Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರೋಪಿಗಳಾದ ಪ್ರಸಾದ್, ಚೇತನ್ ಕೊಟ್ಟಾರಿ...

ಆರೋಪಿಗಳಾದ ಪ್ರಸಾದ್, ಚೇತನ್ ಕೊಟ್ಟಾರಿ ಬಂಧನಕ್ಕೆ ಆಕ್ಷೇಪ; ಪೊಲೀಸರ ವರ್ತನೆ ಬಗ್ಗೆ ತನಿಖೆಗೆ ಕುಟುಂಬಸ್ಥರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Jan 2022 8:16 PM IST
share

ಮಂಗಳೂರು, ಜ.17: ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ಆರೋಪಿಗಳಾದ ಪ್ರಸಾದ್ ಮತ್ತು ಚೇತನ್ ಕೊಟ್ಟಾರಿ ಬಂಧನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕುಟುಂಬಸ್ಥರು, ಈ ಬಗ್ಗೆ ಪೊಲೀಸರ ವರ್ತನೆಯ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿಂದು ಈ ಆರೋಪ ಮಾಡಿದ ಬಂಧಿತ ಆರೋಪಿಗಳಾದ ಚೇತನ್ ಕೊಟ್ಟಾರಿ ಹಾಗೂ ಪ್ರಸಾದ್‌ರವರ ಪತ್ನಿಯರು ಹಾಗೂ ಕುಟುಂಬಸ್ಥರು, ಇಬ್ಬರೂ ಪ್ರಕರಣದ ಪ್ರಮುಖ ಆರೋಪಿಯಾದ ಆಕಾಶಭವನ ಶರಣ್ ಬಗ್ಗೆ ಪರಿಚಯವನ್ನೂ ಹೊಂದಿಲ್ಲ ಎಂದರು.

ಬಂಧಿತ ಆರೋಪಿ ಚೇತನ್ ಕೊಟ್ಟಾರಿ ಪತ್ನಿ ಭಾಗ್ಯಶ್ರೀ ಮಾತನಾಡಿ, ಜ. 13ರಂದು ಸಿಸಿಬಿ ಪೊಲೀಸರು ತಮ್ಮ ಗಂಡನನ್ನು ವಶಕ್ಕೆ ಪಡೆದು 2021ರ ಡಿಸೆಂಬರ್ 9ರಂದು ದಾಖಲಾದ ಅಪರಾಧ ಪ್ರಕರಣದ ಐದನೆ ಆರೋಪಿಯನ್ನಾಗಿಸಿದ್ದಾರೆ ಎಂದರು.
ಆದರೆ ಅವರು ಕ್ರಿಮನಲ್ ಅಪರಾಧದಲ್ಲಿ ಭಾಗಿಯಾಗಿಲ್ಲ. ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇದು ಅಸಂವಿಧಾನಿಕ. ಈ ಹಿಂದೆ ಅವರ ಮೇಲಿದ್ದ ರೌಡಿ ಶೀಟರ್ ಕೂಡಾ ಅವರ ಗುಣನಡತೆಯ ಹಿನ್ನೆಲೆಯಲ್ಲಿ ತೆರವಾಗಿತ್ತು. ಇದೀಗ ಮತ್ತೆ ಅವರನ್ನು ಆರೋಪಿಯನ್ನಾಗಿಸಿ ಕುಟುಂಬಕ್ಕೆ ಕಳಂಕ ತರಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಫರಂಗಿಪೇಟೆಯ ನಿಕ್ಷೀತ ಮಾತನಾಡಿ, ನನ್ನ ಪತಿ ಪ್ರಸಾದ್ ವಿರುದ್ಧ ಈ ಹಿಂದೆಯೂ ಯಾವುದೇ ರೀತಿಯ ಅಪರಾಧ ಪ್ರಕರಣಗಳಿಲ್ಲ. ಅವರು ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯಗಳೊಂದಿಗೆ ಪರೋಪಕಾರಿಯಾಗಿದ್ದಾರೆ. ಇದೀಗ ಸುಳ್ಳು ಪ್ರಕರಣದಲ್ಲಿ ಅವರನ್ನು ಆರೋಪಿಯನ್ನಾಗಿಸಿರುವುದು ಕುಟುಂಬಕ್ಕೆ ನೋವು ತಂದಿದೆ ಎಂದರು.

‘‘ನಮ್ಮ ಅಣ್ಣ ಸಮಾಜದಲ್ಲಿ ಸಂಕಷ್ಟದಲ್ಲಿದ್ದವರಿಗೆ ವೆಯಕ್ತಿಕವಾಗಿಯೂ ನೆರವು ಮಾಡುತ್ತಾನೆ. ಪೊಲೀಸರು ಹೇಳಿರುವಂತೆ ಆತನಿಗೆ ಆ ಪ್ರಕರಣದ ಮುಖ್ಯ ಆರೋಪಿಯ ಪರಿಚಯ ಕೂಡಾ ಇಲ್ಲ. ಸಂಘಟನೆಗಳ ಪರವಾಗಿ ಕೆಲಸ ಮಾಡುತ್ತಿದ್ದ ಆತನ ಬಗ್ಗೆ ಎಲ್ಲರಿಗೂ ತಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಘಟನೆಗಳವರು ಯಾಕೆ ಮೌನವಾಗಿದ್ದಾರೆ ಎಂದು ತಿಳಿಯುತ್ತಿಲ್ಲ. ನಮಗೆ ನ್ಯಾಯ ದೊರೆಯಬೇಕು. ಪೊಲೀಸರ ಈ ನಡೆಯ ಬಗ್ಗೆ ಸಂಸದರು, ಶಾಸಕರಿಗೆ ಮನವಿ ನೀಡಲು ನಿರ್ಧರಿಸಿದ್ದೇವೆ’’ ಎಂದು ಬಂಧಿತ ಆರೋಪಿ ಪ್ರಸಾದ್ ಸಹೋದರಿ ಗಾಯತ್ರಿ ಹೇಳಿದರು.
ಗೋಷ್ಠಿಯಲ್ಲಿ ರಾಜೇಶ್, ಮಾಧುರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X