Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಲಿತರಿಗೆ ವೈದಿಕ ದೀಕ್ಷೆ ಮತಾಂತರದ ಭಾಗ:...

ದಲಿತರಿಗೆ ವೈದಿಕ ದೀಕ್ಷೆ ಮತಾಂತರದ ಭಾಗ: ಡೀಕಯ್ಯ

‘ಹೆಚ್ಚುತ್ತಿರುವ ಅಸಮಾನತೆ’ ಸಂವಾದ ಸರಣಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Jan 2022 9:24 AM IST
share
ದಲಿತರಿಗೆ ವೈದಿಕ ದೀಕ್ಷೆ ಮತಾಂತರದ ಭಾಗ: ಡೀಕಯ್ಯ

ಮಂಗಳೂರು, ಜ.20: ಸಿಟಿಝನ್ಸ್ ಫೋರಂ ಫಾರ್ ಡೆವಲಪ್‌ಮೆಂಟ್, ಬಹುತ್ವ ಕರ್ನಾಟಕದ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಹೆಚ್ಚುತ್ತಿರುವ ಅಸಮಾನತೆ’ ಕುರಿತಾದ ಸಂವಾದ ಸರಣಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ವೆಲೆನ್ಸಿಯಾದ ರೋಶನಿ ನಿಲಯದ ಬಯಲು ರಂಗ ಮಂದಿರದಲ್ಲಿ ನಡೆದ ಪ್ರಥಮ ಸರಣಿಯಲ್ಲಿ ದಿ.ಡಾ.ಕೃಷ್ಣ ಮೋಹನ ಪ್ರಭುರನ್ನು ಉದ್ಯಮಿ, ಬರಹಗಾರ ಸುಮಿತ್ ರಾವ್ ಸಂಸ್ಮರಣೆಗೈದರು.

ದಲಿತ ಚಳವಳಿಗಾರ, ಚಿಂತಕ ಪಿ.ಡೀಕಯ್ಯ ಮಾತನಾಡಿ, ದೇಶದಲ್ಲಿ ಸಂವಿಧಾನ ಅಸ್ತಿತ್ವಕ್ಕೆ ಬಂದು 72 ವರ್ಷಗಳ ಹೊಸ್ತಿಲಲ್ಲಿರುವ ಇಂದೂ ದೇಶದಲ್ಲಿ ದಲಿತ ಸಮುದಾಯದ ಮೇಲಿನ ದೌರ್ಜನ್ಯ, ಅಸಮಾನತೆಯ ಕುರಿತಂತೆ ಅನಿಸಿಕೆ ವ್ಯಕ್ತಪಡಿಸಿದರು. ಕೊರೋನದಂತಹ ಸಾಂಕ್ರಾಮಿಕ ರೋಗದ ಪರಿಸ್ಥಿತಿಯಲ್ಲೂ ದಲಿತರ ಮೇಲಿನ ಅಸಮಾನತೆ ನಿಂತಿಲ್ಲ ಎಂದ ಅವರು, ತಮ್ಮ ಸುತ್ತಮುತ್ತಲಲ್ಲಿ ಇಂದಿಗೂ ಅನುಭವಿಸುತ್ತಿರುವ ಕೆಲವೊಂದು ಅಸ್ಪಶ್ಯತೆ, ಅಸಮಾತೆಯ ಘಟನೆಗಳನ್ನು ವಿವರಿಸಿದರು.

ಹಲವು ವರ್ಷಗಳಿಂದ ದಲಿತ ಕೇರಿಗಳಲ್ಲಿ ಪೇಜಾವರ ಸ್ವಾಮೀಜಿಯಿಂದ ವೈದಿಕ ದೀಕ್ಷೆ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಇದು ವೈದಿಕ ಸಮುದಾಯದಿಂದ ನಡೆಯುತ್ತಿರುವ ಒಂದು ರೀತಿಯ ಮತಾಂತರ ಎಂದು ಆರೋಪಿಸಿದ ಅವರು, ದಲಿತ ಸಮುದಾಯದ ಯುವ ಪೀಳಿಗೆಯನ್ನು ಮತೀಯವಾದಿಗಳನ್ನಾಗಿಸಲು ನಡೆಸುತ್ತಿರುವ ಹುನ್ನಾರ ಎಂದರು.

ತುಳು ಭಾಷೆಯ ಬಗ್ಗೆ ಪ್ರಸ್ತಾಪಿಸಿದ ಅವರು, ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಗೆ 359 ಕೋಟಿ ರೂ.ಗಳನ್ನು ಸರಕಾರದಿಂದ ನೀಡಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ತುಳು ವಿಶ್ವವಿದ್ಯಾನಿಲಯ ಸ್ಥಾಪಿಸಲು ಅನುದಾನ ತರಿಸುವ ತಾಕತ್ತು ನಮ್ಮ ಜಿಲ್ಲೆಯ ಸಂಸದ, ಶಾಸಕರಿಗೆ ಇೆಯೇ ಎಂದು ಅವರು ಪ್ರಶ್ನಿಸಿದರು.

ಮಹಿಳೆಯರ ಮೇಲಿನ ಅಸಮಾನತೆ ಬಗ್ಗೆ ವಿಷಯ ಮಂಡಿಸಿದ ಮಹಿಳಾ ಪರ ಚಿಂತಕಿ ವಾಣಿ ಪೆರಿಯೋಡಿ, ಅಪೌಷ್ಠಿಕತೆಯಲ್ಲಿ ಅಸಮಾನತೆ ಮುಂದುವರಿದಿದ್ದು, ಪುರುಷರ ಪ್ರಮಾಣ ಶೇ. 20ರಷ್ಟಾಗಿದ್ದರೆ, ಮಹಿಳೆಯರ ಅಪೌಷ್ಠಿಕತೆ ಶೇ.48ರಷ್ಟಿದೆ. ಪತ್ನಿಗೆ ಪುರುಷರಿಂದ ದೌರ್ಜನ್ಯ, ಹಿಂಸೆಯನ್ನು ಸಮರ್ಥಿಸಿಕೊಳ್ಳುವವರಲ್ಲಿ ಶೇ.72 ಮಂದಿ ಹೆಣ್ಣು ಮಕ್ಕಳಾಗಿದ್ದರೆ, ಶೇ.81 ಮಂದಿ ಗಂಡು ಮಕ್ಕಳು ಎಂಬುದು ಆತಂಕಕಾರಿ. ಇನ್ನು ರಾಜಕೀಯ ವಿಷಯದಲ್ಲಿ ಮಹಿಳೆಯರಿಗೆ ಇಂದಿಗೂ ಶೇ.10ರಷ್ಟೂ ಅವಕಾಶಗಳು ದೊರಕದಿರುವುದು ಅಸಮಾನತೆಯ ಪರಮಾವಧಿ ಎಂದು ಅವರು ವಿಶ್ಲೇಷಿಸಿದರು.

ಯುವ ಬರಹಗಾರ, ಚಿಂತಕ ಶೌಕತ್ ಅಲಿ ಮಾತನಾಡಿ, ಅಲ್ಪಸಂಖ್ಯಾತರ ಹಕ್ಕುಗಳು ಅಸಮಾನತೆಯ ಬಗ್ಗೆ ಮಾತನಾಡುವುದೂ ಇಂದು ಅಪರಾಧವಾಗಿಬಿಟ್ಟಿದೆ. ಧ್ವನಿ ಎತ್ತುವವರನ್ನು ಗುರಿಯಾಗಿಸಿ ಸಮುದಾಯವನ್ನು ಓಲೈಕೆ ಮಾಡುವರೆಂಬ ಬಿರುದನ್ನು ನೀಡಲಾಗುತ್ತದೆ ಎಂದು ಹೇಳಿದರು

ಜನಕವಿ, ಸಾಮಾಜಿಕ ಚಿಂತಕ ಜನಾರ್ದನ ಕೆಸರುಗದ್ದೆ ಸಂವಾದವನ್ನು ನಿರ್ವಹಿಸಿದರು. ನಟೇಶ್ ಉಳ್ಳಾಲ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X