Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾನ್ಸ್: ಹೊಸ ಲಸಿಕೆ ಪಾಸ್ ನಿಯಮ...

ಫ್ರಾನ್ಸ್: ಹೊಸ ಲಸಿಕೆ ಪಾಸ್ ನಿಯಮ ವಿರೋಧಿಸಿ ಬೃಹತ್ ಪ್ರತಿಭಟನೆ‌

ವಾರ್ತಾಭಾರತಿವಾರ್ತಾಭಾರತಿ16 Jan 2022 11:38 PM IST
share
ಫ್ರಾನ್ಸ್: ಹೊಸ ಲಸಿಕೆ ಪಾಸ್ ನಿಯಮ ವಿರೋಧಿಸಿ ಬೃಹತ್ ಪ್ರತಿಭಟನೆ‌

 ಪ್ಯಾರಿಸ್, ಜ.16: ಲಸಿಕೆ ಪಡೆದವರಿಗೆ ನೀಡುವ ಆರೋಗ್ಯ ಕಾರ್ಡ್ ಅನ್ನು ಲಸಿಕೆ ಪಾಸ್ ಎಂದು ಪರಿಗಣಿಸುವ ನೂತನ ಕಾಯ್ದೆಯನ್ನು ಜಾರಿಗೊಳಿಸುವ ಫ್ರಾನ್ಸ್ ಸರಕಾರದ ನಿರ್ಧಾರವನ್ನು ವಿರೋಧಿಸಿ ಶನಿವಾರ ಫ್ರಾನ್ಸ್ ನ ಹಲವು ನಗರಗಳಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ ಎಂದು ವರದಿಯಾಗಿದೆ.
 
ಆದರೆ ಕಳೆದ ವಾರಾಂತ್ಯ ನಡೆದಿದ್ದ ಪ್ರತಿಭಟನೆಗಿಂತ ಈ ಬಾರಿ ಕಡಿಮೆ ಜನ ಸೇರಿದ್ದರು. ಕಳೆದ ವಾರದ ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಜನ ಸೇರಿದ್ದರೆ ಈ ಬಾರಿ 54,000 ಮಂದಿ ಪಾಲ್ಗೊಂಡಿದ್ದರು. ಪ್ಯಾರಿಸ್‌ನಲ್ಲಿ ಐಫಲ್ ಗೋಪುರದ ಬಳಿಯಿಂದ ಆರಂಭವಾದ ಪ್ರತಿಭಟನಾ ರ್ಯಾಲಿಗೆ ಯುರೋಪಿಯನ್ ಯೂನಿಯನ್ ವಿರೋಧಿ ಬಲಪಂಥೀಯ ನಾಯಕಿ, ಅಧ್ಯಕ್ಷೀಯ ಅಭ್ಯರ್ಥಿ ಫ್ಲೋರಿಯಾನ್ ಫಿಲಿಪ್ಪೋಟ್ ಚಾಲನೆ ನೀಡಿದ್ದರು. ಬೋರ್ಡಿಯಕ್ಸ್, ಟೌಲೋಸ್, ಲಿಲ್ಲೆ ಮುಂತಾದ ಪ್ರಮುಖ ನಗರಗಳಲ್ಲೂ ಪ್ರತಿಭಟನೆ ನಡೆದಿದೆ. ‘ಲಸಿಕೆ ಬೇಡ ಎನ್ನಿ’ ‘ವೈರಸ್ ನಿಯಂತ್ರಣ ಅವರ ಉದ್ದೇಶವಲ್ಲ, ನಿಮ್ಮನ್ನು ನಿಯಂತ್ರಿಸುವ ಉದ್ದೇಶ ಅವರದ್ದು’
  
ಮುಂತಾದ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದರು. ಲಸಿಕೆ ಪಡೆಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಆಡಲು ಅವಕಾಶ ನಿರಾಕರಿಸಲ್ಪಟ್ಟ ವಿಶ್ವದ ಅಗ್ರಗಣ್ಯ ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್ರನ್ನು ಬೆಂಬಲಿಸುವ ಘೋಷಣೆಯೂ ಮೊಳಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಲಸಿಕೆ ಪಡೆಯದವರಿಗೆ ಅನ್ವಯಿಸುವ ಕಠಿಣ ನಿರ್ಬಂಧ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಈ ತಿಂಗಳ ಆರಂಭದಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ ಘೋಷಿಸಿದ ಬಳಿಕ ಲಸಿಕೆ ಕಡ್ಡಾಯ ವಿರೋಧಿ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. 

ಶನಿವಾರದಿಂದ ಅನ್ವಯಿಸುವಂತೆ, ಸರಕಾರ ನೀಡುವ ಆರೋಗ್ಯ ಕಾರ್ಡ್ನ ಫಲಾನುಭವಿಗಳ ಪಟ್ಟಿಯಲ್ಲಿ ಲಸಿಕೆ ಪಡೆದು 7 ತಿಂಗಳೊಳಗೆ ಬೂಸ್ಟರ್ ಲಸಿಕೆ ಪಡೆಯದಿರುವ ಸಾವಿರಾರು ಜನರ ಹೆಸರನ್ನು ಕೈಬಿಡಲಾಗಿದೆ. ಬಾರ್, ರೆಸ್ಟಾರೆಂಟ್, ಸಿನೆಮ ಮಂದಿರ ಮತ್ತಿತರ ಸಾರ್ವಜನಿಕ ಕಟ್ಟಡಗಳಿಗೆ, ಫ್ರಾನ್ಸ್‌ನ ಹೈಸ್ಪೀಡ್ ರೈಲಿನಲ್ಲಿ ಪ್ರಯಾಣಿಸಬೇಕಿದ್ದರೆ ಆರೋಗ್ಯ ಕಾರ್ಡ್ ಅಗತ್ಯವಾಗಿದೆ. ಆರೋಗ್ಯ ಕಾರ್ಡ್ ಅನ್ನು ಲಸಿಕೆ ಕಾರ್ಡ್ ಆಗಿ ಪರಿವರ್ತಿಸುವ ಉದ್ದೇಶದ ಮಸೂದೆಗೆ ನ್ಯಾಷನಲ್ ಅಸೆಂಬ್ಲಿಯಲ್ಲಿ ಅನುಮೋದನೆ ದೊರೆತಿದ್ದು ಈಗ ಸೆನೆಟ್ ಮೇಲ್ಮನೆಯಲ್ಲಿ ಮಂಡಿಸಲಾಗಿದ್ದು ಚರ್ಚೆ ನಡೆಯುತ್ತಿದೆ.
 
ಫ್ರಾನ್ಸ್‌ನಲ್ಲಿ ಅತ್ಯಧಿಕ ವೇಗದ ಪ್ರಸರಣ ಸಾಮರ್ಥ್ಯವಿರುವ ಒಮೈಕ್ರಾನ್ ಸೋಂಕಿನ ಪ್ರಕರಣ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಕಠಿಣ ನಿರ್ಬಂಧ ಜಾರಿಗೆ ನಿರ್ಧರಿಸಿದೆ. ಶುಕ್ರವಾರ ಫ್ರಾನ್ಸ್‌ನಲ್ಲಿ 3,30,000ಕ್ಕೂ ಹೆಚ್ಚು ಕೋವಿಡ್-19 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಒಮೈಕ್ರಾನ್ ಸೋಂಕು ಕಡಿಮೆ ಅಪಾಯಕಾರಿಯಾಗಿರುವುದರಿಂದ ಆಸ್ಪತ್ರೆಗೆ ದಾಖಲಾದರೂ ಹೆಚ್ಚು ಸಮಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅಗತ್ಯವಿಲ್ಲ ಎಂದು ಫ್ರಾನ್ಸ್ ನ ಆರೋಗ್ಯ ಸಚಿವ ಒಲಿವಿಯರ್ ವೆರಾನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X