Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಪೊಲೀಸ್ ದೌರ್ಜನ್ಯದ...

ಉತ್ತರಪ್ರದೇಶ: ಪೊಲೀಸ್ ದೌರ್ಜನ್ಯದ ತೀವ್ರತೆಯಿಂದ ಬಾಲಕ ಮೃತ್ಯು ಆರೋಪ; ಮೂವರು ಸಿಬ್ಬಂದಿ ಅಮಾನತು

ವಾರ್ತಾಭಾರತಿವಾರ್ತಾಭಾರತಿ24 Jan 2022 6:25 PM IST
share
ಉತ್ತರಪ್ರದೇಶ: ಪೊಲೀಸ್ ದೌರ್ಜನ್ಯದ ತೀವ್ರತೆಯಿಂದ ಬಾಲಕ ಮೃತ್ಯು ಆರೋಪ; ಮೂವರು ಸಿಬ್ಬಂದಿ ಅಮಾನತು

ಲಖಿಂಪುರ: ಉತ್ತರ ಪ್ರದೇಶದ ಲಖಿಂಪುರದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ನಡೆದ ದೌರ್ಜನ್ಯದಿಂದ ಪರಿಶಿಷ್ಟ ಪಂಗಡದ 17 ರ ಹರೆಯದ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಬಳಿಕ ಘಟನೆಗೆ ಸಂಬಂದಿಸಿದಂತೆ ಔಟ್‌ಪೋಸ್ಟ್‌ ಠಾಣಾಧಿಕಾರಿ  ಸೇರಿದಂತೆ ಒಟ್ಟು ಮೂವರು ಪೊಲೀಸ್‌ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಕಳ್ಳತನ ಪ್ರಕರಣವೊಂದರಲ್ಲಿ ತಪ್ಪೊಪ್ಪಿಕೊಳ್ಳುವಂತೆ ಬಾಲಕನಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ. ಪೊಲೀಸರ ದೌರ್ಜನ್ಯದಿಂದ ರವಿವಾರ ಬಾಲಕ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜನವರಿ 17 ರಂದು, ಮೃತ ಬಾಲಕನ ಸಂಬಂಧಿಯೊಬ್ಬರು, ಅವರ ಮಗನ ಮೊಬೈಲ್‌ ಕಳ್ಳತನದ ಆರೋಪವನ್ನು ಬಾಲಕನ ಮೇಲೆ ಹೊರಿಸಿದ್ದರು. ಸಂಬಂಧಿಯ ದೂರಿನನ್ವಯ ಬಾಲಕನನ್ನು ಪೊಲೀಸ್‌ ಔಟ್‌ಪೋಸ್ಟ್‌ಗೆ ಕರೆದೊಯ್ಯಲಾಗಿತ್ತು ಎಂದು ಗ್ರಾಮ ಮುಖಂಡ ಹೇಳಿದ್ದಾರೆಂದು indianexpress ವರದಿ ಮಾಡಿದೆ.

 “ಆರೋಪಿ ಮತ್ತು ಅವನ ಸಂಬಂಧಿಯನ್ನು ಪೊಲೀಸ್ ಔಟ್‌ಪೋಸ್ಟ್‌ಗೆ ಕರೆಸಲಾಯಿತು. ಹುಡುಗ ತನ್ನ ಹೆತ್ತವರೊಂದಿಗೆ ಬಂದನು. ಅವರ ಸಂಬಂಧಿ ಮತ್ತು ಗ್ರಾಮದ ಪ್ರಧಾನ್ [ಮುಖಂಡ] ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಈ ವ್ಯಕ್ತಿಗಳ ಸಮ್ಮುಖದಲ್ಲಿ ಬಾಲಕನನ್ನು ವಿಚಾರಿಸಲಾಯಿತು. ಎರಡು ಗಂಟೆಗಳ ನಂತರ ಎರಡೂ ಕಡೆಯವರು ರಾಜಿ ಮಾಡಿಕೊಂಡರು. ರಾಜಿಯ ಲಿಖಿತ ಒಪ್ಪಂದ ಪೊಲೀಸರ ಬಳಿ ಲಭ್ಯವಿದೆ. ನಂತರ ಹುಡುಗನನ್ನು ಕುಟುಂಬಕ್ಕೆ ಒಪ್ಪಿಸಲಾಯಿತು . ಅವರು ಜನವರಿ 19 ರಂದು ಮಧ್ಯಾಹ್ನ 3 ಗಂಟೆಗೆ ಮನೆಗೆ ಮರಳಿದರು. ಬಳಿಕ ಆತನ ಸಂಬಂಧಿ ಕೆಲವರೊಂದಿಗೆ ಆರೋಪಿಯ ಮನೆಗೆ ಹೋಗಿ ಥಳಿಸಿದ್ದಾರೆ. ಅದರ ಬಳಿಕ ಬಾಲಕನ ಸ್ಥಿತಿ ಚಿಂತಾಜನಕವಾಗಿತ್ತು. ಪೊಲೀಸ್‌ ಕಸ್ಟಡಿಯಲ್ಲಿ ಬಾಲಕ ಮೃತಪಟ್ಟಿದ್ದಾನೆನ್ನುವುದು ಸುಳ್ಳು ಆರೋಪ ” ಎಂದು ಎಸ್‌ಪಿ ಸಂಜೀವ್‌ ಸುಮನ್‌ ಹೇಳಿದ್ದಾರೆ.

ಆದರೆ, ಮೃತ ಬಾಲಕನ ಸಹೋದರಿಯು ಎಸ್‌ಪಿಯ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆಯನ್ನು ನೀಡಿದ್ದು, ಪೋಲಿಸ್‌ ಕಸ್ಟಡಿಯಲ್ಲಿ ಕ್ರೂರವಾಗಿ ಥಳಿಸಿದ್ದರು. ಪೊಲೀಸರ  ದೌರ್ಜನ್ಯದಿಂದ ನನ್ನ ತಮ್ಮ ತೀವ್ರ ಅಸ್ವಸ್ಥಗೊಂಡಿದ್ದ. ಎರಡು ದಿನಗಳ ನಂತರ ಆಸ್ಪತ್ರೆಯಲ್ಲಿ ಆತ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಮೃತ ಬಾಲಕ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X