Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಕೋವಿಡ್ ಲಸಿಕೆ ಅಭಿಯಾನಕ್ಕೆ 1...

ಭಾರತದ ಕೋವಿಡ್ ಲಸಿಕೆ ಅಭಿಯಾನಕ್ಕೆ 1 ವರ್ಷ: ಈತನಕ 156.76 ಕೋಟಿ ಡೋಸ್ ಗಳ ನೀಡಿಕೆ

ವಾರ್ತಾಭಾರತಿವಾರ್ತಾಭಾರತಿ16 Jan 2022 11:46 PM IST
share
ಭಾರತದ ಕೋವಿಡ್ ಲಸಿಕೆ ಅಭಿಯಾನಕ್ಕೆ 1 ವರ್ಷ: ಈತನಕ 156.76 ಕೋಟಿ ಡೋಸ್ ಗಳ ನೀಡಿಕೆ

ಹೊಸದಿಲ್ಲಿ, ಜ.16: ಕೋವಿಡ್19 ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನವು ರವಿವಾರ ಒಂದು ವರ್ಷವನ್ನು ಪೂರ್ತಿಗೊಳಿಸಿದೆ. ಈ ಅವಧಿಯಲ್ಲಿ 156.76 ಕೋಟಿ ಡೋಸ್ ಗಳನ್ನು ನೀಡಲಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ ಕಳೆದ ಒಂದು ವರ್ಷದಲ್ಲಿ ದೇಶದ ಶೇ.92ರಷ್ಟು ವಯಸ್ಕ ಜನಸಂಖ್ಯೆಯು ಕನಿಷ್ಠ 1 ಡೋಸ್ ಲಸಿಕೆಯನ್ನು ಪಡೆದಿದ್ದರೆ, ಶೇ.68ಕ್ಕೂ ಅಧಿಕ ಜನಸಂಖ್ಯೆಗೆ ಎರಡೂ ಡೋಸ್ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರ ರವಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ದೇಶದಲ್ಲಿ ಲಸಿಕೀಕರಣ ಅಭಿಯಾನಕ್ಕೆ ಒಂದು ವರ್ಷ ತುಂಬಿರುವ ಸ್ಮರಣಾರ್ಥವಾಗಿ ಕೇಂದ್ರ ಸರಕಾರವು ಅಂಚೆ ಚೀಟಿಯೊಂದನ್ನು ರವಿವಾರ ಬಿಡುಗಡೆಗೊಳಿಸಿದೆ. ಕಳೆದ ವರ್ಷದ ಜನವರಿ 16ರಂದು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಗಿತ್ತು. ಕೋವಿಡ್19 ವಿರುದ್ಧ ಹೋರಾಟದ ಎಲ್ಲಾ ಮುಂಚೂಣಿ ಕಾರ್ಯಕರ್ತರ ಲಸಿಕೀಕರಣ ಅಭಿಯಾನವು ಫೆಬ್ರವರಿ 2ರಂದು ಆರಂಭಗೊಂಡಿತ್ತು.

ಕೋವಿಡ್19 ಲಸಿಕೀಕರಣ ಅಭಿಯಾನದ ಮೂರನೆ ಹಂತದ ಅಭಿಯಾನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ನಿರ್ದಿಷ್ಟವಾದ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿರುವ 45 ವರ್ಷದ ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರಿಗೆ ಲಸಿಕೆಯನ್ನು ನೀಡಲಾಯಿತು.
ಎಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೀಕರಣ ಆರಂಭಗೊಂಡಿತು. ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರನ್ನೂ ಲಸಿಕೀಕರಣದ ವ್ಯಾಪ್ತಿಗೆ ತರುವ ಅಭಿಯಾನವು ಮೇ 1ರಿಂದ ಆರಂಭವಾಯಿತು.
       
ಈ ವರ್ಷದ ಜನವರಿ 3ರಿಂದ 15-18 ವರ್ಷ ವಯೋಮಾನದ ಎಲ್ಲರಿಗೂ ಲಸಿಕೀಕರಣ ಅಭಿಯಾನ ಆರಂಭಗೊಂಡಿತು. ಕಡಿಮೆ ಜನಸಂಖ್ಯೆಯಿರು ಹಾಗೂ ಅಭಿವೃದ್ಧಿ ಹೊಂದಿದ ಹಲವಾರು ಪಾಶ್ಚಿಮಾತ್ಯ ದೇಶಗಳಿಗೆ ಹೋಲಿಸಿದರೆ ಬೃಹತ್ ಜನಸಂಖ್ಯೆಯಿರುವ ಭಾರತದಲ್ಲಿ ಲಸಿಕೀಕರಣ ಅಭಿಯಾನವು ಅತ್ಯಂತ ಯಶಸ್ವಿ ಹಾಗೂ ಬೃಹತ್ ಕಾರ್ಯಕ್ರಮವಾಗಿತ್ತು ಎಂದು ಆರೋಗ್ಯ ಸಚಿವಾಲಯ ಇಂದು ನೀಡಿದ ಹೇಳಿಕೆಯೊಂದರಲ್ಲಿ ತಿಳಿಸಿದೆ.43.19 ಲಕ್ಷಕ್ಕೂ ಅಧಿಕ ಮುನ್ನೆಚ್ಚರಿಕಾ ಡೋಸ್ಗಳನ್ನು ನೀಡಲಾಗಿದೆ. 15ರಿಂದ 18 ವಯೋಮಾನದ ಫಲಾನುಭವಿಗಳಗೆ 3,38,50,912 ಮೊದಲ ಡೋಸ್ಗಳನ್ನು ನೀಡಲಾಗಿದೆ.

ಲಸಿಕೀಕರಣ: ಭಾರತದ ಸಾಧನೆಯ ಮೈಲುಗಲ್ಲುಗಳು

ಲಸಿಕೀಕರಣ ಅಭಿಯಾನದಲ್ಲಿ ಭಾರತವು ಹಲವಾರು ಮೈಲುಗಲ್ಲುಗಳನ್ನು ಸ್ಥಾಪಿಸಿದೆ. 9 ತಿಂಗಳುಗಳಿಗೂ ಕಡಿಮೆ ಅವಧಿಯಲ್ಲಿ 100 ಕೋಟಿ ಡೋಸ್ಗಳನ್ನು ನೀಡಲಾಗಿದೆ. ಒಂದೇ ದಿನದಲ್ಲಿ 2.5 ಕೋಟಿ ಹಾಗೂ ಹಲವು ದಿನಗಳಲ್ಲಿ 1 ಕೋಟಿಗೂ ಅಧಿಕ ಡೋಸ್ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಕೋವಿಡ್19 ಲಸಿಕೆಯ ಡೋಸ್ಗಳ ನೀಡಿಕೆಯು ಕಳೆದ ವರ್ಷದ ಅಕ್ಟೋಬರ್ 21ರಂದು 100 ಕೋಟಿಯ ಗಡಿಯನ್ನು ದಾಟಿತ್ತ್ತು. ದಿನಂಪ್ರತಿ ಸರಾಸರಿ 66 ಲಕ್ಷ ಲಸಿಕೆಗಳ ನೀಡಿಕೆಯೊಂದಿಗೆ ಭಾರತವು ಈ ವರ್ಷದ ಜನವರಿ 16ರವರೆಗೆ 156.76 ಕೋಟಿ ಡೋಸ್ಗಳ ನೀಡಿಕೆಯನ್ನು ಪೂರ್ಣಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X