ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯ ನಿರ್ಧಾರದಿಂದ ಹಿಂದೆ ಸರಿದ ಸರಕಾರ: ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ
ಬೆಂಗಳೂರು, ಜ. 24: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಡ್ಡಾಯಗೊಳಿಸುವ ನಿರ್ಧಾರವನ್ನು ಹಿಂಪಡೆದಿದೆ.
ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಮಹೇಶ್ ಆರ್. ಈ ಸಂಬಂಧ ಆದೇಶ ಹೊರಡಿಸಿದ್ದು, ಸ್ಥಳೀಯ ಭಾಷೆಯನ್ನು ತೆಗೆದುಕೊಳ್ಳಲು ಬಯಸದ ವಿದ್ಯಾರ್ಥಿಗಳನ್ನು ಹೈಕೋರ್ಟ್ನಿಂದ ಮುಂದಿನ ಆದೇಶದವರೆಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲಾಗುವುದಿಲ್ಲ. ಈಗಾಗಲೇ ಕೋರ್ಸ್ ಗೆ ಸೇರಿರುವ ವಿದ್ಯಾರ್ಥಿಗಳಿಗೆ ಕನ್ನಡದ ಬದಲಿಗೆ ತಮ್ಮ ಐಚ್ಛಿಕ ಭಾಷೆಯನ್ನು ಆಯ್ಕೆ ಮಾಡಲು ಅವಕಾಶವಿದೆ ಎಂದು ತಿಳಿಸಲಾಗಿದೆ.
ಜ.21ರಂದು ಸುತ್ತೋಲೆ ಹೊರಡಿಸಿದ್ದು, ಎಲ್ಲ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಮತ್ತು ರಿಜಿಸ್ಟ್ರಾರ್ಗಳಿಗೆ ಕಳುಹಿಸಲಾಗಿದೆ. ಈ ನಿಟ್ಟಿನಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರಿಗೂ ಸೂಚನೆ ನೀಡಲಾಗಿದೆ. 2021ರ ಆಗಸ್ಟ್ ನಲ್ಲಿ ರಾಜ್ಯ ಸರಕಾರವು ಪದವಿ ಕೋರ್ಸ್ ಗಳನ್ನು ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿತ್ತು. ಈ ಆದೇಶವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನಕ್ಕೆ ಅನುಗುಣವಾಗಿದೆ ಎಂದು ಸರಕಾರ ಹೇಳಿತ್ತು. ಆ ಬಳಿಕ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಇತರ ಮೂರು ಸಂಸ್ಥೆಗಳು ಮತ್ತು ಐದು ವಿದ್ಯಾರ್ಥಿಗಳು ಸರಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಹಂತದಲ್ಲಿ ಭಾಷೆಯನ್ನು ಕಡ್ಡಾಯಗೊಳಿಸಲು ರಾಜ್ಯ ಸರಕಾರ ಸರಿಯಲ್ಲ ಎಂದು ಹೈಕೋರ್ಟ್ ಆಕ್ಷೇಪಿಸಿತ್ತು. ಹೀಗಾಗಿ ಸರಕಾರ ಮೇಲ್ಕಂಡ ಸುತ್ತೋಲೆ ಹೊರಡಿಸಿದೆ.