Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೋನಿ ಚಾನಲ್ ನ ಶಾರ್ಕ್ ಟ್ಯಾಂಕ್ ನಲ್ಲಿ...

ಸೋನಿ ಚಾನಲ್ ನ ಶಾರ್ಕ್ ಟ್ಯಾಂಕ್ ನಲ್ಲಿ ಮಂಗಳೂರಿನ ಝಮ್ ಜ್ಹೀರ್, ರೂಹಿ ದಂಪತಿಯ ಕುನಾಫ ವರ್ಲ್ಡ್!

ಬುಧವಾರ ರಾತ್ರಿ 9ಕ್ಕೆ ಪ್ರಸಾರ

ವಾರ್ತಾಭಾರತಿವಾರ್ತಾಭಾರತಿ26 Jan 2022 11:46 AM IST
share
ಸೋನಿ ಚಾನಲ್ ನ ಶಾರ್ಕ್ ಟ್ಯಾಂಕ್ ನಲ್ಲಿ ಮಂಗಳೂರಿನ ಝಮ್ ಜ್ಹೀರ್, ರೂಹಿ ದಂಪತಿಯ ಕುನಾಫ ವರ್ಲ್ಡ್!

ಮಂಗಳೂರು: ಮಂಗಳೂರಿನ ಒಂದು ದಂಪತಿ ಮತ್ತು ಅವರ ನವೋದ್ಯಮ (ಸ್ಟಾರ್ಟ್ ಅಪ್) ಇಂದು ರಾತ್ರಿ 9 ಗಂಟೆಗೆ ಸೋನಿ ಚಾನಲ್ ಮತ್ತು ಸೋನಿ LIV app ನ ಶಾರ್ಕ್ ಟ್ಯಾಂಕ್ ಶೋ ದಲ್ಲಿ ಪ್ರಸ್ತುತಗೊಳ್ಳಲಿದೆ. ಈ ಶಾರ್ಕ್ ಟ್ಯಾಂಕ್ ವೇದಿಕೆಯು ಭಾರತದ ಉದಯೋನ್ಮುಖ ಯುವ ಉದ್ಯಮಿಗಳಿಗೆ ತಮ್ಮ ಉದ್ಯಮ ಪರಿಕಲ್ಪನೆಗಳನ್ನು ಪ್ರಸ್ತುತ ಪಡಿಸಿ ತಮ್ಮ ಉದ್ಯಮದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರನ್ನು ಉತ್ತೇಜಿಸುತ್ತದೆ.

ಮಂಗಳೂರಿನ ದಂಪತಿ ಝಮ್ ಜ್ಹೀರ್ ಮತ್ತು ಜಮೀಲಾ ರೂಹಿ ತಮ್ಮ ಸ್ಟಾರ್ಟ್-ಅಪ್ "ಕುನಾಫ ವರ್ಲ್ಡ್'' ಅನ್ನು ಈ ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಿದ್ದಾರೆ. ದಂಪತಿಯ ಈ ನವೋದ್ಯಮವು 2018ರಲ್ಲಿ ಕೇವಲ ಒಂದು ಫೇಸ್ಬುಕ್ ಪುಟದ ಮೂಲಕ ಮಂಗಳೂರಿನಲ್ಲಿ ಸ್ಥಾಪನೆಗೊಂಡಿತ್ತು. ಇಂದು ಕುನಾಫ ವರ್ಲ್ಡ್ ಒಂದು ರಾಷ್ಟ್ರೀಯ ಮಟ್ಟದ ಬ್ರ್ಯಾಂಡ್ ಆಗಿದ್ದು ಬೆಂಗಳೂರು ಕೇರಳ, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಮಳಿಗೆಗಳನ್ನು ಹೊಂದಿದೆ.

ಮೂಲತಃ ಗೃಹಿಣಿಯಾಗಿರುವ ರೂಹಿ ಅವರಿಗೆ ಡೆಸ್ಸರ್ಟ್ಸ್ (ಸಿಹಿ ತಿಂಡಿಗಳನ್ನು) ತಯಾರಿಸುವುದೆಂದರೆ ಅಚ್ಚುಮೆಚ್ಚು. ಅವರ ಪರಿಕಲ್ಪನೆಯಿಂದ ಹುಟ್ಟಿಕೊಂಡ ಕುನಾಫ ವರ್ಲ್ಡ್ ನಲ್ಲಿ ಮಧ್ಯ-ಪ್ರಾಚ್ಯದ ಸಿಹಿತಿನಿಸುಗಳನ್ನು ಭಾರತಕ್ಕೆ ಪರಿಚಯಿಸಲಾಗಿದೆ. ಒಮ್ಮೆ ರೂಹಿ ಇಂತಹ ತಿಂಡಿಗಳನ್ನು ಸಿದ್ಧಪಡಿಸಿ ಝಮ್ ಜ್ಹೀರ್ ಅವರಿಗೆ ತಯಾರಿಸಿ ನೀಡಿದಾಗ ಅದರ ರುಚಿಯಿಂದ ಬಾಯಿಚಪ್ಪರಿಸಿದ ಝಮ್ ಜ್ಹೀರ್ ಪತ್ನಿಗೆ ಪ್ರೋತ್ಸಾಹ ನೀಡಿದ್ದರು.

ಹೀಗೆ ತಮ್ಮ ಫೇಸ್ಬುಕ್ ಪುಟ ‘ಬೇಕ್ ಏಂಜೆಲ್' ಮೂಲಕ ರೂಹಿ ತಮ್ಮ ಉದ್ಯಮ ಆರಂಭಿಸಿದ್ದರೆ ಅವರ ಪತಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಕೆಲಸ ಮಾಡಿದ್ದಾರೆ. ಒಂದು ವರ್ಷದ ನಂತರ ಝಮ್ ಜ್ಹೀರ್ ಅವರ ಸ್ನೇಹಿತ ಮುಹಮ್ಮದ್ ಹಫೀಝ್ ಅವರ ಪಾಲುದಾರಿಕೆಯಲ್ಲಿ ಮಂಗಳೂರಿನಲ್ಲಿ ಮೊದಲ ಮಳಿಗೆ ತೆರೆಯಲಾಯಿತು. ಈಗ ಅವರ ಕುನಾಫ ವರ್ಲ್ಡ್ ಮನೆಮಾತಾಗಿದೆ. ರೂಹಿ ಅವರು ಉತ್ಪನ್ನಗಳ ಪೂರೈಕೆ ಮತ್ತು ಸಂಸ್ಥೆಯ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡರೆ ಝಮ್ ಜ್ಹೀರ್ ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್‌ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

``ದೇಶಾದ್ಯಂತದ 69,000ಕ್ಕೂ ಅಧಿಕ ಅರ್ಜಿದಾರರ ಪೈಕಿ ಸೋನಿ ಟಿವಿಯ ಶಾರ್ಕ್ ಟ್ಯಾಂಕ್ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದೇ ನಮಗೆ ಮತ್ತು ನಮ್ಮ ಕುನಾಫ ವರ್ಲ್ಡ್ ಪಾಲಿಗೆ ದೊಡ್ಡ ಸಾಧನೆ. ಮಂಗಳೂರಿನಿಂದ ಆರಂಭಗೊಂಡು ಈಗ ದೇಶಾದ್ಯಂತ ನಮ್ಮ ಉದ್ಯಮ ಯಶಸ್ಸು ಸಾಧಿಸಿದೆ. ನಮ್ಮ ಈ ಪಯಣದಲ್ಲಿ ನಮಗೆ ಬೆಂಬಲ ನೀಡಿದ ನಮ್ಮ ಕುಟುಂಬ, ಸ್ನೇಹಿತರು, ಹಿತೈಷಿಗಳಿಗೆ ನಾವು ಆಭಾರಿ,'' ಎಂದು ದಂಪತಿ ವಾರ್ತಾ ಭಾರತಿಯೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X