Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉದ್ದಿಮೆ ಪರವಾನಿಗೆ, ನವೀಕರಣವನ್ನು...

ಉದ್ದಿಮೆ ಪರವಾನಿಗೆ, ನವೀಕರಣವನ್ನು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಕೆಗೆ ಅವಕಾಶ : ಮೇಯರ್ ಪ್ರೇಮಾನಂದ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ25 Jan 2022 7:38 PM IST
share
ಉದ್ದಿಮೆ ಪರವಾನಿಗೆ, ನವೀಕರಣವನ್ನು ಆನ್‌ಲೈನ್  ಮುಖಾಂತರ ಅರ್ಜಿ ಸಲ್ಲಿಕೆಗೆ ಅವಕಾಶ :  ಮೇಯರ್ ಪ್ರೇಮಾನಂದ ಶೆಟ್ಟಿ

ಮಂಗಳೂರು: ಮಹಾನಗರಪಾಲಿಕೆಯು ನಗರದಾದ್ಯಂತ ವ್ಯಾಪಾರ ಪರವಾನಿಗೆಯ ನಿರ್ವಹಣೆಗಾಗಿ ಸಾಫ್ಟ್‌ವೇರ್ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಿದ ನಂತರ ಸಾಫ್ಟ್‌ವೇರ್‌ ವ್ಯವಸ್ಥೆಯು ಹೊಸ ವ್ಯಾಪಾರ ಪರವಾನಿಗೆಗಾಗಿ ಅರ್ಜಿ ಸಲ್ಲಿಸುವುದು, ವ್ಯಾಪಾರ ಪರವಾನಿಗೆಯನ್ನು ನವೀಕರಿಸುವುದು, ಪರವಾನಿಗೆಯನ್ನು ರದ್ದುಪಡಿಸುವುದು, ಪರವಾನಿಗೆಯನ್ನು ಮುದ್ರಿಸುವುದು, ವ್ಯಾಪಾರ ಅನುಮೋದಿಸುವುದು ಮತ್ತು ವೆಬ್ ಪೋರ್ಟಲ್ ಮೂಲಕ ಪರವಾನಿಗೆಯ ಸ್ಥಿತಿಯನ್ನು ಪತ್ತೆ ಹಚ್ಚುವ ಸೌಲಭ್ಯ  ಸಾರ್ವಜನಿಕರಿಗೆ ದೊರೆಯಲಿದೆ.

ಈ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ (KEONICS) ಸಂಸ್ಥೆಯ ವತಿಯಿಂದ ಉದ್ದಿಮೆ  ಪರವಾನಗಿಯ/ಸಾಫ್ಟ್‌ವೇರ್ ಸಿಸ್ಟಮ್ ಅಪ್ಲಿಕೇಷನ್ ಸಾಫ್ಟ್ ವೇರ್ ಸಿದ್ದಪಡಿಸಿ 2021-22 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗಿರುತ್ತದೆ. ಅದರಂತೆ ಕಳೆದ ಸಾಲಿನ ಉದ್ದಿಮೆದಾರರಿಂದ ಹಾಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿರುತ್ತದೆ. ಇದರಿಂದ ಪಾಲಿಕೆಗೆ ಉತ್ತಮ ಆದಾಯ ಮತ್ತು ಉದ್ದಿಮೆ ಪರವಾನಗಿಯ ಅಂಕಿಅಂಶಗಳ ಬಗ್ಗೆ ಕೂಡ ಸ್ಪಷ್ಟ ಮಾಹಿತಿಯನ್ನು ಪಡೆಯಲು ಸಾಧ್ಯ ವಾಗಿದೆ ಎಂದು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವ್ಯಾಪಾರಸ್ಥರಿಗೆ 2022-23ನೇ ಸಾಲಿನ ಉದ್ದಿಮೆ ಪರವಾನಿಗೆಯನ್ನು ನವೀಕರಣ ಮಾಡಲು ಇನ್ನಷ್ಟು ಸರಳಗೊಳಿಸಲು ಹಾಗು ಶೀಘ್ರದಲ್ಲಿ ಪರವಾನಿಗೆಯನ್ನು ಪಡೆಯಲು ಅನುಕೂಲವಾಗುವಂತೆ ಉದ್ದಿಮೆ ಪರವಾನಗಿಯ ಸಾಫ್ಟ್‌ವೇರ್ ಸಿಸ್ಟಮ್ ಅಪ್ಲಿಕೇಷನ್‌ನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ತರಲು ಪಾಲಕೆಯು ಉದ್ದೇಶಿಸಿದೆ.

ಪಾಲಿಕೆ ವ್ಯಾಪ್ತಿಗೆ ಬರುವ  ಪರವಾನಿಗೆ 2022-23 ನೇ ಸಾಲಿನ ನವೀಕರಣದ ಬಗ್ಗೆ ಸದರಿ ಸಾಲಿನಲ್ಲಿ online ತಂತ್ರಾಂಶದಲ್ಲಿ ಕೆಳಕಂಡ ಪ್ರಕ್ರಿಯೆಗಳು ಇರುತ್ತದೆ ಎಂದು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

ಮನಪಾ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ದ ಬಗ್ಗೆ ಮಾಹಿತಿ ಸಂಗ್ರಹ ದೊಂದಿಗೆ ಇನ್ನಷ್ಟು ಸುಧಾರಣೆಯಾಗಲಿದೆ. ಕಸವಿಲೇವಾರಿ ನಿರ್ವಹಣೆ ಗೆ ಹೊಸ ಡಿಪಿಆರ್ ತಯಾರಿಸಿ ಸರಕಾರದ ಅನುಮೋದನೆ ಗೆ ಸಲ್ಲಿಸಲಾಗಿದೆ ಎಂದು ಮೇಯರ್  ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮನಪಾ ಉಪ ಮೇಯರ್ ಸುಮಂಗಲರಾವ್, ಆಯುಕ್ತ ಅಕ್ಷಯ್ ಶ್ರೀಧರ್, ಮನಪಾ ಸ್ಥಾಯಿ ಸಮಿತಿ ಅಧಕ್ಷರಾದ ಶೋಭಾ ರಾಜೇಶ್,‌‌ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X