Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುಎಇ ಧ್ವಜಧಾರಿ ಹಡಗು ಬಿಡುಗಡೆಗೊಳಿಸುವ...

ಯುಎಇ ಧ್ವಜಧಾರಿ ಹಡಗು ಬಿಡುಗಡೆಗೊಳಿಸುವ ವಿಶ್ವಸಂಸ್ಥೆ ಮನವಿಗೆ ಹೌದಿ ತಿರಸ್ಕಾರ‌

ವಾರ್ತಾಭಾರತಿವಾರ್ತಾಭಾರತಿ16 Jan 2022 11:33 PM IST
share
ಯುಎಇ ಧ್ವಜಧಾರಿ ಹಡಗು ಬಿಡುಗಡೆಗೊಳಿಸುವ ವಿಶ್ವಸಂಸ್ಥೆ ಮನವಿಗೆ ಹೌದಿ ತಿರಸ್ಕಾರ‌

ಸನಾ, ಜ.16: ಈ ತಿಂಗಳ ಆರಂಭದಲ್ಲಿ ವಶಪಡಿಸಿಕೊಂಡಿದ್ದ ಯುಎಇ ಧ್ವಜವಿರುವ ಹಡಗನ್ನು ಬಿಡುಗಡೆಗೊಳಿಸಬೇಕೆಂಬ ವಿಶ್ವಸಂಸ್ಥೆಯ ಮನವಿಯನ್ನು ಯೆಮನ್‌ನ ಹೌದಿ ಬಂಡುಗೋರರು ತಿರಸ್ಕರಿಸಿದ್ದು, ಈ ಹಡಗು ಸೇನೆಯ ಸೊತ್ತುಗಳನ್ನು ಸಾಗಿಸುತ್ತಿತ್ತು ಎಂದಿದ್ದಾರೆ.

 ಹಡಗನ್ನು ಸಿಬಂದಿ ಸಹಿತ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಶುಕ್ರವಾರ ಒತ್ತಾಯಿಸಿರುವ ವಿಶ್ವಸಂಸ್ಥೆಯ ಭದ್ರತಾ ಸಮಿತಿ, ಏಡನ್ ಕೊಲ್ಲಿ ಮತ್ತು ಕೆಂಪು ಸಮುದ್ರದಲ್ಲಿ ಸಮುದ್ರಯಾನದ ಸ್ವಾತಂತ್ರ್ಯದ ಮಹತ್ವವನ್ನು ಒತ್ತಿಹೇಳಿದೆ. ಬ್ರಿಟನ್ ಮಂಡಿಸಿದ ಮತ್ತು ಸರ್ವಾನುಮತದಿಂದ ಅನುಮೋದಿಸಲ್ಪಟ್ಟ ಹೇಳಿಕೆಯಲ್ಲಿ ‘ ಹಡಗು ಮತ್ತು ಅದರ ಸಿಬಂದಿಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಮತ್ತು ಸಿಬಂದಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತರಿಪಡಿಸುವ ಅಗತ್ಯವನ್ನು 15 ಸದಸ್ಯರ ಭದ್ರತಾ ಸಮಿತಿ ಉಲ್ಲೇಖಿಸಿದೆ. ಅಲ್ಲದೆ, ಯೆಮನ್‌ನಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಸಂಬಂಧಿತ ಬಣಗಳೆಲ್ಲವೂ ಸಹಕರಿಸಬೇಕು ಮತ್ತು ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿ ಮಾತುಕತೆಗೆ ಮುಂದಾಗಬೇಕು ಎಂದು ಹೇಳಿಕೆ ಆಗ್ರಹಿಸಿದೆ.
 11 ಸಿಬಂದಿಗಳ ಸಹಿತ ಹಡಗಿನ್ನು ಹೌದಿ ಬಂಡುಗೋರರು ವಶಕ್ಕೆ ಪಡೆದಿದ್ದರು. ರ್ವಾಬೀ ಎಂಬ ಹೆಸರಿನ ನಾಗರಿಕ ಸಾರಿಗೆ ಹಡಗನ್ನು ಸೌದಿ ಅರೆಬಿಯಾದ ಸಂಸ್ಥೆಯೊಂದು ಲೀಸ್‌ಗೆ ನೀಡಿದ್ದು ಇದು ಆಸ್ಪತ್ರೆಯ ಬಳಕೆಯ ಸಾಧನಗಳನ್ನು ಸಾಗಿಸುತ್ತಿದ್ದಾಗ ಅಂತರಾಷ್ಟ್ರೀಯ ಸಮುದ್ರವ್ಯಾಪ್ತಿಯಲ್ಲಿ ಅದನ್ನು ಹೌದಿ ಬಂಡುಗೋರರು ವಶಕ್ಕೆ ಪಡೆದಿದ್ದಾರೆ ಎಂದು ಯುಎಇ ಹೇಳಿದೆ.


ಆದರೆ ಇದನ್ನು ತಳ್ಳಿಹಾಕಿರುವ ಹೌದಿ ಅಧಿಕಾರಿ ಹುಸೈನ್ ಅಲ್ ಅಝೀ, ರ್ವಾಬೀ ಹಡಗು ಮಕ್ಕಳಿಗಾಗಿ ಆಟಿಕೆಯನ್ನು ಸಾಗಿಸುತ್ತಿರಲಿಲ್ಲ, ಅದರಲ್ಲಿ ಉಗ್ರಗಾಮಿಗಳಿಗೆ ಆಯುಧವಿತ್ತು ಎಂದಿದ್ದಾರೆ. ವಿಶ್ವಸಂಸ್ಥೆಯು ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿದ ಕೊಲೆಗಾರರ ಪಕ್ಷ ವಹಿಸಿದೆ. ನಮ್ಮ ಜನರ ವಿರುದ್ಧ ನಡೆಯುವ ಆಕ್ರಮಣದಲ್ಲಿ ಭಾಗವಹಿಸಿರುವ ದೇಶಕ್ಕೆ ಸೇರಿದ ರ್ವಾಬೀ ಹಡಗು ಯೆಮನ್‌ನ ಸಮುದ್ರವ್ಯಾಪ್ತಿಯನ್ನು ಅಕ್ರಮವಾಗಿ ಪ್ರವೇಶಿಸಿದೆ ಎಂದವರು ಆರೋಪಿಸಿದ್ದಾರೆ.
 ಯೆಮನ್ನಲ್ಲಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಸರಕಾರಕ್ಕೆ ಬೆಂಬಲವಾಗಿ ಸೌದಿ ನೇತೃತ್ವದ ಮಿತ್ರರಾಷ್ಟ್ರಗಳ ಸೇನೆ 2015ರ ಮಾರ್ಚ್‌ನಿಂದ ಯೆಮನ್‌ನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.
ರ್ವಾಬೀ ಹಡಗನ್ನು ಜನವರಿ 3ರಂದು ಇರಾನ್ ಬೆಂಬಲಿತ ಹೌದಿ ಬಂಡುಗೋರರು ವಶಕ್ಕೆ ಪಡೆದಿದ್ದು, ಈ ಹಡಗಿನಲ್ಲಿ ರೈಫಲ್‌ಗಳು, ಸೇನೆಯ ಬಳಕೆಗಾಗಿ ತೆಪ್ಪಗಳು ಮತ್ತಿತರ ಸಾಧನಗಳಿರುವುದಕ್ಕೆ ಪುರಾವೆ ಎಂದು ವೀಡಿಯೊ ಒಂದನ್ನು ಬಿಡುಗಡೆಗೊಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X