Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು...

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ವಿಧಿಸಿರುವ ನಿರ್ಬಂಧ ತೆಗೆದು ಹಾಕಬೇಕು: ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ25 Jan 2022 3:10 PM IST
share
ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ವಿಧಿಸಿರುವ ನಿರ್ಬಂಧ ತೆಗೆದು ಹಾಕಬೇಕು: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.‌

ರಾಗಿ, ಭತ್ತ  ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ.  ಸರ್ಕಾರವು ಈ ವರ್ಷ ಜನವರಿ 1 ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. 

ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ  ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿಯನ್ನು ಬೆಳೆಯುತ್ತಾರೆ.

ಕೃಷಿ ಇಲಾಖೆಯ ಅಂದಾಜಿನ ಪ್ರಕಾರ ನಮ್ಮ ರೈತರು ಈ ವರ್ಷ ಸುಮಾರು 17.5 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದಿದ್ದಾರೆ. ಕೃಷಿ ಇಲಾಖೆಯ ದಾಖಲೆಗಳ ಪ್ರಕಾರ ಈ ಬಾರಿ ಕನಿಷ್ಟ ಅಂದರೂ 14-15 ಲಕ್ಷ ಟನ್ ಇಳುವರಿಯ ನಿರೀಕ್ಷೆ ಮಾಡಲಾಗಿದೆ.

ಆದರೆ, ಅತಿವೃಷ್ಟಿಯ ಕಾರಣದಿಂದ ದೊಡ್ಡ ಮಟ್ಟದ ಬೆಳೆ ನಷ್ಟವಾಗಿತ್ತು. ಆದರೂ ರೈತರು ಬೆಂಬಲ ಬೆಲೆಯಡಿ ರಾಗಿಯನ್ನು ಮಾರಾಟ ಮಾಡಲು ಉತ್ಸಾಹ ತೋರಿಸುತ್ತಿದ್ದಾರೆ.

ಮಾತೆತ್ತಿದರೆ ರೈತರ ಆದಾಯ ದ್ವಿಗುಣ ಗೊಳಿಸಲಾಗುವುದು ಎಂದು ಮಾತನಾಡುವ ಪ್ರಧಾನಿ ಮೋದಿಯವರ ಸರ್ಕಾರ ಈ ಬಾರಿ ರಾಜ್ಯದ ರೈತರಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಮಾತ್ರ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯನ್ನು ಆಧರಿಸಿ ರಾಜ್ಯದ ಬಿಜೆಪಿ ಸರ್ಕಾರವು ರೈತರಿಂದ ರಾಗಿ ಖರೀದಿಸಲು ವಿಪರೀತ ನಿಬಂಧನೆಗಳನ್ನು ವಿಧಿಸಿದೆ.  ಅದರಲ್ಲಿ ಒಬ್ಬ ರೈತರಿಂದ ಕೇವಲ ೨೦ ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿ ಮಾಡಲಾಗುವುದೆಂದು ತಿಳಿಸಿ ಆದೇಶ ಹೊರಡಿಸಿದೆ.

ಯೂಕಲಿಪ್ಟಸ್ ಬೆಳೆಯನ್ನು ಬೆಳೆಯುತ್ತಿದ್ದ ರೈತರು ಕಳೆದ ಎರಡು ವರ್ಷಗಳಿಂದ ಈಚೆಗೆ ತಮ್ಮ ಹೊಲಗಳಲ್ಲಿ ಬೆಳೆದಿದ್ದ ಯೂಕಲಿಪ್ಟಸ್ ಬೆಳೆಯನ್ನು ತೆಗೆದು ಹಾಕಿ ರಾಗಿ ಬೆಳೆಯಲಾರಂಭಿಸಿದ್ದಾರೆ. ಹಾಗಾಗಿ ಸಹಜವಾಗಿಯೆ ರಾಗಿಯ ಉತ್ಪಾದನೆ ಹೆಚ್ಚಾಗಿದೆ. 

ರಾಗಿಗೆ ನೀಡುತ್ತಿರುವ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದು ಕ್ವಿಂಟಾಲಿಗೆ ಕೇವಲ 82 ರೂಪಾಯಿಗಳಷ್ಟು ಮಾತ್ರ ಏರಿಕೆ ಮಾಡಲಾಗಿದೆ. ಕಳೆದ ವರ್ಷ ಒಂದು ಕ್ವಿಂಟಾಲಿಗೆ 3295 ರೂ ನೀಡುತ್ತಿದ್ದರೆ ಈ ವರ್ಷ 3377 ಗಳಿಗೆ ಏರಿಕೆ ಮಾಡಲಾಗಿದೆ.  ಆದರೆ ರೈತರು 2019-20ರಲ್ಲಿ ಟ್ರಾಕ್ಟರ್‌ನಲ್ಲಿ ಒಂದು ಗಂಟೆ ಹೊಲ ಉಳಲು 750 ರೂಪಾಯಿ ನೀಡುತ್ತಿದ್ದರೆ ಈ ವರ್ಷ 1250-1300 ರೂ ನೀಡಬೇಕಾಗಿದೆ. 

ಬೆಳೆಯನ್ನು ಕಟಾವು ಮಾಡುವ ಯಂತ್ರಕ್ಕೆ ಕೂಡ ಗಂಟೆಗೆ ಸುಮಾರು 750 ರೂಪಾಯಿಗಳಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಅವಶ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ರೈತರು ಬಳಸುವ ಪ್ಲಾಸ್ಟಿಕ್ ಮುಂತಾದ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಸಹ ಹೆಚ್ಚಿಸಲಾಗಿದೆ. ಇದೆಲ್ಲದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಉತ್ಪಾದನಾ ವೆಚ್ಚ ಸಿಕ್ಕಾಪಟ್ಟೆ ಹೆಚ್ಚಾಗಿದೆ.

ಡಾ.ಸ್ವಾಮಿನಾಥನ್ ಅವರ ವರದಿಯಲ್ಲಿನ ಸೂತ್ರಗಳನ್ನು ಪೂರ್ತಿಯಾಗಿ ಅಳವಡಿಸಿದರೆ ಒಂದು ಕ್ವಿಂಟಾಲ್ ರಾಗಿಗೆ ಈಗ ನಿಗಧಿಪಡಿಸಿರುವ ಬೆಂಬಲ ಬೆಲೆಯ ಎರಡರಷ್ಟನ್ನು ರೈತರಿಗೆ ನೀಡಬೇಕಾಗುತ್ತದೆ. ದೊಡ್ಡಬಳ್ಳಾಪುರ ಮುಂತಾದ ಕಡೆ ರೈತರು, ರೈತ ಸಂಘದವರು ರಾಗಿ ಖರೀದಿಗೆ ವಿಧಿಸಿರುವ ನಿಬಂಧನೆಗಳನ್ನು ತೆಗೆದು ಹಾಕುವಂತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.  

ಕಳೆದ ವರ್ಷ ಸುಮಾರು 4.7 ಲಕ್ಷ ಟನ್ ಗಳಷ್ಟು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ಈ ಬಾರಿ ರಾಜ್ಯದಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಖರೀದಿಸಲು ಮಾತ್ರ ರಾಜ್ಯಕ್ಕೆ ಅನುಮತಿ ನೀಡಲಾಗಿದೆ. ರೈತರು 14-15 ಲಕ್ಷ ಟನ್ ರಾಗಿ ಬೆಳೆದರೆ ಅವರು ತಮ್ಮ ಸ್ವಂತ ಬಳಕೆಗೆ ಶೇ.50 ರಷ್ಟನ್ನು ಬಳಸುತ್ತಾರೆಂದರೆ ಉಳಿದದ್ದನ್ನು ಅವರು ಮಾರಲೇಬೇಕು. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ  ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ.

ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ  ತರುತ್ತಾರೊ ಅಷ್ಟನ್ನೂ ಖರೀದಿಸಬೇಕು.  ಇಂದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೇವಲ 2.10 ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು. ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೆ ಪುನರಾರಂಭಿಸಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X