Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿವಪುರದಲ್ಲಿ ಸರಕಾರಿ ಗೋಶಾಲೆ: ಪೇಜಾವರ...

ಶಿವಪುರದಲ್ಲಿ ಸರಕಾರಿ ಗೋಶಾಲೆ: ಪೇಜಾವರ ಶ್ರೀ ಸ್ಥಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ23 Jan 2022 9:47 PM IST
share
ಶಿವಪುರದಲ್ಲಿ ಸರಕಾರಿ ಗೋಶಾಲೆ: ಪೇಜಾವರ ಶ್ರೀ ಸ್ಥಳ ಪರಿಶೀಲನೆ

ಉಡುಪಿ, ಜ.23: ಜಿಲ್ಲಾವಾರು ಗೋಶಾಲೆ ನಿರ್ಮಿಸುವ ರಾಜ್ಯ ಸರಕಾರದ ಮಹತ್ವದ ನಿರ್ಣಯದಂತೆ ಉಡುಪಿ ಜಿಲ್ಲೆಯ ಹೆಬ್ರಿ ಶಿವಪುರ ಸಮೀಪ ಕೆರೆ ಬೆಟ್ಟುವಿನ ಸುಮಾರು 13 ಎಕರೆ ಭೂಮಿಯಲ್ಲಿ ಗೋಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ.

ಈ ಗೋಶಾಲೆಯ ನಿರ್ವಹಣೆ ಮತ್ತು ಮೇಲುಸ್ತುವಾರಿಯನ್ನು ಪೇಜಾವರ ಶ್ರೀವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ನೇತೃತ್ವದ ಶ್ರೀವಿಶ್ವೇಶಕೃಷ್ಣ ಗೋ ಸೇವಾ ಟ್ರಸ್ಟ್ ವಹಿಸಿಕೊಳ್ಳುವಂತೆ ಸರಕಾರ ನಿವೇದಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಪೇಜಾವರ ಸ್ವಾಮೀಜಿ ಹಾಗೂ ಟ್ರಸ್ಟ್ ವಿಶ್ವಸ್ಥರಾದ ಪದ್ಮನಾಭ ಆಚಾರ್ಯ, ಗುರುದಾಸ್ ಶೆಣೈ, ಹೆಬ್ರಿ ತಹಶೀಲ್ದಾರ್ ಪುರಂದರ, ಹೆಬ್ರಿ ತಾಲೂಕು ಪಶು ವೈದ್ಯಾಧಿಕಾರಿ ಡಾ.ಪರಶುರಾಮ ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲ ಹಂತದಲ್ಲಿ ಸರಕಾರದ ಅನುದಾನವನ್ನು ಬಳಸಿ ಇಡೀ ನಿವೇಶನಕ್ಕೆ ತಡೆ ಬೇಲಿ ಹಾಕುವುದು ಹಾಗೂ ಸ್ಥಳದಲ್ಲಿರುವ ಕೆರೆ ಪುನರುತ್ಥಾನ ಕಾರ್ಯ ಗಳನ್ನು ಪ್ರಧಾನ ಮಂತ್ರಿ ಉದ್ಯೋಗ ಖಾತ್ರಿ ಯೋಜನೆಯ ಸಹಯೋಗ ದೊಂದಿಗೆ ನಡೆಸಲಾಗುವುದು. ಮುಂದಿನ ಹಂತದಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ತಹಶೀಲ್ದಾರ್ ಹಾಗೂ ಪಶುವೈದ್ಯಾಧಿಕಾರಿಗಳು ವಿವರಿಸಿದರು.

ಈ ಗೋಶಾಲೆಯಲ್ಲಿ ಸಂರಕ್ಷಸಬಹುದಾದ ಗೋವುಗಳೆಷ್ಟು ಎನ್ನುವುದನ್ನು ಮೊದಲು ನಿರ್ಧರಿಸಬೇಕು. ಬಳಿಕ ಪಶು ಆಹಾರ ದಾಸ್ತಾನು, ಗೋಮಯ ಸಂಗ್ರಹ ಸ್ಥಳ, ನೀರಿನ ವ್ಯವಸ್ಥೆ, ಗೋಶಾಲೆಯ ತ್ಯಾಜ್ಯದ ನೀರು ಹರಿಯುವ ವ್ಯವಸ್ಥೆ, ಮೃತಪಟ್ಟ ಹಸುಗಳನ್ನು ಹೂಳುವುದು ಕಾರ್ಮಿಕರ ವಸತಿ ಇತ್ಯಾದಿ ಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಸ್ವಾಮೀಜಿ ಸೂಚಿಸಿದರು.

ಸ್ಥಳೀಯರಾದ ರಮೇಶ್ ಪೂಜಾರಿ, ಸುರೇಶ್ ಶೆಟ್ಟಿ ಸ್ಥಳದ ಮಾಹಿತಿ ನೀಡಿ ಗ್ರಾಮಸ್ಥರ ಪೂರ್ಣ ಸಹಕಾರ ದೊರೆಯುವ ಭರವಸೆ ನೀಡಿದರು. ಸುಬ್ರಹ್ಮಣ್ಯ ಭಟ್, ಸಗ್ರಿ ಅನಂತ ಭಟ್, ಕೃಷ್ಣ ಭಟ್, ಶಿವಪುರ ವಾಸುದೇವ ಭಟ್, ಮಹಾಬಲೇಶ್ವರ ಅಡಿಗ, ಪೆರಂಪಳ್ಳಿ ವಾಸುದೇವ ಭಟ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X