Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲಸಿಕಾ ಅಭಿಯಾನ ತೀವ್ರಗೊಳಿಸಲು ದ.ಕ....

ಲಸಿಕಾ ಅಭಿಯಾನ ತೀವ್ರಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ವಾರ್ತಾಭಾರತಿವಾರ್ತಾಭಾರತಿ19 Jan 2022 9:17 PM IST
share
ಲಸಿಕಾ ಅಭಿಯಾನ ತೀವ್ರಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ಮಂಗಳೂರು, ಜ.19: ಜಿಲ್ಲೆಯಲ್ಲಿ ಇನ್ನೂ ಕೂಡ ಕೋವಿಡ್ ವ್ಯಾಕ್ಸಿನ್‌ನ ಮೊದಲ ಡೋಸ್ ಶೇ. 100ರಷ್ಟು ಪೂರ್ಣಗೊಳ್ಳದ ಬಗ್ಗೆ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿ, ಸಿಬ್ಬಂದಿಗಳು ಲಸಿಕಾ ಅಭಿಯಾನವನ್ನು ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಅವರು ಇಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವರ್ಚುವಲ್ ಮಾಧ್ಯಮದ ಮೂಲಕ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿದರು.

ಮೊದಲ ಡೋಸ್ ನೀಡಿಕೆಯಲ್ಲಿ ಜಿಲ್ಲೆ ಶೇ. 100ರ ಗುರಿ ತಲುಪಲೇಬೇಕು, ಅದಕ್ಕಾಗಿ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು, ಬಿಲ್ ಕಲೆಕ್ಟರ್‌ಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜನ ಪ್ರತಿನಿಧಿಗಳು, ಆರೋಗ್ಯ ನಿರೀಕ್ಷಕರು, ವೈದ್ಯಾಧಿಕಾರಿಗಳೊಂದಿಗೆ ಸಂಬಂಧಿಸಿದವರೆಲ್ಲರೂ ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 3-4 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗುವ ಸಾಧ್ಯತೆಗಳು ಇದೆ. ಆದರೆ ಗಾಬರಿ ಪಡುವ ಅಗತ್ಯವಿಲ್ಲ. ಅದಕ್ಕೆ ನಾವು ಸಿದ್ಧವಾಗಬೇಕು, ಜಿಲ್ಲೆಯ ಶೇ.96 ಜನರಿಗೆ ಲಸಿಕೆ ನೀಡಿರುವ ಕಾರಣ ಕೋವಿಡ್ ಅಥವಾ ಓಮಿಕ್ರಾನ್ ಸೋಂಕು ಕಂಡುಬಂದರೂ ಅವರಲ್ಲಿ ಆಸ್ಪತ್ರೆಗೆ ದಾಖಲಾಗುವ ಗಂಭೀರತೆ ಕಡಿಮೆ ಪ್ರಮಾಣದಲ್ಲಿರುತ್ತದೆ. ಆದುದರಿಂದ ವೈಯಕ್ತಿಕವಾಗಿ ವ್ಯಾಕ್ಸಿನ್ ನೀಡಲು ಹೆಚ್ಚಿನ ಗಮನ ಹರಿಸಬೇಕು ಎಂದವರು ಹೇಳಿದರು.

ಲಸಿಕೆ ಪಡೆಯಲು ಹೆಚ್ಚಿನ ಪ್ರತಿರೋಧ ವ್ಯಕ್ತವಾಗುವೆಡೆ ತಾವೇ ಖುದ್ದಾಗಿ ಭೇಟಿ ನೀಡುವುದಾಗಿ ತಿಳಿಸಿದ ಜಿಲ್ಲಾಧಿಕಾರಿಯವರು, 15 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಯುದ್ದೋಪಾದಿಯಲ್ಲಿ ಲಸಿಕೆ ಕೊಡಿಸಬೇಕು. ಜನ ಪ್ರತಿನಿಧಿಗಳು ಈ ಅಭಿಯಾನಕ್ಕೆ ಕೈ ಜೋಡಿಸಬೇಕು, ಕ್ಷೇತ್ರದ ಅಭಿವೃದ್ಧಿಗೆ ಆಯಾ ಪ್ರದೇಶವಾರು ಸಂಪೂರ್ಣ ಲಸಿಕೆ ಕೊಡಿಸುವುದು ಸಂಬಂಧಿಸಿದ ಜನಪ್ರತಿನಿಧಿಗಳ ಜವಬ್ದಾರಿಯಾಗಿದೆ. ಆಯಾ ಪ್ರದೇಶಗಳ ಧಾರ್ಮಿಕ ಮುಖಂಡರನ್ನು ಈ ಕಾರ್ಯಕ್ಕೆ ಆಹ್ವಾನಿಸಬೇಕು. ತಾಲೂಕು ಮಟ್ಟದಲ್ಲಿ ಈ ಪ್ರಕ್ರಿಯೆಗೆ ವಾಹನಗಳ ಅಗತ್ಯವಿದ್ದರೆ ತಹಶಿಲ್ದಾರರ ಮೂಲಕ ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕೋವಿಡ್ ನಿರ್ವಹಣೆ, ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಹಚ್ಚುವಿಕೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ನಡೆ-ಹಳ್ಳಿಯ ಕಡೆ ಕಾರ್ಯಕ್ರಮವನ್ನು ಪುನಃ ಆರಂಬಿಸಬೇಕು, ಮಾಸ್ಕ್, ಗ್ಲೌಸ್‌ಗಳ ಅಗತ್ಯವಿದ್ದರೆ ತಹಶೀಲ್ದಾರರ ಮೂಲಕ ಬೇಡಿಕೆ ಸಲ್ಲಿಸಬೇಕು. ಎಲ್ಲಿಯೂ ಯಾವುದೇ ಕೊರತೆ ಕಂಡುಬರಬಾರದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರೀಕ್ರಿಯೇಷನ್ ಕ್ಲಬ್ಗಳನ್ನು ಬಂದ್ ಮಾಡಲಾಗಿದೆ, ಒಂದು ವೇಳೆ ಅಲ್ಲಿ ಚಟುವಟಿಕೆಗಳು ಕಂಡುಬಂದರೆ, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ಮೇಲೆ ಶಿಸ್ತುಕ್ರಮ ಕೈಗೊಳ್ಳುಲಾಗುವುದು ಎಂದರು.

ಜಿಲ್ಲೆಯ ಶಾಲೆಗಳಲ್ಲಿ 5 ಕ್ಕಿಂತ ಹೆಚ್ವು ಕೋವಿಡ್ ಪ್ರಕರಣ ದಾಖಲಾದರೆ ಆ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಬೇಕು. ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ತದನಂತರ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ನಂತರ ಶಾಲೆ ಆರಂಭಿಸಬೇಕು. ಆದರೆ ಜಿಲ್ಲೆಯಾದ್ಯಂತ ಶಾಲೆಗೆ ರಜೆ ಘೋಷಿಸಿರುವುದಿಲ್ಲ ಎಂದ ಜಿಲ್ಲಾಧಿಕಾರಿ ಕೌಟುಂಬಿಕ ಕಾರ್ಯಕ್ರಮಗಳು, ಮದುವೆ, ಹರಕೆ ಇತ್ಯಾದಿ ಪೂರ್ವ ನಿರ್ಧರಿತ ಕಾರ್ಯಕ್ರಮಗಳನ್ನ ಮಾರ್ಗಸೂಚಿಗಳಂತೆ ನಿರ್ವಹಿಸಬೇಕು. ಗ್ರಾಮ ಮಟ್ಟದಲ್ಲಿ ಬೃಹತ್ ಜಾತ್ರೆ, ಉರುಸ್‌ಗಳಿಗೆ ಅನುಮತಿಯಿಲ್ಲ. ಆಯಾ ದೇವಸ್ಥಾನಗಳ ಸಮಿತಿಯವರು ಮಾತ್ರ ಸೇರಿ ಜಾತ್ರೆ ಅಥವಾ ಉರೂಸ್ ಮಾಡಬಹುದು, ಅದನ್ನು ಉಲ್ಲಂಘಿಸಿದ್ದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮಾತನಾಡಿ, ಜಿಲ್ಲೆಯ ಬಂಟ್ವಾಳ 16 ಸಾವಿರ, ಬೆಳ್ತಂಗಡಿ 19 ಸಾವಿರ, ಮಂಗಳೂರು 21 ಸಾವಿರ, ಪುತ್ತೂರು 26 ಸಾವಿರ, ಸುಳ್ಯ 10 ಸಾವಿರ ಸೇರಿದಂತೆ ಜಿಲ್ಲೆಯಲ್ಲಿ ಮೊದಲ ಡೋಸ್ ಪಡೆಯಲು ಇನ್ನೂ 95 ಸಾವಿರ ಜನರು ಬಾಕಿ ಉಳಿದಿದ್ದಾರೆ. ಅವರಿಗೆ ಲಸಿಕೆ ನೀಡಲು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಉಪಕೇಂದ್ರಗಳು ಗುರಿ ನಿಗದಿಪಡಿಸಲಾಗಿದೆ ಎಂದರು.

ಜ.31ರೊಳಗೆ ನೂರರಷ್ಟು ಲಸಿಕೆ ನೀಡುವ ಕಾರ್ಯ ಪೂರ್ಣಗೊಳ್ಳಬೇಕು, ಅದಕ್ಕಾಗಿ ಅಧಿಕಾರಿ, ಸಿಬ್ಬಂದಿಗಳ ಕಾರ್ಯವನ್ನು ಪರಿಶೀಲಿಸಲಾಗುವುದು, 1.80 ಲಕ್ಷ ಜನರಿಗೆ ಎರಡನೇ ಡೋಸ್ ಬಾಕಿ ಉಳಿದಿದ್ದು, ಯಾರೂ ಎನ್ನುವುದು ತಿಳಿದಿದೆ, ಅವರ ಹೆಸರು, ಮೊಬೈಲ್ ಹಾಗೂ ವಿಳಾಸದ ಮಾಹಿತಿ ಲಭ್ಯವಿದೆ. ಅವರನ್ನು ಕೂಡಲೇ ಪತ್ತೆ ಮಾಡಿ ಲಸಿಕೆ ಕೊಡಿಸಬೇಕು. 6 ದಿನದೊಳಗೆ ಈ ಕಾರ್ಯ ಪೂರ್ಣಗೊಳ್ಳಬೇಕು. 16-18 ವರ್ಷದ ಶೇ.75 ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಬಾಕಿ ಉಳಿದ 28 ಸಾವಿರ ವಿದ್ಯಾರ್ಥಿಗಳಿಗೆ ಕಾಲೇಜು, ಶಾಲೆಗಳಿಗೆ ಹೋಗಿ ಅಲ್ಲಿಯೇ ಲಸಿಕೆ ನೀಡುವಂತೆ ಅವರು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು. ಜಿಲ್ಲೆಯ ಸಹಾಯಕ ಆಯುಕ್ತರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಚುವಲ್ ಮಾಧ್ಯಮದ ಮೂಲಕ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X