಸಿಕೆಗಳನ್ನು ನೀಡಲಾಗಿತ್ತು. ಇವರಲ್ಲಿ 6 ಮಂದಿಗೆ `ರುಬೆಲ್ಲಾ' ಲಸಿಕೆ ಕೊಡಲಾಗಿತ್ತು. ಇವರಲ್ಲಿ ಐವರಲ್ಲಿ ವಾಂತಿ- ಭೇದಿ ಕಾಣಿಸಿಕೊಂಡಿತ್ತು. ಒಂದು ಮಗು ಗುಣಮುಖವಾಗಿದೆ. ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂಬ ಮಾಹಿತಿ ದೊರೆತಿದೆ.

ಮಕ್ಕಳಿಗೆ ವಿವಿಧ ಲಸಿಕೆಯನ್ನು ಒಂದೇ ಕಡೆ ನೀಡಿದ್ದಾರೆ. 15ರಿಂದ 18ವರ್ಷದ ವರಿಗೆ ಕೋವಿಡ್ ಲಸಿಕೆಯನ್ನೂ ಆಗಲೇ ಕೊಡಲಾಗಿದೆ. ಆಗ ಬಹಳ ಜನರು ಸೇರಿದ್ದರು. ಸಿಬ್ಬಂದಿಗೆ ಗೊಂದಲ ಉಂಟಾಗಿರುವ ಸಾಧ್ಯತೆಯೂ ಇದೆ. ಅವರು ಜಾಗೃತಿ ವಹಿಸಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯ ಭೀಮಶಿ ವಾರಿಮನಿ ತಿಳಿಸಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸಲಿಲ್ಲ: ಆಸ್ಪತ್ರೆಗೆ ಬಂದಾಗಲೇ ಇಬ್ಬರು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಮಕ್ಕಳ ವಿಭಾಗದ ವೈದ್ಯರು ಮಾಹಿತಿ ನೀಡಿದ್ದಾರೆ. ಮತ್ತೊಂದು ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಆ ಮಗು ಚೇತರಿಸಿಕೊಳ್ಳಲಿದೆ. ಆ ಮಕ್ಕಳಿಗೆ ನೀಡಿರುವ ಚುಚ್ಚುಮದ್ದಿನ ಬಗ್ಗೆ ತನಿಖೆ ನಡೆಸಬೇಕಾಗುತ್ತದೆ. ನಮ್ಮಲ್ಲಿ ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಬಿಮ್ಸ್ ನಿರ್ದೇಶಕ ಡಾ.ಆರ್.ಜಿ.ವಿವೇಕಿ ಪ್ರತಿಕ್ರಿಯೆ ನೀಡಿದ್ದಾರೆ. 

`ಬೆಳಗಾವಿಯ ರಾಮದುರ್ಗ ತಾಲೂಕಿನಲ್ಲಿ `ರುಬೆಲ್ಲಾ' ಲಸಿಕೆ ಪಡೆದ ಬಳಿಕ ಮಕ್ಕಳ ಸಾವು ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಏನಾಗಿದೆ ಎಂದು ನೋಡಿಕೊಂಡು ಮಾತಾಡ್ತೇನೆ'

-ಡಾ.ಕೆ.ಸುಧಾಕರ್ ಆರೋಗ್ಯ ಸಚಿವ

ಸಾವಿನ ಕುರಿತು ತನಿಖೆಗೆ ಆದೇಶ: `ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ `ರುಬೆಲ್ಲಾ' ಲಸಿಕೆ(ಚುಚ್ಚುಮದ್ದು) ಪಡೆದು ಮೂವರು ಕಂದಮ್ಮಗಳು ಮೃತಪಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಾವಿನ ಬಗ್ಗೆ ಈಗಾಗಲೆ ತನಿಖೆಗೆ ಆದೇಶಿಸಲಾಗಿದೆ. ಮೃತ ಮಕ್ಕಳ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದೇವೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮವಹಿಸುತ್ತೇವೆ. ಇದರಲ್ಲಿ ಯಾರೇ ಸಿಬ್ಬಂದಿ ತಪ್ಪು ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ'

-ಡಾ.ಎಸ್.ವಿ.ಮುನ್ಯಾಳ್, ಜಿಲ್ಲಾ ಆರೋಗ್ಯಾಧಿಕಾರಿ ಬೆಳಗಾವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X