ಮಹಾದಾಯಿ ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಸತೀಶ್ ಜಾರಕಿಹೊಳಿ
ಬೆಳಗಾವಿ, ಜ.18: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿಗೆ ನೀರು ಹರಿಯುವ ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಯೋಜನೆ ಜಾರಿ ಸಂಬಂಧ ನಡೆಯಲಿರುವ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮಹಾದಾಯಿ ಯೋಜನೆ ಜಾರಿಗಾಗಿ ಪಾದಯಾತ್ರೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಇಲ್ಲಿನ ಪಾದಯಾತ್ರೆ ಸಂಬಂಧ ಶೀಘ್ರದಲ್ಲಿಯೇ ರೂಪುರೇಷೆ ಸಿದ್ಧಗೊಳ್ಳಲಿದೆ ಎಂದ ಅವರು, ನರಗುಂದದಿಂದ ಮಹಾದಾಯಿ ಉಗಮಸ್ಥಾನ ಕಣಕುಂಬಿವರೆಗೆ ಪಾದಯಾತ್ರೆ ನಡೆಯಲಿದೆ ಎಂದೂ ತಿಳಿಸಿದರು.
ಮೇಕೆದಾಟು ಯೋಜನೆ ಜಾರಿಗೆ ನಡೆದ ಪಾದಯಾತ್ರೆ ಯಶಸ್ವಿಯಾಗಿದೆ. ಸರಕಾರವೂ ನಮ್ಮ ಪಾದಯಾತ್ರೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಸತೀಶ್ ಜಾರಕಿಹೊಳಿ ನುಡಿದರು.
Next Story