Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯಾರ್ಥಿಗಳ ಹಿಜಾಬ್ ಧಾರಣೆ ಅಶಿಸ್ತು...

ವಿದ್ಯಾರ್ಥಿಗಳ ಹಿಜಾಬ್ ಧಾರಣೆ ಅಶಿಸ್ತು ಎಂಬ ಶಿಕ್ಷಣ ಸಚಿವರ ಹೇಳಿಕೆ ಖಂಡನಾರ್ಹ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ20 Jan 2022 10:54 PM IST
share

ಉಡುಪಿ: ‌'ಹಿಜಾಬ್ ಧರಿಸುವುದು ಅಶಿಸ್ತು, ಶಾಲೆ ಧರ್ಮವನ್ನು ಆಚರಿಸುವ ಸ್ಥಳವಲ್ಲ' ಎಂಬ ಶಿಕ್ಷಣ ಸಚಿವ ನಾಗೇಶ್ ಅವರ ಹೇಳಿಕೆ ಖಂಡನಾರ್ಹ ಎಂದು ಮುಸ್ಲಿಮ್ ಒಕ್ಕೂಟ ಹೇಳಿದೆ.

ಸಚಿವರ ಈ ಹೇಳಿಕೆ ಅಲ್ಪಸಂಖ್ಯಾತರ ಹಕ್ಕುಗಳನ್ನು ನಿರಾಕರಿಸುತ್ತದೆ. ಭಾರತ ವಿವಿಧ ಧರ್ಮ, ಭಾಷೆ, ಸಂಸೃತಿ, ಆಚರಣೆಗಳ ವೈವಿಧ್ಯಮಯ ದೇಶ. ಈ ವೈವಿಧ್ಯತೆಗಳ ಸಹಕರಣ ಮತ್ತು ದೇಶದ ಪ್ರಜೆಗಳಾದ ಸಹಜೀವಿಗಳ ಪರಸ್ಪರ ಧರ್ಮ, ಆಚರಣೆ, ನಂಬಿಕೆ, ಸಂಸೃತಿ, ಭಾಷೆಗಳೊಂದಿಗೆ ಸಹಿಷ್ಣುತೆಯಿಂದ ಮುನ್ನಡೆಯುವಿಕೆ ಈ ದೇಶದ ಶಕ್ತಿ. ಇಲ್ಲದಿದ್ದಲ್ಲಿ ಸಚಿವರು ಯಾವ ವಿದ್ಯಾರ್ಥಿಗಳ ಹಿಜಾಬ್ ಧರಿಸುವಿಕೆ ಅಶಿಸ್ತು ಎನ್ನುತ್ತಿದ್ದಾರೊ ಅದೇ ವಿಧ್ಯಾರ್ಥಿಗಳಿಗೆ ಅವರದೇ ಪಠ್ಯಗಳಲ್ಲಿ "ಭಾರತ ವಿವಿಧತೆಯಲ್ಲಿ ಏಕತೆಯ ದೇಶ" ಕಲಿಸುತ್ತಿರುವುದರ ಅರ್ಥವೇನು ? ದೇಶದ ಪ್ರತಿಯೊಂದು ಹಳ್ಳಿ ಪಟ್ಟಣಗಳಲ್ಲಿ ದೇಶದ ಪ್ರಜೆಗಳು ಧರ್ಮ, ನಂಬಿಕೆ, ಸಂಸ್ಕೃತಿ, ಭಾಷೆ, ಆಚರಣೆ ಇತ್ಯಾದಿಗಳನ್ನು ವೈವಿಧ್ಯಮಯವಾಗಿ ರೂಢಿಸಿಕೊಂಡು ಬರುತ್ತಿರುವಾಗ ಶಾಲೆಗಳಲ್ಲಿ ವಿದ್ಯಾರ್ಥಿಗಳು "ಸಮವಸ್ತ್ರದ ಪಾಲನೆಯೊಂದಿಗೆ" ತಮ್ಮ ಧಾರ್ಮಿಕ ಬೇಡಿಕೆಯನ್ನು ಪೂರೈಸಿದರೆ ಸಮಸ್ಯೆಯಾಗುವುದು ಹೇಗೆ ? ಎಂದು ಮುಸ್ಲಿಮ್ ಒಕ್ಕೂಟ ಪ್ರಶ್ನಿಸಿದೆ.

ಹಿಜಾಬ್ ರಾಜಕೀಯಗೊಳಿಸಲಾಗುತ್ತಿದೆ, ವಿದ್ಯಾರ್ಥಿಗಳು ಈಗ ಏಕೆ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಹೇಳುತ್ತಿದ್ದಾರೆ ಎಂದು ಕೂಡಾ ಸಚಿವರು ಪ್ರಶ್ನಿಸಿದ್ದಾರೆ. ವಾಸ್ತವದಲ್ಲಿ ಸಚಿವರು ತಾವು ಪ್ರತಿನಿಧಿಸುತ್ತಿರುವ ರಾಜಕೀಯ ಕನ್ನಡಿಯಿಂದ ಸಮಸ್ಯೆಯನ್ನು ನೋಡುತ್ತಿದ್ದಾರೆ. ವಿದ್ಯಾರ್ಥಿಗಳು ಸ್ಕಾರ್ಫ್ ಹಾಕುದನ್ನು ತಡೆಯುದರಿಂದ ಸಿಗುವ ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರದಿಂದ ಈಚೆಗೆ ಬಂದು ಓರ್ವ ಸರಕಾರದ ಪ್ರತಿನಿಧಿಯಾಗಿ ನಿರ್ಣಾಯ ಕೈಗೊಳ್ಳಬೇಕಾಗಿದೆ. ಸರಕಾರ ಎಂಬುದು ಎಲ್ಲರ ಸರಕಾರ ಆ ಎಲ್ಲರಲ್ಲಿ ಸ್ಕಾರ್ಫ್ ಧರಿಸುವ ತಮ್ಮ ಹಕ್ಕಿನ ಬೇಡಿಕೆ ಇಡುತ್ತಿರುವ ವಿದ್ಯಾರ್ಥಿಗಳು ಸೇರಿದ್ದಾರೆ. ಅವರ ಹಕ್ಕಿನ ರಕ್ಷಣೆಯೂ ಸರಕಾರದ ಹೊಣೆಗಾರಿಕೆ. ಯಾರೋ ರಾಜಕೀಯ ಮಾಡುತ್ತಿದ್ದಾರೆ ಎಂಬ ಗುಮಾನಿಯನ್ನು ಇಟ್ಟುಕೊಂಡು ಜನರ ಹಕ್ಕುಗಳನ್ನು ಕಸಿಯುವುದು ಸರಿಯೇ ? ಸಂವಿಧಾನ ನೀಡಿದ ಹಕ್ಕುಗಳನ್ನು ರಕ್ಷಿಸುವುದು ಸರಕಾರದ ಜವಾಬ್ದಾರಿಯೇ ಹೊರತು ಸಂವಿಧಾನಾತ್ಮಕವಾಗಿ ದೊರೆತ ಸ್ಥಾನದಲ್ಲಿ ಇದ್ದುಕೊಂಡು ಸಾಂವಿಧಾನಿಕ ಹಕ್ಕುಗಳ ಬಗ್ಗೆ ಈಗೇಕೆ ಕೇಳುತ್ತೀರಿ ಎಂದು ಪ್ರಶ್ನಿಸುದಲ್ಲ. ಯಾರೇ ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗಲೇ ತಮ್ಮ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಪ್ರಶ್ನಿಸುವುದು ಎಂದು ಒಕ್ಕೂಟವು ಹೇಳಿದೆ. ಶಾಲೆಗಳು ಧರ್ಮ ಅಚರಣೆ ಸ್ಥಳವಲ್ಲ ಎಂದು ಅವರು ಹೇಳುದಾದರೆ ಅವರ ದೃಷ್ಟಿಯಲ್ಲಿ ಶಾಲೆಗಳು  ಧರ್ಮ ನಿರಾಕರಣೆಯ ಸ್ಥಳಗಳೇ ? ಅದನ್ನು ಅವರು ಸ್ಪಷ್ಟಪಡಿಸಲಿ. ಧರ್ಮವನ್ನು ಅಥವಾ ಯಾವುದೇ ಭಿನ್ನ ವೈಚಾರಿಕತೆಯನ್ನು ಅವರಿಗೆ ಒಪ್ಪಿಗೆ ಆದಾಗ ಪಾಲಿಸಲು ಆರಂಭಿಸುವುದು ಯಾ ಬಿಡುವುದು ಅವರವರ ಆಯ್ಕೆ. ಆಗೇಕೆ ಮಾಡಿಲ್ಲ ಈಗೇಕೆ ಮಾಡುತ್ತೀರಿ ಎಂದು ಯಾರದೇ ವೈಯಕ್ತಿಕ ಜೀವನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ನಮ್ಮ ಸಂವಿಧಾನ ನೀಡಿಲ್ಲ. ಸಾರ್ವಭೌಮ ಭಾರತ ದೇಶ ಎಂದರೆ ಈ ದೇಶದ ಸಾರ್ವಭೌಮ ಪ್ರಜೆಗಳು ಎಂದು ಘೋಷಿಸಿ ಕೊಂಡ ದೇಶವಿದು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಇಬ್ರಾಹಿಂ ಸಾಹೇಬ್ ಕೋಟ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X