Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದ;...

ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದ; ಸಿದ್ದರಾಮಯ್ಯರಿಗಿರುವಷ್ಟು ಗೌರವ ಸುನೀಲ್‌ ಗಿಲ್ಲ: ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ21 Jan 2022 8:45 PM IST
share
ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದ; ಸಿದ್ದರಾಮಯ್ಯರಿಗಿರುವಷ್ಟು ಗೌರವ ಸುನೀಲ್‌ ಗಿಲ್ಲ: ಹರೀಶ್ ಕುಮಾರ್

ಮಂಗಳೂರು, ಜ.21: ಸಮಾಜ ಸುಧಾರಕ, ವಿಶ್ವಮಾನವ ನಾರಾಯಣ ಗುರುಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇರುವಷ್ಟು ಗೌರವ ಸಚಿವ ಸುನೀಲ್ ಕುಮಾರ್‌ಗೆ ಇಲ್ಲ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗದವರಿಗೆ ದೇವಾಲಯ ಸ್ಥಾಪಿಸಿ, ಪೂಜಿಸಲು ಅವಕಾಶ ಮಾಡಿ ಕೊಟ್ಟ ನಾರಾಯಣ ಗುರುಗಳ ಜನ್ಮ ಜಯಂತಿಯನ್ನು ರಾಜ್ಯದಲ್ಲಿ ಸರಕಾರಿ ಕಾರ್ಯಕ್ರಮವಾಗಿ ರೂಪಿಸಿದವರು ಸಿದ್ದರಾಮಯ್ಯ ಎಂಬುದನ್ನು ಸುನೀಲ್ ಕುಮಾರ್ ಮರೆತಂತಿದೆ. ಕೇರಳ ರಾಜ್ಯದಲ್ಲಿ ಹಿಂದುಳಿದ ಮಹಿಳೆಯರು ಎದೆ ಮೇಲೆ ಬಟ್ಟೆ ಧರಿಸಲು ಅವಕಾಶವಿಲ್ಲದಿದ್ದಾಗ ಈ ಕಂದಾಚಾರದ ವಿರುದ್ಧ ಹೋರಾಡಿದವರು ನಾರಾಯಣ ಗುರುಗಳು. ಇದರ ವಿರುದ್ಧ ನಿಯಮ ರೂಪಿಸಿ ಜಾರಿಗೊಳಿಸಿರುವುದು ಟಿಪ್ಪುಸುಲ್ತಾನ್ ಎಂಬ ಸತ್ಯ ಸುನೀಲ್ ಕುಮಾರ್ ಅರಿಯಬೇಕಿದೆ. ಗುರುಗಳಿಗಾದ ಅವಮಾನದ ವಿರುದ್ಧ ಧ್ವನಿ ಎತ್ತುವುದು ಬಿಟ್ಟು ಗುರುಗಳಿಗೆ ಮತ್ತೆ ಅವಮಾನದ ಮಾತನ್ನಾಡುತ್ತಿರುವುದು ಸಚಿವರಿಗೆ ಶೋಭೆ ತರುವುದಿಲ್ಲ. ಇಲ್ಲಿ ಸಿದ್ದರಾಮಯ್ಯ, ಟಿಪ್ಪುಸುಲ್ತಾನ್ ಹೆಸರು ಯಾಕೆ ಬಳಕೆ ಮಾಡುತ್ತೀರಿ ? ನೀವು ಒಬ್ಬ ನಾರಾಯಣ ಗುರುಗಳ ಅನುಯಾಯಿ ಹೌದಾದರೆ ಕೋಟಿ ಚೆನ್ನಯರ ಕೆಚ್ಚು ನಿಮ್ಮಲ್ಲಿದ್ದರೆ ಧೈರ್ಯದಿಂದ ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ಗುರುಗಳ ಅನುಯಾಯಿಗಳ ಜತೆ ಸೇರಿಕೊಳ್ಳಿ. ಮನುವಾದಿ ಧೋರಣೆಯಿಂದ, ರಾಜಕೀಯದ ಪರಿಧಿಯಿಂದ ಹೊರಬನ್ನಿ. ಸಮಸ್ತ ಗುರುಗಳ ಅನುಯಾಯಿಗಳ ನೋವಿನಲ್ಲಿ ಪಾಲ್ಗೊಳ್ಳಿ ಎಂದು ಹರೀಶ್ ಕುಮಾರ್ ಸವಾಲು ಹಾಕಿದ್ದಾರೆ. ಹಿಂದುಳಿದ ವರ್ಗದವರಿಗೆ ಮೀಸಾಲಾತಿ ವಿರೋಧಿಸಿದವರು ಮಂಡಲ ಆಯೋಗ ವರದಿ ಜಾರಿ ವಿರುದ್ಧ ಕಮಂಡಲ ಹಿಡಿದು ದೇಶಾದ್ಯಂತ ಗಲಭೆ ಎಬ್ಬಿಸಿ ಹಿಂದುಳಿದವರ ವಿರೋಧ ನಿಂತವರು ಯಾವ ಪಕ್ಷದವರು ಎಂದು ತಮಗೆ ತಿಳಿದಿದೆ. ಈ ಸಂದರ್ಭ ಹಿಂದುಳಿದವರ ಪರವಾಗಿ ಧ್ವನಿ ಎತ್ತಿದವರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು ಎಂದು ನೆನಪಿಸಿಕೊಳ್ಳಿ. ಇದು ರಾಜಕೀಯ ಮಾಡುವ ವಿಚಾರ ಅಲ್ಲ. ಸಮಸ್ತ ಗುರುಗಳ ಅನುಯಾಯಿಗಳ ನೋವಿನ ವಿಚಾರ. ಗುರುಗಳಿಗೆ ಅವಮಾನಿಸಿದ ವಿಚಾರ. ಆದುದರಿಂದ ತಾವು ಯಾವುದೋ ಒತ್ತಡಕ್ಕೆ ಮಣಿದು ಗುರುಗಳನ್ನು ಮತ್ತೆ ಅವಮಾನಿಸದೆ ಸತ್ಯ ಒಪ್ಪಿಕೊಂಡು ಸಂಚನ್ನು ಖಂಡಿಸಿ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಇಲ್ಲಸಲ್ಲದ ಕಾರಣಗಳನ್ನು ಹೇಳಬೇಡಿ. ಇಲ್ಲಿ ತಾಂತ್ರಿಕ ದೋಷವು ಆಗಿಲ್ಲ. ಮೂರು ವರ್ಷಕ್ಕೊಮ್ಮೆ ಒಂದಾವರ್ತಿ ಅವಕಾಶ ಎನ್ನುವುದು ಸುಳ್ಳು. ಒಂದು ತಪ್ಪನ್ನು ಸರಿಪಡಿಸಲು ನೂರು ಸುಳ್ಳು ಸೃಷ್ಟಿಸುವುದರಿಂದ ಯಾರಿಗೂ ಒಳಿತಾಗದು ಎನ್ನುವುದನ್ನು ತಿಳಿಯಿರಿ ಎಂದು ಹರಿಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X