Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡಿಯಲು ಮಲಿನ ನೀರು, ಬಹಿರ್ದೆಸೆಗೆ ಬಯಲು...

ಕುಡಿಯಲು ಮಲಿನ ನೀರು, ಬಹಿರ್ದೆಸೆಗೆ ಬಯಲು ಶೌಚವೇ ಗತಿ; ಕೊಳ್ತಿಗೆಯ 6 ದಲಿತ ಕುಟುಂಬಗಳ ದಯನೀಯ ಬದುಕು

ವಾರ್ತಾಭಾರತಿವಾರ್ತಾಭಾರತಿ21 Jan 2022 11:46 PM IST
share
ಕುಡಿಯಲು ಮಲಿನ ನೀರು, ಬಹಿರ್ದೆಸೆಗೆ ಬಯಲು ಶೌಚವೇ ಗತಿ; ಕೊಳ್ತಿಗೆಯ 6 ದಲಿತ ಕುಟುಂಬಗಳ ದಯನೀಯ ಬದುಕು

ಪುತ್ತೂರು, ಜ.21: ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಸರಕಾರವು ಹಲವಾರು ಯೋಜನೆಗಳನ್ನು ನೀಡುತ್ತಿರುವುದಾಗಿ ಹೇಳುತ್ತಿದ್ದರೂ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಸಿದ್ಧಮೂಲೆ-ಕೆಮ್ಮಾರ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ಪರಿಶಿಷ್ಟ ಜಾತಿಯ 7 ಕುಟುಂಬಗಳು ಮೂಲಭೂತ ಸೌಕರ್ಯಗಳಲ್ಲಿ ಪ್ರಮುಖವಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಗಳ ಸೌಲಭ್ಯದಿಂದ ವಂಚಿತವಾಗಿದೆ.

ಇಲ್ಲಿನ 6 ಬಂಡ ದಲಿತ ಕುಟುಂಬಗಳು ರಸ್ತೆ ಬದಿಯಲ್ಲಿರುವ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಮಲಿನಗೊಂಡಿರುವ ಕೆರೆಯ ನೀರನ್ನೇ ಹಲವು ವರ್ಷಗಳಿಂದ ಬಳಕೆ ಮಾಡುತ್ತಿದ್ದು, ನಮಗೆ ಕುಡಿಯುವ ನೀರು ಕೊಡಿ ಎಂಬ ಅಳಲು ಅವರದ್ದಾಗಿದೆ.

ಕೊಳ್ತಿಗೆ ಗ್ರಾಮದ ಸಿದ್ಧಮೂಲೆ ನಿವಾಸಿಗಳಾದ ತನಿಯ ಅಜಿಲ, ಬಾಬು ಅಜಿಲ ಮತ್ತು ಲವಕುಮಾರ್ ಕುಟುಂಬಗಳು ಹಾಗೂ ಕೆಮ್ಮಾರದಲ್ಲಿರುವ ಗುಬ್ಬಿ, ಅಣ್ಣು ಮತ್ತು ಚಂದ್ರ ಅವರ ಕುಟುಂಬಗಳು ನೀರಿನ ಸಮಸ್ಯೆ ಎದುರಿಸುತ್ತಿದೆ. ನೀರಿನ ಸಮಸ್ಯೆಯಿಂದಾಗಿ ಸಿದ್ಧಮೂಲೆಯ ಐತ್ತಪ್ಪರ ಕುಟುಂಬ ಈಗಾಗಲೇ ಅಲ್ಲಿಂದ ವಲಸೆ ಹೋಗಿ ಬೇರೆ ಕಡೆ ವಾಸ್ತವ್ಯವಿದ್ದಾರೆ. ಕಳೆದ ಐದಾರು ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪಂಚಾಯತ್‌ಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ, ಕಳೆದೆರಡು ವರ್ಷಗಳಿಂದ ಪಂಚಾಯತ್ ಗ್ರಾಮ ಸಭೆಗಳಲ್ಲಿ ನೀರಿನ ಸಮಸ್ಯೆ ವಿಚಾರವನ್ನು ಪ್ರಸ್ತಾಪಿಸಿದ್ದರೂ ಪ್ರಯೋಜನವಾಗಿಲ್ಲ. ನಮ್ಮ ಸಮಸ್ಯೆಗೆ ಸ್ಪಂದನೆ ಸಿಗುತ್ತಿಲ್ಲ ಎಂಬುವುದು ಇಲ್ಲಿನ ಕುಟುಂಬಗಳ ಆರೋಪವಾಗಿದೆ.

ಪರಿಶಿಷ್ಟ ಜಾತಿಯವರಿಗೆ ಆದ್ಯತೆ ನೆಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದ್ದರೂ ನಮಗೆ ನಳ್ಳಿನೀರಿನ ಸಂಪರ್ಕ ಈ ತನಕ ಆಗಿಲ್ಲ. ನಮ್ಮ ಸಮಸ್ಯೆಗೆ ಗ್ರಾಪಂ ಸ್ಪಂದನೆ ನೀಡುತ್ತಿಲ್ಲ. ಇದರಿಂದಾಗಿ ನಾವು ಸಿದ್ಧಮೂಲೆಯ ರಸ್ತೆ ಬದಿಯಲ್ಲಿರುವ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಕೆರೆಯ ಕೊಳಕು ನೀರನ್ನೇ ಕುಡಿಯಲು, ಬಟ್ಟೆ ಹೊಗೆಯಲು, ಸ್ನಾನಮಾಡಲು, ಶೌಚಕ್ಕೆ ಬಳಸಬೇಕಾದ ಅನಿವಾರ್ಯತೆ ಇದೆ. ಹಲವು ವರ್ಷಗಳಿಂದ ನಾವು ಈ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ಇಲ್ಲಿನ ನಿವಾಸಿಗಳು ಹೇಳುತ್ತಿದ್ದಾರೆ.

ನಮ್ಮ ಕೋರಿಕೆಯಂತೆ ನಾವು ಬಳಸುವ ನೀರಿನ ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ಅದರ ಮಾಲಕರು ಮಾಡಿ ಕೊಡುತ್ತಿದ್ದಾರೆ. ಕೆರೆಯ ಬದಿಗೆ ತಡೆಗೋಡೆ, ಬೇಲಿ ನಿರ್ಮಿಸುವುದದನ್ನು ಕೈಬಿಟ್ಟು ನಮಗೆ ನೀರು ತೆಗೆದುಕೊಳ್ಳಲು ಅವಕಾಶ ಮಾಡಿಕೊಡುವ ಮೂಲಕ ಬಹಳಷ್ಟು ಉಪಕಾರ ಮಾಡಿಕೊಟ್ಟಿದ್ದಾರೆ. ಆದರೆ ರಸ್ತೆ ಬದಿಯಲ್ಲಿರುವ ಆ ಕೆರೆಯಲ್ಲಿ ಸಾರ್ವಜನಿಕರು ಸ್ನಾನ ಮಾಡುವುದು, ವಾಹನ ತೊಳೆಯುವುದು, ಕೊಳಕು ವಸ್ತುಗಳನ್ನು ತೊಳೆಯುವುದು, ತ್ಯಾಜ್ಯ ಎಸೆಯುವುದು ಮೊದಲಾದವುಗಳನ್ನು ಮಾಡುತ್ತಿರುವುದರಿಂದ ಕೆರೆಯ ನೀರು ಮಲೀನವಾಗುತ್ತಿದೆ. ಅದನ್ನೇ ನಾವು ಬಳಕೆ ಮಾಡಬೇಕಾಗಿ ಬರುತ್ತಿದೆ. ಇದರಿಂದಾಗಿ ಎಂದು ರೋಗ ಬರುವುದೋ ಎಂದು ಹೇಳಲಾಗದು ಎಂದು ಅಲ್ಲಿನ ಕುಟುಂಬಗಳು ಅಳಲು ವ್ಯಕ್ತಪಡಿಸುತ್ತಿದೆ.

''ಕೊಳ್ತಿಗೆ ಗ್ರಾಮದ ಸಿದ್ಧಮೂಲೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿಯ 6 ಕುಟುಂಬಗಳು ರಸ್ತೆ ಬದಿಯಲ್ಲಿರುವ ಕೆರೆಯ ನೀರನ್ನೇ ಬಳಕೆ ಮಾಡುತ್ತಿದ್ದು, ಕೆರೆಯಲ್ಲಿ ಬಟ್ಟೆ ಒಗೆಯುವುದು, ಸ್ನಾನ ಮಾಡುವುದು, ವಾಹನ ತೊಳೆಯುವುದು ಮಾತ್ರವಲ್ಲದೆ ಘನತ್ಯಾಜ್ಯವನ್ನು ಇಲ್ಲೇ ಹಾಕಲಾಗುತ್ತಿದೆ. ಅವರು ಈಗಲೂ ಬಯಲು ಶೌಚವನ್ನು ಮಾಡುತ್ತಿದ್ದಾರೆ. ಇಲ್ಲಿನ ಪಂಚಾಯತ್‌ನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ತಕ್ಷಣ ಅವರಿಗೆ ವ್ಯವಸ್ಥೆ ಮಾಡದಿದ್ದಲ್ಲಿ ದಲಿತ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು''.
-ಸೇಸಪ್ಪ ಬೆದ್ರಕಾಡು,
ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ

''ನಾನು ಮತ್ತು ಪತಿ ಇಬ್ಬರೂ ಅಂಗವಿಕಲರಾಗಿದ್ದು, ನಮ್ಮ ಮಕ್ಕಳು ಸಿದ್ಧಮೂಲೆ ರಸ್ತೆ ಬದಿಯಲ್ಲಿರುವ ಕೆರೆಯ ನೀರನ್ನು ತರುತ್ತಿದ್ದು, ಅದನ್ನೇ ನಾವು ಕುಡಿಯಲು ಬಳಕೆ ಮಾಡುತ್ತಿದ್ದೇವೆ. ಸ್ನಾನ ಶೌಚಕ್ಕೂ ಅದೇ ನೀರನ್ನು ಬಳಕೆ ಮಾಡುತ್ತಿದ್ದೇವೆ. 6 ಬಾರಿ ನಾನೇ ನಳ್ಳಿ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಗ್ರಾಪಂಗೆ ಮನವಿ ಮಾಡಿದ್ದೇನೆ. ರಸ್ತೆ ಬದಿಯಲ್ಲಾದರೂ ನಳ್ಳಿ ನೀರಿನ ಸಂಪರ್ಕ ಮಾಡಿಕೊಡಿ ಇಲ್ಲವೇ ನಮ್ಮ ಜಾಗದಲ್ಲಾದರೂ ಕೊಳವೆ ಬಾವಿ ನಿರ್ಮಿಸಿ ಕೊಡಿ ಎಂದು ವಿನಂತಿಸಿಕೊಂಡಿದ್ದೇನೆ. ಸ್ಥಳೀಯರಾದ ಬಾಬು ಎಂಬವರ ಪತ್ನಿ ಜಯಂತಿ ಎಂಬವರು ಕೂಡ ಈ ಕುರಿತು ಮನವಿ ಮಾಡಿಕೊಂಡಿದ್ದಾರೆ. ನಾವಿಬ್ಬರು ಗ್ರಾಮ ಸಭೆಯಲ್ಲೂ ಈ ಕುರಿತು ಬೇಡಿಕೆ ಇಟ್ಟಿದ್ದೇವೆ. ಆದರೆ ಗ್ರಾಪಂನವರು ‘ನಿಮ್ಮ ಪ್ರದೇಶಕ್ಕೆ ನೀರು ಏರುವುದು ಕಷ್ಟ, ಕೊಳೆವೆ ಬಾವಿ ನಿರ್ಮಿಸಿಕೊಡಲು ಆಗುವುದಿಲ್ಲ’ ಎಂದು ಹೇಳುತ್ತಾ ಕೈಚೆಲ್ಲಿಕೊಳ್ಳುತ್ತಿದ್ದಾರೆ''.
-ಬಬಿತಾ ಆರ್. ಸಿದ್ಧಮೂಲೆ
ಸ್ಥಳೀಯ ನಿವಾಸಿ

''ಅಲ್ಲಿ 6 ಮನೆಳು ಎತ್ತರ ಪ್ರದೇಶದಲ್ಲಿವೆ. ಇವುಗಳಲ್ಲಿ 3 ಮನೆಗಳಿಗೆ ಮಾತ್ರ ಡೋರ್ ನಂಬ್ರ ಆಗಿದ್ದು, ಈಗಿರುವ ವಾಟರ್ ಸಪ್ಲೈ ಯಿಂದ 1 ಕಿ.ಮೀ. ದೂರದಲ್ಲಿ ಈ ಮನೆಗಳು ಇರುವುದರಿಂದ ಅಲ್ಲಿಗೆ ಪ್ರತ್ಯೇಕ ವ್ಯವಸ್ಥೆ ಆಗಬೇಕಾಗಿದೆ. ಅದಕ್ಕಾಗಿ ಜಲಜೀವನ್ ಮಿಷನ್ ಯೋಜನೆಯಡಿ 12 ಲಕ್ಷ ರೂ. ಇರಿಸಲಾಗಿದೆ. ಅದರ ಟೆಂಡರ್ ಪ್ರಕ್ರಿಯೆ ಆಗಬೇಕಾಗಿದೆ. ಅಲ್ಲದೆ ಅಲ್ಲಿಗೆ ತೆರೆದ ಬಾವಿ ನಿರ್ಮಾಣಕ್ಕೆ ನರೇಗಾ ಯೋಜನೆಯಲ್ಲಿ ಅವಕಾಶ ಇರುವುದಾಗಿ ತಿಳಿಸಿದ್ದರೂ ಅವರು ಕಾಮಗಾರಿ ನಡೆಸಲು ಮುಂದೆ ಬರುತ್ತಿಲ್ಲ. ಅಲ್ಲದೆ ಶೌಚಾಲಯ ನಿರ್ಮಾಣಕ್ಕೆ 15 ಸಾವಿರ ರೂ. ನೀಡಲು ನರೇಗಾದಲ್ಲಿ ಅವಕಾಶ ಇದೆ. ಆವರಿಗೆ ನರೇಗಾ ಜಾಬ್ ಕಾರ್ಡ್ ಮಾಡಿಸಿ ಕೊಡಲಾಗಿದೆ. ಆದನ್ನು ಸದುಪಯೋಗ ಪಡಿಸಿಕೊಳ್ಳಲು ಸಂಘಟನೆಯ ಮುಖಂಡರು ಅವರಿಗೆ ಮನವರಿಕೆ ಮಾಡಿದಲ್ಲಿ ಅಲ್ಲಿನ ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ. ಸಂಘಟನೆಗಳು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಪಂಚಾಯತ್ ಅವರ ಅಭಿವೃದ್ಧಿಗಾಗಿ ಸದಾ ಸಿದ್ಧವಿದೆ''.
-ಪಂಚಾಯತ್ ಅಭಿವೃದ್ಧಿ ಅಧಿಕಾರಿ,
ಕೊಳ್ತಿಗೆ ಗ್ರಾಮ ಪಂಚಾಯತ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X