Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಭಾರತವೂ...

ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಭಾರತವೂ ಕೈಜೋಡಿಸಲಿ: ಡಾ.ಹಂದೆ

ವಾರ್ತಾಭಾರತಿವಾರ್ತಾಭಾರತಿ19 Jan 2022 7:19 PM IST
share
ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಭಾರತವೂ ಕೈಜೋಡಿಸಲಿ: ಡಾ.ಹಂದೆ

ಮಣಿಪಾಲ, ಜ.19: ವಿಶ್ವಸಂಸ್ಥೆಯು 2030ರಲ್ಲಿ ಸಾಧಿಸುವ ಗುರಿ ಇರಿಸಿಕೊಂಡ ‘ಎಸ್‌ಜಿಎಸ್’ ಸುಸ್ಥಿರ ಅಭಿವೃದ್ಧಿ ನೀತಿಯಲ್ಲಿ ಹವಾಮಾನ ಬದಲಾವಣೆ, ಇಂಧನ ಹಾಗೂ ಬರ ಮುಂತಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಭಾರತವೂ ಮುಂದಾಗಬೇಕು ಎಂದು ಮ್ಯಾಗ್ಸಸೆ ಪ್ರಶಸ್ತಿ ವಿಜೇತ ಸೌರವಿದ್ಯುತ್ ಸಾಧಕ ಹಾಗೂ ಸೆಲ್ಕೋ ಸೋಲಾರ್ ಲೈಟ್ಸ್‌ನ ಸ್ಥಾಪಕ ಅಧ್ಯಕ್ಷ ಡಾ.ಹರೀಶ್ ಹಂದೆ ಹೇಳಿದ್ದಾರೆ.

ಮಣಿಪಾಲದ ಟಿ.ಎ.ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ (ಟ್ಯಾಪ್ಮಿ) ಹಾಗೂ ಮಾಹೆ ಮಣಿಪಾಲದ ಹೊಟೇಲ್ ವ್ಯಾಲಿವ್ಯೆ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಥಾಪಕರ ದಿನಾಚರಣೆ ಹಾಗೂ 39ನೇ ಟಿ.ಎ.ಪೈ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡುತಿದ್ದರು.

ಈಗ ಜಾಗತಿಕ ಸಮಸ್ಯೆಗಳಾಗಿರುವ ಜಲಕ್ಷಾಮ, ಹವಾಮಾನ ವೈಫರಿತ್ಯ, ಇಂಧನ ಮುಂತಾದವುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಮಣಿಪಾಲದ ಟ್ಯಾಪ್ಮಿ, ಮಾಹೆ ಹಾಗೂ ಬಿವಿಟಿಯಂಥ ಸಂಸ್ಥೆಗಳೂ ಕೈಜೋಡಿಸಬಹುದು. ದಶಕಗಳ ಹಿಂದೆ ಬಯೋಗ್ಯಾಸ್‌ಗೆ ಉತ್ತೇಜನ ನೀಡಿದ ಟಿ.ಎ.ಪೈ ಅವರು ಇಂದು ಕೊರೋನ ಹಿನ್ನೆಲೆಯಲ್ಲಿ ಉದ್ಘವಿಸಿರುವ ಸಮಸ್ಯೆಗಳಿಗೆ ಮಾರ್ಗಸೂಚಕರಂತೆ ಭಾಸವಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.

ಎರಡು ವರ್ಷಗಳಿಂದ ಕಾಡುತ್ತಿರುವ ಕೊರೋನದಿಂದಾಗಿ ಭಾರತದಲ್ಲಿ 16ಕೋಟಿಗೂ ಅಧಿಕ ಮಂದಿ ಬಡತನದ ರೇಖೆಗಿಂತ ಕೆಳಗಿಳಿದಿದ್ದಾರೆ. ಇಂಥ ಸಂದರ್ಭದಲ್ಲಿ ಟಿ.ಎ.ಪೈ ತೋರಿದ ಎಲ್ಲರನ್ನೂ ಒಳಗೊಳ್ಳುವ (ಇನ್‌ಕ್ಲೂಸಿವ್) ನೀತಿ ನಮಗಿಂದು ಬೇಕಾಗಿದೆ. ದೇಶವನ್ನು ಸಮಸ್ಯೆಗಳಿಂದ ಪಾರು ಮಾಡುವ ಯೋಚನಾಕ್ರಮ ಇದಾಗಿದೆ ಎಂದು ಡಾ.ಹಂದೆ ನುಡಿದರು.

ಗೌರವ ಅತಿಥಿಯಾಗಿ ಭಾಗವಹಿಸಿದ್ದ ಶ್ರೀಧರ್ಮಸ್ಥಳ ಗ್ರಾಾಮಾಭಿವೃದ್ಧಿಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್, ಟಿ.ಎ.ಪೈ ಅವರ ದೂರದೃಷ್ಟಿಯ ಫಲವಾಗಿಯೇ ಕ್ಷೀರ ಕ್ಷಾಮ ವಿದ್ದ ಕರಾವಳಿ ಜಿಲ್ಲೆೆಯಲ್ಲೀಗ ನಿತ್ಯ 6 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ಲಾಭದಲ್ಲಿ, ಗುಣಮಟ್ಟದಲ್ಲಿ ದ.ಕ. ಹಾಲು ಒಕ್ಕೂಟ ಮುಂಚೂಣಿಯಲ್ಲಿರಲೂ ಕೆನರಾ ಮಿಲ್ಕ್ ಯೂನಿಯನ್ ಮೂಲಕ ಪೈಯವರು ಹಾಕಿಕೊಟ್ಟ ಭದ್ರಬುನಾದಿ ಕಾರಣ ಎಂದು ನುಡಿದರು.

ಕೇಂದ್ರದ ಮಾಜಿ ಸಚಿವರಾಗಿದ್ದ ಟಿ.ಎ.ಪೈ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅಂಚೆ ಇಲಾಖೆ ಹೊರತಂದ ವಿಶೇಷ ಲಕೋಟೆ ಮತ್ತು ಅಂಚೆ ಚೀಟಿಯನ್ನು ಕರ್ನಾಟಕ ವೃತ್ತದ ಚೀಫ್ ಪೋಸ್ಟ್‌ಮಾಸ್ಟರ್ ಜನರಲ್ ಶಾರದಾ ಸಂಪತ್ ಬಿಡುಗಡೆಗೊಳಿಸಿದರು.

ಮಾಹೆಯ ಪ್ರೊ. ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಮಹಿಳಾ ಸಬಲೀಕರಣ ಹಾಗೂ ಕೃಷಿ ಸಾಲ ನೀಡಿಕೆಯಲ್ಲಿ ತೋರಿದ ಮಾನವೀಯತೆಗಾಗಿ ಟಿ.ಎ.ಪೈ ಯಾವತ್ತೂ ಸ್ಮರಣೀಯರಾಗಿರುತ್ತಾರೆ. ಮುಂದಿನ ಪೀಳಿಗೆ ನೆನಪಿನಲ್ಲಿಟ್ಟುಕೊಳ್ಳಬೇಕಾದ ಇಂತಹ ವ್ಯಕ್ತಿಗಳು ಶತಮಾನಕ್ಕೆೆ ಒಮ್ಮೆ ಹುಟ್ಟುತ್ತಾರೆ ಎಂದರು.

ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಮಹಿಳಾ ಸಬಲೀಕರಣ ಹಾಗೂ ಕೃಷಿ ಸಾಲ ನೀಡಿಕೆಯಲ್ಲಿ ತೋರಿದ ಮಾನವೀಯತೆಗಾಗಿ ಟಿ.ಎ.ಪೈ ಯಾವತ್ತೂ ಸ್ಮರಣೀಯರಾಗಿರುತ್ತಾರೆ. ಮುಂದಿನ ಪೀಳಿಗೆ ನೆನಪಿನಲ್ಲಿಟ್ಟುಕೊಳ್ಳಬೇಕಾದ ಇಂತಹ ವ್ಯಕ್ತಿಗಳು ಶತಮಾನಕ್ಕೆ ಒಮ್ಮೆ ಹುಟ್ಟುತ್ತಾರೆ ಎಂದರು. ಟಿ.ಎ.ಪೈ ದೂರದೃಷ್ಟಿಯಿಂದ ಪ್ರಾರಂಭಿಸಿದ ಟ್ಯಾಪ್ಮಿ ಇಂದು ದೇಶದ ಮುಂಚೂಣಿ ಬಿ ಸ್ಕೂಲ್‌ಗಳಲ್ಲಿ ಒಂದಾಗಿದೆ ಎಂದು ಮಾಹೆ ಕುಲಪತಿ ಲೆ. ಜ. ಡಾ. ಎಂ.ಡಿ. ವೆಂಕಟೇಶ್ ಹೇಳಿದರು. ಮಂಗಳೂರು ಕೆಎಂಸಿ ಪ್ರಾಧ್ಯಾಪಕ ಡಾ.ಲಕ್ಷ್ಮಣ ಪ್ರಭು, ಟಿ.ಎ.ಪೈಯವರ ಸಂಸ್ಮರಣೆ ಮಾಡಿದರು.

ಟಿ.ಎ.ಪೈ ದೂರದೃಷ್ಟಿಯಿಂದ ಪ್ರಾರಂಭಿಸಿದ ಟ್ಯಾಪ್ಮಿ ಇಂದು ದೇಶದ ಮುಂಚೂಣಿ ಬಿ ಸ್ಕೂಲ್‌ಗಳಲ್ಲಿ ಒಂದಾಗಿದೆ ಎಂದು ಮಾಹೆ ಕುಲಪತಿ ಲೆ. ಜ. ಡಾ. ಎಂ.ಡಿ. ವೆಂಕಟೇಶ್ ಹೇಳಿದರು. ಮಂಗಳೂರು ಕೆಎಂಸಿ ಡಾ.ಲಕ್ಷ್ಮಣ, ಟಿ.ಎ.ಪೈಯವರ ಸಂಸ್ಮರಣೆ ಮಾಡಿದರು. ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಪೈ, ಮಣಿಪಾಲ್ ಮೀಡಿಯ ನೆಟ್ವರ್ಕ್‌ನ ಕಾರ್ಯ ನಿರ್ವಾಹಕ ಅಧ್ಯಕ್ಷ ಟಿ.ಸತೀಶ್ ಯು. ಪೈ, ಬಿವಿಟಿ ನಿರ್ವಾಹಕ ವಿಶ್ವಸ್ಥ ಟಿ.ಅಶೋಕ್ ಪೈ ಉಪಸ್ಥಿತರಿದ್ದರು.

ಟ್ಯಾಪ್ಮಿ ನಿರ್ದೇಶಕ ಪ್ರೊ. ಮಧು ವೀರರಾಘವನ್ ಸ್ವಾಗತಿಸಿದರು. ಶೈಕ್ಷಣಿಕ ಡೀನ್ ಡಾ.ವಿಶ್ವನಾಥನ್ ಅಯ್ಯರ್ ಕಾರ್ಯಕ್ರಮ ನಿರ್ವಹಿಸಿದರೆ, ಸಹ ಡೀನ್ ಡಾ. ಸುಧೀಂದ್ರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X